![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
Team Udayavani, Jun 5, 2021, 6:32 PM IST
ಮೈಸೂರು: ಮೈಸೂರು ನಾಗರೀಕರ ವೇದಿಕೆಯುಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರಸ್ವಾಮೀಜಿ ಮೂಲಕ ಜಿಲ್ಲಾಡಳಿತಕ್ಕೆ 5 ಸಾವಿರಔಷಧ ಕಿಟ್ ಹಸ್ತಾಂತರಿಸಿತು.ಶುಕ್ರವಾರ ನಗರದ ಸುತ್ತೂರು ಶಾಖಾಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ಅವರಿಗೆ ಶ್ರೀಗಳು ಕಿಟ್ ಹಸ್ತಾಂತರಿಸಿದರು.
ವೇದಿಕೆಯ ಸದಸ್ಯ ವಾಸುದೇವ ಭಟ್ಮಾತನಾಡಿ, ಕೋವಿಡ್ ಸಂಕಷ್ಟದ ಪರಿಸ್ಥಿತಿಎದುರಿಸಲು ನೆರವು ನೀಡಿ ಎಂದು ಸಚಿವ ಎಸ್.ಟಿ. ಸೋಮಶೇಖರ್ ಕೋರಿದ್ದರು. ಆ ವೇಳೆನಾವು 15 ಸಾವಿರ ಔಷಧ ಕಿಟ್ ನೀಡಲು ನಗರಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಜತೆ ಚರ್ಚಿಸಿದೆವು.
ಆದರೆ ಅವರು ಸದ್ಯಕ್ಕೆ 5 ಸಾವಿರ ಕಿಟ್ಗಳು ಸಾಕುಎಂದ ಕಾರಣ 5 ಸಾವಿರ ಕಿಟ್ ನೀಡುತ್ತಿದ್ದೇವೆಎಂದರು.ಔಷಧ ಕಿಟ್ನಲ್ಲಿ 5 ಮಾಸ್ಕ್ಗಳು, ಐವರಿಮೆಕ್ಟಿನ್, ವಿಟಮಿನ್ ಸಿ ಮಾತ್ರೆಗಳು, ಯಾವಾಗಯಾವ ಮಾತ್ರೆ ತೆಗೆದುಕೊಳ್ಳಬೇಕು ಎಂಬ ಮಾಹಿತಿಹೊಂದಿರುವ ಔಷಧದ ಚೀಟಿ ಇದೆ. ಶೀಘ್ರ ಮತ್ತೆ10 ಸಾವಿರ ಕಿಟ್ ನೀಡಲಾಗುವುದು ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಜಿಲ್ಲೆಯಲ್ಲಿ ಸಂಘಸಂಸ್ಥೆಗಳು ಸಾಕಷ್ಟು ಸಂಖ್ಯೆಯಲ್ಲಿ ನೆರವುನೀಡುತ್ತಿರುವುದು ಸಂತಸದ ವಿಚಾರ ಎಂದರು.ಸುತ್ತೂರು ಶ್ರೀಗಳು ಮಾತನಾಡಿ, ಜಿಲ್ಲೆಯಲ್ಲಿಇತ್ತೀಚೆಗೆ ಕೋವಿಡ್ ಸೋಂಕು ಅಲ್ಪ ಪ್ರಮಾಣದಲ್ಲಿಕಡಿಮೆಯಾಗಿದೆ
. ಇದು ಕೊನೆಗೊಳ್ಳುವ ತನಕಪ್ರತಿಯೊಬ್ಬರು ಎಚ್ಚರಿಕೆಯಿಂದ ಇರಬೇಕುಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ,ಶಾಸಕ ಎಸ್.ಎ. ರಾಮದಾಸ್, ತನ್ವೀರ್ಸೇs…,ಜಿ.ಟಿ. ದೇವೇಗೌಡ, ಎಂಡಿಎ ಅಧ್ಯಕ್ಷ ಎಚ್.ವಿ.ರಾಜೀವ್, ಮೈಲ್ಯಾಕ್ ಅಧ್ಯಕ್ಷ ಎನ್.ವಿ. ಫಣೀಶ್,ರಾಜ್ಯ ಕಾಂಪೋಸ್ಟ್ ನಿಗಮದ ಅಧ್ಯಕ್ಷ ಎಸ್.ಮಹದೇವಯ್ಯ, ಮೃಗಾಲಯ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಡಾ. ಬೆಟಸೂರಮs…ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
You seem to have an Ad Blocker on.
To continue reading, please turn it off or whitelist Udayavani.