![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 5, 2021, 2:02 PM IST
ಬೆಂಗಳೂರು : ಅಧಿಕಾರಿಗಳನ್ನ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರ ಕಂಟ್ರೋಲ್ ಗೆ ತೆಗೆದುಕೊಳ್ಳಬಹುದು. ರೋಹಿಣಿ ಸಿಂಧೂರಿ ನಾನು ಸಚಿವನಾಗಿದ್ದ ಸಂದರ್ಭದಲ್ಲಿ ಕೆಲಸ ಮಾಡಿದ್ದಾರೆ. ಮಹಾಮಸ್ತಕಾಭಿಷೇಕ ಉತ್ಸವದಲ್ಲಿ ಸಂದರ್ಭದಲ್ಲಿ ನಾನು ನೋಡಿದ್ದೇನೆ. ನಿರ್ವಹಣೆ ಮಾಡುವ ಸಂದರ್ಭದಲ್ಲಿ ಜನಪ್ರತಿನಿಧಿಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಶಿಲ್ಪನಾಗ್-ರೋಹಿಣಿ ಸಿಂಧೂರಿ ಜಟಾಪಟಿ ವಿಚಾರವಾಗಿ ಮಾಜಿ ಸಚಿವ ಎ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ.
ಡಿಸಿ ಅಂದ್ರೆ ಜಿಲ್ಲೆಯ ಮೊದಲ ಸೇವಕರು. ಎಲ್ಲ ಅಧಿಕಾರಿಗಳು ಇಷ್ಟ ಬಂದಹಾಗೆ ಕೆಲಸ ಮಾಡಲು ಅವಕಾಶವಿಲ್ಲ. ನನ್ನ ಅವಧಿಯಲ್ಲಿ ಕೆಲಸ ಮಾಡುವಾಗ ಕೆಲವು ತಪ್ಪುಗಳನ್ನ ತಿದ್ದಿ ತಿಳಿ ಹೇಳಿದ್ದೆ. ಜನರು ಬರುವಾಗ ಕಾಲ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದು ಬೇಡ ಗೌರವ ಕೊಡಬೇಕು ಎಂದು ಹೇಳಿದ್ದೆ ಎಂದರು.
ಈ ಬಗ್ಗೆ ಚೀಫ್ ಸೆಕರೇಟರಿ, ಸಿಎಂ ಗಮನಕ್ಕೂ ತಂದಿದ್ದೆ. ಹಾಸನಕ್ಕೆ ಸಿಎಂ ಸಿದ್ದರಾಮಯ್ಯ ಬಂದಿದ್ದಾಗ ಅವರನ್ನ ಆಹ್ವಾನ ಮಾಡಲು ಪ್ರೋಟೋಕಾಲ್ ಪ್ರಕಾರ ಡಿಸಿ ಅವರು ಬರಬೇಕಿತ್ತು, ಆದ್ರೆ ರೋಹಿಣಿ ಸಿಂಧೂರಿ ಬರಲಿಲ್ಲ, ಆಗ ಸಿದ್ದರಾಮಯ್ಯಗೆ ವರ್ಗಾವಣೆ ಮಾಡುವಂತೆ ಹೇಳಿದ್ದೆ. ನಂತರದ ಚುನಾವಣೆಯಲ್ಲಿ ನಾನು ಸೋತೆ, ಅವರ ಪರ ಯಾರಿದ್ದಾರೋ ಅವ್ರೇ ಅವರನ್ನ ವರ್ಗಾವಣೆ ಮಾಡುವಂತೆ ಒತ್ತಾಯಿಸಲು ಮುಂದಾದರು ಎಂದರು.
ಚುನಾಯಿತ ಪ್ರತಿನಿಧಿಗಳೊಂದಿಗೆ ಅಗೌರವದೊಂದಿಗೆ ನಡೆದುಕೊಳ್ಳುವುದು ಸರಿಯಿಲ್ಲ. ಎಲ್ಲವೂ ನನಗೆ ಗೊತ್ತಿದೆ,ನಾನ್ ಹೇಳಿದ್ದೆ ಆಗಬೇಕು ಅನ್ನೋದು ಸರಿಯಲ್ಲ. ಕೊರೊನ ಸಂಕಷ್ಟದಲ್ಲಿ ಸ್ವಿಮ್ಮಿಂಗ್ ಪೂಲ್ ಅವಶ್ಯಕತೆ ಇತ್ತ..? ರಾಜ್ಯದಲ್ಲಿ 20 ಏರಿಟೇಜ್ ಸಿಟಿಗಳಿವೆ, ಈ ಪೈಕಿ ಮೈಸೂರು ಒಂದು. ಈ ವಿಚಾರ ಚರ್ಚೆಗೆ ಬಂದಮೇಲೆ ಸರ್ಕಾರ ಕೇಳಬೇಕಿತ್ತು, ಮೈಸೂರಿನಲ್ಲಿ ಮಾಜಿ ಸಚಿವ ಎ. ಮಂಜು ಹೇಳಿಕೆ ನೀಡಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.