![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Jun 7, 2021, 6:15 PM IST
ವರದಿ: ಹೇಮರಡ್ಡಿ ಸೈದಾಪುರ
ಹುಬ್ಬಳ್ಳಿ: ಕೋವಿಡ್ ಮೊದಲ ಅಲೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 31 ಸಿಬ್ಬಂದಿ ಮೃತಪಟ್ಟಿದ್ದು, ಅವರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಇದೀಗ ಎರಡನೇ ಅಲೆಯ ತೀವ್ರತೆಗೆ ಸಂಸ್ಥೆಯ 40 ಸಿಬ್ಬಂದಿ ಬಲಿಯಾಗಿದ್ದಾರೆ.
ವೇತನಕ್ಕೆ ಪರದಾಡುವ ಪರಿಸ್ಥಿತಿಯಲ್ಲಿ ಪರಿಹಾರ ದೂರದ ಮಾತಾಗಿದ್ದು, ಸರಕಾರದತ್ತ ಮುಖ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರು, ಸಂಚಾರ ನಿರೀಕ್ಷಕರು ಸಾರ್ವಜನಿಕರ ಮಧ್ಯೆಯೇ ಇರುವುದರಿಂದ ಸೋಂಕಿಗೆ ಒಳಗಾಗುವುದು ಹೆಚ್ಚು. ಎಷ್ಟೇ ಜಾಗರೂಕತೆ ವಹಿಸಿದರೂ 500ಕ್ಕೂ ಹೆಚ್ಚು ಸಿಬ್ಬಂದಿಗೆ ಸೋಂಕು ವಕ್ಕರಿಸಿದೆ.
ಏ. 1ರಿಂದ ಜೂ.2ರವರೆಗೆ 501 ಸಿಬ್ಬಂದಿ, ಅಧಿಕಾರಿಗಳು ಕೊರೊನಾಗೆ ತುತ್ತಾಗಿದ್ದು, ಇದರಲ್ಲಿ 295 ಜನರು ಗುಣಮುಖರಾಗಿದ್ದಾರೆ.
ಇನ್ನೂ 166 ಸಿಬ್ಬಂದಿ ಚಿಕಿತ್ಸೆಯಲ್ಲಿದ್ದಾರೆ. ಎರಡು ತಿಂಗಳಲ್ಲಿ ಬರೋಬ್ಬರಿ 40 ಸಿಬ್ಬಂದಿ ಸೋಂಕಿಗೆ ಬಲಿಯಾಗಿದ್ದಾರೆ. ನಿತ್ಯ 3-5 ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ.
ಮೊದಲ ಅಲೆಯದ್ದೇ ಪರಿಹಾರವಿಲ್ಲ: ಕೋವಿಡ್ ಲಾಕ್ಡೌನ್ ಪರಿಣಾಮ ಸಾರಿಗೆ ಸಂಸ್ಥೆಗಳು ತೀವ್ರ ಆರ್ಥಿಕ ಸಂಕಷ್ಟದಿಂದ ನಲುಗುತ್ತಿದ್ದು, ಮೃತ ಕೋವಿಡ್ ವಾರಿಯರ್ ಕುಟುಂಬಗಳಿಗೆ ಪರಿಹಾರ ನೀಡುವುದು ಸಂಕಷ್ಟವಾಗಿ ಪರಿಣಮಿಸಿದೆ.
ಕೊರೊನಾ ಮೊದಲ ಅಲೆ ಸಂದರ್ಭದಲ್ಲಿ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ 31 ಸಿಬ್ಬಂದಿ ಮೃತಪಟ್ಟಿದ್ದರು. ಆದರೆ ಒಂದು ವರ್ಷ ಕಳೆದರೂ ಒಬ್ಬರಿಗೂ ಪರಿಹಾರ ದೊರಕಿಲ್ಲ. ಕುಟುಂಬದ ಯಜಮಾನನನ್ನು ಕಳೆದುಕೊಂಡವರು ಜೀವನ ನಿರ್ವಹಣೆಗೋಸ್ಕರ ಪರಿಹಾರಕ್ಕಾಗಿ ಅಲೆದಾಡುವಂತಾಗಿದೆ. ಹೆಚ್ಚುತ್ತಿದೆ ಪರಿಹಾರ ಬಾಕಿ: ಎರಡನೇ ಅಲೆ ಸಂದರ್ಭದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಏ.1ರಿಂದ ಇಲ್ಲಿಯವರೆಗೆ ಸಂಸ್ಥೆಯಲ್ಲಿ 40 ಸಿಬ್ಬಂದಿ ಮೃತಪಟ್ಟಿದ್ದಾರೆ. ತಲಾ 30ಲಕ್ಷ ರೂ.ನಂತೆ ಒಟ್ಟು 12 ಕೋಟಿ ರೂ. ಪರಿಹಾರ ವಿತರಿಸಬೇಕಿದೆ.
