ರಸಗೊಬ್ಬರ-ಬೀಜ ಕೊರತೆ ಇಲ್ಲ
Team Udayavani, Jun 7, 2021, 10:43 PM IST
ಶಿವಮೊಗ್ಗ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು ಜಿಲ್ಲೆಯ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರ ಮತ್ತು ಬೀಜ ದಾಸ್ತಾನು ಇದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಕುರಿತು ಭಾನುವಾರ ಇಲ್ಲಿನ ಜಿಲ್ಲಾಡಳಿತ ಸಭಾಂಗಣದಲ್ಲಿ ಕೃಷಿ ಸಂಬಂಧಿ ತ ಇಲಾಖೆಗಳ ಅಧಿ ಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಅವರು ಮಾತನಾಡಿದರು. ಕೊರೊನಾ ಸೋಂಕು ನಿಯಂತ್ರಿಸುವ ಸಂಬಂಧ ರಾಜ್ಯಾದ್ಯಂತ ಲಾಕ್ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಆಗದಂತೆ ನೋಡಿಕೊಳ್ಳಲಾಗಿದೆ.
ಅಲ್ಲದೆ ಪ್ರತಿದಿನ ಬೆಳಗ್ಗೆ 6ರಿಂದ 10ರವರೆಗೆ ರೈತರು ತಮ್ಮ ಕೃಷಿ ಉತ್ಪನ್ನಗಳಾದ ಹೂವು-ಹಣ್ಣು-ತರಕಾರಿಗಳನ್ನು ಮಾರಾಟ ಮಾಡಲು ಹಾಗೂ ಬೀಜ ರಸಗೊಬ್ಬರಗಳನ್ನು ಖರೀದಿಸಲು ಅನುಕೂಲವಾಗುವಂತೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಗಡಿಭಾಗಗಳಲ್ಲಿನ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಅ ಧಿಕಾರಿಗಳಿಗೆ ಸೂಚಿಸಲಾಗಿದೆ.
ಬೀಜ ಮತ್ತು ರಸಗೊಬ್ಬರಗಳನ್ನು ದಾಸ್ತಾನು ಇರಿಸಿಕೊಂಡು ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ, ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ರೈತರು ಯಾವುದೋ ಒಂದೇ ಒಂದು ಬೆಳೆಯನ್ನು ಆಶ್ರಯಿಸದೆ ತಮ್ಮ ಹೊಲಗಳಲ್ಲಿ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು.
ಜಿಲ್ಲೆಯ ಕೆಲವು ಭಾಗಗಳಲ್ಲಿ ನಕಲಿ ಸಾವಯವ ಗೊಬ್ಬರಗಳನ್ನು ರೈತರಿಗೆ ಮಾರಾಟ ಮಾಡಿ ವಂಚಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಿದೆ. ಮುಂದಿನ ದಿನಗಳಲ್ಲಿ ನಕಲಿ ಸಾವಯವ ಗೊಬ್ಬರ ಮಾರಾಟ ಮಾಡುವವರನ್ನು ಗುರುತಿಸಿ ದಂಡನೆಗೆ ಗುರಿಪಡಿಸಲಾಗುವುದು ಎಂದರು.
ಕಳೆದ ಸಾಲಿನಲ್ಲಿ ಕ್ರಾಪ್ ಸರ್ವೇ ತಂತ್ರಾಂಶ ಅಭಿವೃದ್ಧಿ ಪಡಿಸಿದ ನಂತರ ರೈತರಿಗೆ ಬಹು ಉಪಯುಕ್ತವಾಗಿದೆ. ಕಳೆದ ಸಾಲಿನಲ್ಲಿ ಕೋಟಿಗೂ ಹೆಚ್ಚು ಜನ ರೈತರು ಕ್ರಾಪ್ ಸರ್ವೇಯಲ್ಲಿ ಬೆಳೆ ನಮೂದಿಸಿದ್ದರು. ಪ್ರಸ್ತುತ ರೈತರಿಗೆ ಉಪಯುಕ್ತವಾಗಿರುವ ಭೂಮಿ ತಂತ್ರಾಂಶ ವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಕಳೆದ ಸಾಲಿನಲ್ಲಿ ಜಿಲ್ಲೆಯ 43 ಸಾವಿರಕ್ಕೂ ಹೆಚ್ಚಿನ ರೈತರಿಗೆ ಗುಣಮಟ್ಟದ ತಾಡಪಾಲು ಗಳನ್ನು ವಿತರಿಸಿರುವುದು ಹರ್ಷದ ಸಂಗತಿ. ಅಲ್ಲದೆ ಮೊಬೈಲ್ ಆ್ಯಪ್ ವಿನ್ಯಾಸಗೊಳಿಸಿ ಬಳಕೆಗೆ ಅನುಕೂಲ ಮಾಡಿಕೊಟ್ಟದ್ದು ರೈತರಿಗೆ ಉಪಯುಕ್ತವಾಗಿದೆ. ರೈತರಿಗೆ ಅನುಕೂಲವಾಗುವಂತೆ ಪಹಣಿ ಡಾಟಾ ಎಂಟ್ರಿ ಕಾರ್ಯ ತ್ವರಿತವಾಗಿ ಮುಗಿಸಬೇಕಿದೆ. ಔಷಧ ಮತ್ತು ರಸಗೊಬ್ಬರಗಳನ್ನು ಸರಿಯಾದ ಪ್ರಮಾಣದಲ್ಲಿ ಬಳಕೆ ಮಾಡಲು ರೈತರಿಗೆ ತರಬೇತಿ ನೀಡುವ ಅಗತ್ಯವಿದೆ ಎಂದರು.
ಸಭೆಯಲ್ಲಿ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ
Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್ ವಿರುದ್ಧ ಕೇಸ್
Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.