ಸಿಎಂ ನಿಧಿಗೆ ಡಿಸಿಸಿಬಿಯಿಂದ 50 ಲಕ್ಷ ರೂ. ದೇಣಿಗೆ


Team Udayavani, Jun 6, 2021, 9:54 PM IST

6-20

ಶಿವಮೊಗ್ಗ: ಕೊರೊನಾ 2ನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕಿಗೆ ಒಳಗಾದ ರಾಜ್ಯದ ನಾಗರಿಕರಿಗೆ ಪರಿಹಾರ ಕಲ್ಪಿಸುವ ಸಲುವಾಗಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಗೆ 50 ಲಕ್ಷ ರೂ. ದೇಣಿಗೆ ನೀಡಲಾಗಿದೆ ಎಂದು ಬ್ಯಾಂಕ್‌ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರ ಕೇಂದ್ರ ಬ್ಯಾಂಕ್‌ ಜಿಲ್ಲೆಯ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು, ಇತರೆ ಕೃಷಿ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘಗಳು ಹಾಗೂ ಬ್ಯಾಂಕಿನ ನೌಕರರಿಂದ 50 ಲಕ್ಷ ರೂ. ಸಂಗ್ರಹಣೆ ಮಾಡಿ ಮುಖ್ಯಮಂತ್ರಿಗಳ ಪರಿಹಾರ ನಿ ಧಿಗೆ ನೀಡಲಾಗುತ್ತಿದೆ ಎಂದರು.

ನೀಡಿರುವ ದೇಣಿಗೆಯನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಸಂಕಷ್ಟಕ್ಕೀಡಾಗಿರುವ ನಾಗರಿಕರ ಅನುಕೂಲಕ್ಕೆ ವಿನಿಯೋಗಿಸುವಂತೆ ಜಿಲ್ಲೆಯ ಎಲ್ಲಾ ಸಹಕಾರಿ ಸಂಸ್ಥೆಗಳ ಪರವಾಗಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳಲಾಗುತ್ತದೆ ಎಂದರು.

ಕೊರೋನಾ ಸಂಕಷ್ಟದ ಸಂದರ್ಭದಲ್ಲಿಯೂ ಸಹಾ ಗ್ರಾಮೀಣ ಭಾಗದ ರೈತರಿಗೆ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಬ್ಯಾಂಕಿನಿಂದ ಒಟ್ಟು 65156 ಸದಸ್ಯರಿಗೆ 656.20 ಕೋಟಿ ರೂ. ಅಲ್ಪಾವ ಧಿ ಕೃಷಿ ಬೆಳೆ ಸಾಲ ಒದಗಿಸಲಾಗಿದೆ. ವಿಶೇಷವಾಗಿ ಹೊಸ 5002 ರೈತ ಸದಸ್ಯರಿಗೆ 50.12ಕೋಟಿ ರೂ. ಅಲ್ಪಾವ ಧಿ ಕೃಷಿ ಬೆಳೆ ಸಾಲ ವಿತರಣೆ ಮಾಡಲಾಗಿದೆ ಎಂದರು.

ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಭಾಗದ ಮಹಿಳೆಯರಿಗೆ ಪ್ರಸಕ್ತ ಸಾಲಿನಲ್ಲಿ ಒಟ್ಟು 870 ಸ್ವ ಸಹಾಯ ಗುಂಪುಗಳಿಗೆ 31.88 ಕೋಟಿ ರೂ. ಸಾಲ ನೀಡಲಾಗಿದೆ ಹಾಗೂ ಸರ್ಕಾರದ ಕಾಯಕ ಯೋಜನೆಯಡಿ 10 ಲಕ್ಷ ರೂ. ವರೆಗೆ ಸಾಲ ನೀಡುತ್ತಿದ್ದು, 44 ಗುಂಪುಗಳಿಗೆ 3.21ಕೋಟಿ ರೂ. ಸಾಲ ನೀಡಲಾಗಿದೆ ಎಂದರು.

ಕೇಂದ್ರ ಸರ್ಕಾರದ ಯೋಜನೆಯಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಶೂನ್ಯ ಬಡ್ಡಿ ದರದಲ್ಲಿ ಹೈನುಗಾರಿಕೆ ಉದ್ದೇಶಕ್ಕಾಗಿ 678 ಸದಸ್ಯರಿಗೆ 1.10 ಕೋಟಿ ರೂ. ಕೆಸಿಸಿ ಸಾಲ ನೀಡಲಾಗಿದೆ. ಜಿಲ್ಲೆಯ ನಾಗರಿಕರು ಕೊರೊನಾ 2ನೇ ಅಲೆಯಿಂದ ಸಂಕಷ್ಟದಲ್ಲಿರುವ ಕಾರಣ ಬ್ಯಾಂಕಿನಿಂದ ನೀಡಲಾಗುತ್ತಿರುವ ಕೃಷಿಯೇತರ ಸಾಲಗಳ ಬಡ್ಡಿ ದರದಲ್ಲಿ ಕಡಿತಗೊಳಿಸಲಾಗಿದೆ. ಸದರಿ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡರು. ಡಿಸಿಸಿ ಬ್ಯಾಂಕ್‌ನ ಎಲ್ಲಾ ನೌಕರರಿಗೆ ಮತ್ತು ಇತರೆ ಆದ್ಯತಾ ವಲಯದ ನೌಕರರಿಗೆ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿಯೇ ಕಳೆದ ಗುರುವಾರ ವ್ಯಾಕ್ಸಿನ್‌ ಕೊಡಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್‌ನ ಉಪಾಧ್ಯಕ್ಷ ಎಚ್‌.ಎಲ್‌.ಷಡಾಕ್ಷರಿ, ನಿರ್ದೇಶಕರಾದ ಎಸ್‌.ಪಿ. ದಿನೇಶ್‌, ಬಿ.ಡಿ.ಭೂಕಾಂತ್‌, ಜಿ.ಎನ್‌. ಸು ಧೀರ್‌, ಎಂ.ಎಂ.ಪರಮೇಶ್‌, ಅಪೆಕ್ಸ್‌ ಬ್ಯಾಂಕ್‌ನ ಪ್ರತಿನಿಧಿ  ಶ್ರೀಧರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

14

Kannada Sahitya Ranga: ಅಮೆರಿಕದಲ್ಲಿ ವಸಂತೋತ್ಸವ; ಕನ್ನಡ‌ ಸಾಹಿತ್ಯ ರಂಗದ ಸಾರ್ಥಕ ಸೇವೆ

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

Operation ಥಿಯೇಟರ್‌ ಒಳಗೆ ಏನು ನಡೆಯುತ್ತದೆ?

Operation ಥಿಯೇಟರ್‌ ಒಳಗೆ ಏನು ನಡೆಯುತ್ತದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.