![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 7, 2021, 1:43 PM IST
ಹಾವೇರಿ: ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಬಗ್ಗೆ ಇವತ್ತು ಟಾಸ್ಕ್ ಫೋರ್ಸ್ ಸಭೆ ಇದೆ. ಅದಾದ ಮೇಲೆ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಹಿರಿಯ ಸಚಿವರು, ಹಿರಿಯ ಅಧಿಕಾರಿಗಳ ಸಭೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಸಡಿಲಿಕೆಯ ಬಗ್ಗೆ ಹಲವಾರು ಸಲಹೆ, ಸೂಚನೆಗಳು ಬರುತ್ತಿವೆ. ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಬೇಕೆಂಬ ಸಲಹೆಗಳು ಬಂದಿವೆ. ಎಲ್ಲವನ್ನೂ ನೋಡಿ ಸಿಎಂ ಅಂತಿಮವಾದ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಇದನ್ನೂ ಓದಿ:ಭಿಕ್ಷೆ ಬೇಡಿ ಮಂತ್ರಿಯಾದವರು ಯಡಿಯೂರಪ್ಪ ಬಗ್ಗೆ ಮಾತನಾಡುತ್ತಾರೆ: ರೇಣುಕಾಚಾರ್ಯ ಕಿಡಿ
ಸಿಎಂ ರಾಜೀನಾಮೆ ವಿಚಾರವಾಗಿ ಮಾತನಾಡಿದ ಅವರು, ಯಡಿಯೂರಪ್ಪನವರು ನಮ್ಮ ಸರ್ವಸಮ್ಮತ ನಾಯಕರು. ಅದರ ಬಗ್ಗೆ ಯಾವುದೇ ಪ್ರಶ್ನೆಗಳಿಲ್ಲ. ನಮ್ಮ ಕೇಂದ್ರದ ಸಚಿವರು, ಅಧ್ಯಕ್ಷರು ಹೇಳಿದ ಮೇಲೆ ಅದೇ ಅಂತಿಮ. ಈಗಾಗಲೇ ಚರ್ಚೆಯಾಗಿದೆ. ನಾನು ನಿನ್ನೆಯೇ ಅದರ ಬಗ್ಗೆ ಹೇಳಿದ್ದೇನೆ ಎಂದರು.
You seem to have an Ad Blocker on.
To continue reading, please turn it off or whitelist Udayavani.