ಸವದಿಯಿಂದ ನೇಕಾರರಿಗೆ ದ್ರೋಹ

ಮಾಜಿ ಸಚಿವೆ ಉಮಾಶ್ರೀ ವಿರುದ್ಧ ಏಕವಚನದ ಟೀಕೆಗೆ ಪ್ರತ್ಯುತ್ತರ | ನೇಕಾರರು ಮುಗ್ಧರು, ಮಳ್ಳರಲ್ಲ

Team Udayavani, Jun 7, 2021, 7:15 PM IST

6-mlp-1

ಮಹಾಲಿಂಗಪುರ: ಮಾಜಿ ಸಚಿವೆ, ಹಿರಿಯ ಕಲಾವಿದೆ ಉಮಾಶ್ರೀ ಅವರ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವ ತಾವು ಏಕವಚನದಲ್ಲಿ ಮಾತನಾಡುವುದು ಸರಿಯಲ್ಲ ತಮ್ಮ ಮಾತನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಪಕ್ಷಬೇಧ ಮರೆತು ನೇಕಾರರು ಒಂದಾಗಿ ತಮ್ಮ ಮನೆಯ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ನೇಕಾರ ಯುವ ಮುಖಂಡ ರಾಜೇಂದ್ರ ಭದ್ರಣ್ಣವರ ಹೇಳಿದರು.

ಶಾಸಕ ಸಿದ್ದು ಸವದಿಯವರು ಉಮಾಶ್ರೀ ವಿರುದ್ಧ ಏಕವಚನ ಮತ್ತು ಏನೂ ಕೆಲಸ ಮಾಡಿಲ್ಲ ಎಂಬ ಆರೋಪ ಕುರಿತು ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಕಾರರು ಮುಗ್ಧರು ಮಳ್ಳರಲ್ಲ. ನಾವು ಸುಮ್ಮನೆ ಕುಳಿತಿದ್ದೇವೆ ಎಂದರೆ ಕೈಗೆ ಬಳೆ ತೊಟ್ಟಿಲ್ಲ. ನೇಕಾರರು ಬಡವರಿರಬಹುದು ಆದರೆ ಸ್ವಾಭಿಮಾನಿಗಳು. ನೇಕಾರ ನಾಯಕಿಗೆ ಕೀಳು ಪದ ಬಳಸಿದರೆ ನಾವು ಸುಮ್ಮನಿರಲ್ಲ, ಬರುವ ಚುನಾವಣೆಯಲ್ಲಿ ನಾವು ಉಮಾಶ್ರೀಯವರ ಸಾಧನೆಗಳ ಬೋರ್ಡ್‌ ಹಾಕಿ ಚುನಾವಣೆ ಎದುರಿಸುತ್ತೇವೆ. ನಿಮಗೆ ಆ ತಾಕತ್‌ ಇದೆಯೇ ಎಂದು ಪ್ರಶ್ನಿಸಿದರು.

ಪಟ್ಟಣದ ನೇಕಾರ ಮುಖಂಡ ಮಲ್ಲಪ್ಪ ಭಾಂವಿಕಟ್ಟಿ ಮಾತನಾಡಿ, ಬಿಜೆಪಿ ಆಡಳಿತ ಅಚ್ಛೇ ದಿನ್‌ ಅಲ್ಲ ತುಚ್ಛೇ ದಿನ್‌. ಉಮಾಶ್ರೀಯವರ ಅ ಧಿಕಾರದಲ್ಲಿದ್ದಾಗ ಪವರ್ ಲೂಮ್‌ ಮಗ್ಗಗಳಿಗೆ ಸಬ್ಸಿಡಿ ವಿದ್ಯುತ್‌, ಸಾಲ ಮನ್ನಾ, ಸಹಕಾರಿ ನೂಲಿನ ಗಿರಣಿಗಳಿಗೆ ಸಹಾಯ ಧನ, ಜೇಡರ ದಾಸಿಮಯ್ಯ ಜಯಂತಿ 65 ಕೋಟಿ ಹಾಗೂ ಎರಡು ಎಕರೆ ಜಮೀನು ಹಾಗೂ ಸಮುದಾಯ ಭವನಗಳು ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದರು.

ನಗರ ಘಟಕದ ಅಧ್ಯಕ್ಷ ಈಶ್ವರ ಚಮಕೇರಿ ಮಾತನಾಡಿ, ಉಮಾಶ್ರೀ ಅಧಿ ಕಾರದಲ್ಲಿದ್ದಾಗ ನೇಕಾರ ಅಭಿವೃದ್ಧಿ ನಿಗಮಕ್ಕೆ ನೇಕಾರ ಸಮಾಜದ ರವೀಂದ್ರ ಕಲಬುರ್ಗಿಯವರನ್ನು ನೇಮಕ ಮಾಡಿ ನೇಕಾರರ ಮೇಲಿನ ಕಾಳಜಿ ಮೆರೆದಿದ್ದರು. ಆದರೆ ಶಾಸಕ ಸಿದ್ದು ಸವದಿ ಅವರು ಅ ಧಿಕಾರದಾಸೆಯಿಂದ ತಾವೇ ನಿಗಮದ ಅಧ್ಯಕ್ಷರಾಗಿ ನೇಕಾರ ಸಮುದಾಯಕ್ಕೆ ದ್ರೋಹ ಬಗೆದಿದ್ದಾರೆ ಎಂದರು.

ಸದಾಶಿವ ಗೋಲಕರ, ಶಂಕ್ರಪ್ಪ ಜಾಲಿಗಿಡದ, ನೀಲಕಂಠ ಮುತ್ತೂರ, ರಾಜೇಶ ಬಾವಿಗಿಡದ ಮಾತನಾಡಿದರು. ತೇರದಾಳ ಮತಕ್ಷೇತ್ರದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ, ಡಾ.ಯು.ಎಸ್‌. ವನಹಳ್ಳಿ, ಮಹಾದೇವ ಬರಗಿ, ರಾಜು ಭಾವಿಕಟ್ಟಿ, ಬಸವರಾಜ ಗುಡೋಡಗಿ, ಹೊಳೆಪ್ಪ ಬಾಡಗಿ, ಶಂಕರ ಸೊನ್ನದ, ಶ್ರೀಧರ ಪಿಸೆ, ಕಿರಣ ಕರಲಟ್ಟಿ, ವಿನೋದ ಸಿಂಪಿ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.