ಕನ್ನಡ, ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿ ಕೆಲಸ ಮಾಡುತ್ತಿವೆ:ಎಚ್ ಡಿಕೆ ಕಿಡಿ


Team Udayavani, Jun 6, 2021, 9:33 AM IST

ಕನ್ನಡ, ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿ ಕೆಲಸ ಮಾಡುತ್ತಿವೆ:ಎಚ್ ಡಿಕೆ ಕಿಡಿ

ಬೆಂಗಳೂರು: ‘ಕನ್ನಡ ಕೆಟ್ಟ ಭಾಷೆ’ ಎಂಬ ವಿಚಾರ ಗೂಗಲ್‌ನಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಅಮೆಜಾನ್ ಕರ್ನಾಟಕಕ್ಕೆ ಅವಮಾನಿಸಿದ ಘಟನೆಯೂ ಬಯಲಾಗಿರುವುದನ್ನು ಗಮನಿಸುತ್ತಿದ್ದರೆ, ಕನ್ನಡ, ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿ ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ. ಜನಸಮುದಾಯವೊಂದರ ಭಾವನೆಗಳ ಜೊತೆಗೆ ಆಟವಾಡುತ್ತಿರುವವರನ್ನು ಪತ್ತೆ ಹಚ್ಚುವ ಸಂದರ್ಭ ಈಗ ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಒಳ ಉಡುಪುಗಳ ಮೇಲೆ ಕನ್ನಡ ಧ್ವಜ ಬಣ್ಣ ಮತ್ತು ರಾಜ್ಯ ಸರ್ಕಾರದ ಲಾಂಛನವನ್ನು ಮುದ್ರಿಸಿದ ಅಮೆಜಾನ್ ನ ನಡೆಗೆ ಟ್ವಿಟರ್ ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡದ ಧ್ವಜವನ್ನು ಅಪಮಾನಿಸಿದ ಕೆನಡಾದ ಅಮೆಜಾನ್ ಗೆ ಕನ್ನಡಿಗರು ಬಿಸಿ ಮುಟ್ಟಿಸಿದ್ದಾರೆ. ಅಮೆಜಾನ್‌ ತನ್ನ ತಪ್ಪು ಸರಿಪಡಿಸಿಕೊಂಡಿದೆ. ಕನ್ನಡವನ್ನು ಅವಮಾನಿಸಿದ ಗೂಗಲ್‌ಗೆ ಪಾಠ ಕಲಿಸಿದ್ದು, ಈಗ ಅಮೆಜಾನ್‌ಗೆ ಬುದ್ಧಿ ಕಲಿಸಿದ್ದರಲ್ಲಿ ಎದ್ದು ಕಾಣುವಂಥದ್ದು ಕನ್ನಡಿಗರ ‘ಅಭಿಮಾನ’. ಅದಕ್ಕಾಗಿ ಕನ್ನಡದ ಮನಸ್ಸುಗಳನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ:ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಜೀವ ಉಳಿಸಿತು14,000 ಕಿ.ಮೀ ದೂರದಿಂದ ಬಂದ ಫೋನ್ ಕರೆ..!

ಕನ್ನಡ, ಕರ್ನಾಟಕದ ವಿಚಾರದಲ್ಲಿ ಇತ್ತೀಚೆಗೆ ಬಹುರಾಷ್ಟ್ರೀಯ ಕಂಪನಿಗಳು ಅತ್ಯಂತ ಅಜಾಗರೂಕವಾಗಿ, ಅಸೂಕ್ಷ್ಮವಾಗಿ ವರ್ತಿಸುತ್ತಿವೆ. ಗೂಗಲ್ ನಂತರ ಈಗ ಅಮೆಜಾನ್ ಕೆನಡಾ ವಿಭಾಗ ನಿರ್ಲಕ್ಷ್ಯ ಮೆರೆದಿದೆ. ಈ ಸಂಸ್ಥೆಗಳು ಭಾಷೆ ಮತ್ತು ಭಾವನೆಗಳ ವಿಚಾರದಲ್ಲಿ ಯಾಕಿಂಥ ನಿರ್ಲಕ್ಷ್ಯ ವಹಿಸುತ್ತಿವೆ? ಈ ಬಗ್ಗೆ ಅಮೆಜಾನ್ ಪ್ರತಿಕ್ರಿಯೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಬಾವುಟದ ಜೊತೆಗೇ, ಕರ್ನಾಟಕದ ರಾಜ ಲಾಂಛನವನ್ನೂ ಅಮೆಜಾನ್‌ ಅಮಾನಿಸಿದೆ. ಇದು ಸರ್ಕಾರಕ್ಕೆ ಮಾಡಲಾದ ಅಪಮಾನ. ಸರ್ಕಾರ ಸಂವಿಧಾನದ ಅಂಗ. ಹೀಗಾಗಿ ಅಮೆಜಾನ್ ನಿಂದ ಬಹುದೊಡ್ಡ ಅಪಚಾರವಾಗಿದೆ. ಅಮೆಜಾನ್‌ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವೇ ಎಂಬುದರತ್ತ ರಾಜ್ಯ ಸರ್ಕಾರ ಗಮನ ಹರಿಸಬೇಕು. ಮುಂದೆ ಇಂಥ ಮುಜುಗರ ತಪ್ಪಿಸಲು ಇದು ಅಗತ್ಯ. ಇಂಥ ಅಪಮಾನಗಳ ಮೂಲಕ ಕನ್ನಡಿಗರ ಸಹನೆ ಕೆಣಕುವ ಕೆಲಸ ಇಂಥ ಸಂಸ್ಥೆಗಳಿಂದ ಆಗುತ್ತಲೇ ಇವೆ. ಕನ್ನಡಿಗರ ಕೋಪದಿಂದ ಸಿಡಿಯುವ ಕಿಡಿಯಿಂದ ಅನಾಹುತಗಳು ಸಂಭವಿಸಿದರೆ, ಅದನ್ನು ತಾಳಿಕೊಳ್ಳುವ ಶಕ್ತಿ ಈ ಸಂಸ್ಥೆಗಳಿಗೆ ಉಳಿಯಲಾರದು. ಪರಿಸ್ಥಿತಿ ಅಲ್ಲಿಗೆ ಹೋಗುವ ಮೊದಲು ಅಮೆಜಾನ್ ಜಾಗತಿಕವಾಗಿ ಕ್ಷಮೆ ಕೋರಬೇಕು. ತಪ್ಪಿತಸ್ಥರನ್ನು ಹಿಡಿದುಕೊಡಬೇಕು ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.