ಬಾಗಲಕೋಟೆಯಲ್ಲಿ 130 ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಮಹಾರಾಷ್ಟ್ರ ಗಡಿ ಭಾಗದ ಬೆಳಗಾವಿ, ಚಿಕ್ಕೋಡಿ ವಿಭಾಗದಲ್ಲಿ ಸೋಂಕಿತರ ಹಾಗೂ ಮೃತಪಟ್ಟ ಸಿಬ್ಬಂದಿ ಸಂಖ್ಯೆ ಹೆಚ್ಚಿದೆ. ಮಹಾರಾಷ್ಟ್ರಕ್ಕೆ ಕರ್ತವ್ಯದ ಮೇಲೆ ಹೋಗಿ ಬರುತ್ತಿದ್ದ ಸಿಬ್ಬಂದಿಯೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಬಲಿಯಾಗಿದ್ದಾರೆಂದು ಅಂದಾಜಿಸಲಾಗಿದೆ. ಸರಕಾರದ ಮೇಲೆ ನಿರೀಕ್ಷೆ: ಸಂಸ್ಥೆಯ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿರುವುದರಿಂದ ಕೋವಿಡ್ನಿಂದ ಮೃತಪಟ್ಟ ಸಿಬ್ಬಂದಿ ಪರಿಹಾರಕ್ಕಾಗಿ ಸರಕಾರದತ್ತ ಮುಖ ಮಾಡಿದ್ದಾರೆ.
ಸರಕಾರ ಸಾರಿಗೆ ಸಂಸ್ಥೆಗಳ ನೌಕರರನ್ನು ಕೋವಿಡ್ ವಾರಿಯರ್ ಗಳೆಂದು ಪರಿಗಣಿಸಿರುವುದರಿಂದ ಸರಕಾರವೇ ಪರಿಹಾರ ಹಣ ನೀಡಬಹುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಮೊದಲ-ಎರಡನೇ ಅಲೆ ಸೇರಿ 71 ಸಿಬ್ಬಂದಿಗೆ ಒಟ್ಟು 21.30 ಕೋಟಿ ರೂ. ಸರಕಾರ ಪಾವತಿಸಬಹುದು ಎನ್ನುವ ಆಶಾ ಭಾವ ಅಧಿಕಾರಿಗಳಲ್ಲಿದೆ. ಸರಕಾರ ಒಂದು ವೇಳೆ ಪರಿಹಾರ ನೀಡಲು ಹಿಂದೇಟು ಹಾಕಿ ಸಂಸ್ಥೆಯ ಸಂಪನ್ಮೂಲದಿಂದಲೇ ಭರಿಸಬೇಕೆಂದು ಕೈ ಎತ್ತಿದರೆ ಸಾರಿಗೆ ಆದಾಯದ ಮೇಲೆ ಅವಲಂಬನೆಯಾಗಬೇಕಾಗುತ್ತದೆ.
ಸಾರಿಗೆ ಆದಾಯ ಇಲ್ಲದ ಪರಿಣಾಮ ಬ್ಯಾಂಕ್ ಸಾಲ, ಸಿಬ್ಬಂದಿ ವೇತನ, ಬಿಡಿಭಾಗಗಳ ಖರೀದಿ, ಇಂಧನ, ಗುತ್ತಿಗೆದಾರರ ಬಿಲ್ ಸೇರಿದಂತೆ ಸುಮಾರು 1000 ಕೋಟಿ ಬಾಕಿಯಿದೆ. ಇಂತಹ ಪರಿಸ್ಥಿತಿಯಲ್ಲಿ ಮೃತರ ಕುಟುಂಬಗಳಿಗೆ ಸಕಾಲದಲ್ಲಿ ಪರಿಹಾರ ದೊರೆಯುವುದು ಕಷ್ಟ ಕಷ್ಟ.
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.