ಉತ್ತಮ ಮಳೆ; ಬಿತ್ತನೆಗೆ ಅಣಿಯಾದ ರೈತ


Team Udayavani, Jun 8, 2021, 2:34 PM IST

Untitled-1

ಜಮಖಂಡಿ: ತಾಲೂಕಿನಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿದಿರುವ ಹಿನ್ನೆಲೆಯಲ್ಲಿ ರೈತರು ಬಿತ್ತನೆಯಲ್ಲಿ ತೊಡಗಿದ್ದಾರೆ. ಸರಿಯಾದ ಸಮಯಕ್ಕೆ ಮುಂಗಾರು ಆಗಮಿಸಿದ್ದರಿಂದ ರೈತರು ಜಮೀನು ಹದಗೊಳಿಸಿದ್ದಾರೆ. ಬಿತ್ತನೆಗೆ ಎತ್ತುಗಳ ಕೊರತೆಯ ಹಿನ್ನೆಲೆಯಲ್ಲಿ ರೈತರು ಟ್ರ್ಯಾಕ್ಟರ್‌ ಮೂಲಕ ಬಿತ್ತನೆಗೆ ಮುಂದಾಗಿದ್ದಾರೆ.

ಸಾವಳಗಿ, ಜಮಖಂಡಿ ಮತ್ತು ತೇರದಾಳ ರೈತ ಸಂಪರ್ಕ ಕೇಂದ್ರಗಳಲ್ಲಿ 32.72 ಕ್ವಿಂಟಲ್‌ ಗೋವಿನಜೋಳ, 2.73 ಕ್ವಿಂಟಲ್‌ ಸಜ್ಜೆ, 117.2 ಕ್ವಿಂಟಲ್‌ ತೊಗರಿ, 184.2 ಕ್ವಿಂಟಲ್‌ ಉದ್ದು, 387.7 ಕ್ವಿಂಟಲ್‌ ಸೋಯಾಬಿನ್‌, 46 ಕ್ವಿಂಟಲ್‌ ಹೆಸರು ಮಾರಾಟವಾಗಿದೆ.

ಮುಂಗಾರು ಉತ್ತಮವಾಗಿದ್ದರಿಂದ ಅಂದಾಜು 5 ರಿಂದ 10 ಸೆ.ಮೀ. ಭೂಮಿ ಹಸಿಯಾಗಿದ್ದು ಬಿತ್ತನೆಯ ಕೆಲಸ ಚುರುಕಿನಿಂದ ನಡೆದಿದೆ. ರಬಕವಿ-ಬನಹಟ್ಟಿ ಮತ್ತು ಜಮಖಂಡಿ ತಾಲೂಕು ಸೇರಿದಂತೆ ಮುಂಗಾರು ಹಂಗಾಮಿನಲ್ಲಿ ಅಂದಾಜು 66.350 ಹೆಕ್ಟೇರ್‌ ಬಿತ್ತನೆಯಾಗಿದ್ದು, ಜೂ.5ರಂದು ಎರಡೂ ತಾಲೂಕಿನಲ್ಲಿ ಕಬ್ಬು ಬೆಳೆ ಸೇರಿದಂತೆ ಅಂದಾಜು 34.475 ಹೆಕ್ಟೇರ್‌ ಜಮೀನು ಬಿತ್ತನೆಯಾಗಿದೆ.

ಜೂ.6-7ರಂದು ಮಳೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ರೈತರು ಬಿತ್ತನೆಯಲ್ಲಿ ತೊಡಗಿದ್ದಾರೆ. ಒಂದು ವಾರದಲ್ಲಿ ನಿರೀಕ್ಷಿತ ಬಿತ್ತನೆಯ ಗುರಿ ತಲುಪಲಿದೆ.

ಬೀಜ ದಾಸ್ತಾನು ಲಭ್ಯ: ರಬಕವಿ-ಬನಹಟ್ಟಿ ಮತ್ತು ಜಮಖಂಡಿ ತಾಲೂಕಿನ ಮೂರು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಸಕ್ತ ವರ್ಷದಲ್ಲಿ ಬಿತ್ತನೆ ಬೀಜಗಳ ದಾಸ್ತಾನು ಸಂಗ್ರಹ ಮಾಡಲಾಗಿದ್ದು, ಈಗಾಗಲೇ ರೈತರು ಬಿತ್ತನೆ ಬೀಜ ಖರೀದಿಸಿದ್ದು, ಕಳೆದೆರಡು ದಿನಗಳಿಂದ ಬಿತ್ತನೆ ಕೆಲಸ ಚುರುಕುಗೊಂಡಿದೆ. ಬೀಜ ನಾಟಿ ಮಾಡುವ ಮುನ್ನ ಸರಬರಾಜುಗೊಂಡ ಬಿತ್ತನೆ ಬೀಜಗಳನ್ನು ಪರೀಕ್ಷಿಸಿಕೊಳ್ಳಬೇಕು. ಎರಡೂ ತಾಲೂಕಿನಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬಿತ್ತನೆ ಭೂಮಿ ಹದವಾಗಿದೆ ಎನ್ನುತ್ತಾರೆ ಜಮಖಂಡಿ ಸಹಾಯಕ ಕೃಷಿ ನಿರ್ದೇಶಕ ರವಿಶಂಕರ ಬಿದರಿ.

ಕೃಷಿ ಇಲಾಖೆ ನಿರ್ದೇಶನದಂತೆ ಸಾವಳಗಿ, ತೇರದಾಳ ಮತ್ತು ಜಮಖಂಡಿ ರೈತ ಸಂಪರ್ಕ ಕೇಂದ್ರಗಳಲ್ಲಿ ಖರೀದಿ ಸಿರುವ ಬಿತ್ತನೆ ಬೀಜಗಳು ಗುಣಮಟ್ಟದ್ದಾಗಿವೆ. ಬಿತ್ತನೆಗೂ ಮುಂಚೆ ಭೂಮಿ ಚೆನ್ನಾಗಿ ಹದವಾಗಿದ್ದನ್ನು ಗಮನದಲ್ಲಿ ಇಟ್ಟುಕೊಂಡು ರೈತರು ಬಿತ್ತನೆ ಮಾಡಬೇಕು. ತಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡಿಸಿಕೊಂಡು ಅದರ ಅನುಗುಣವಾಗಿ ಬೀಜಗಳನ್ನು ಬಿತ್ತಬೇಕು. ಎರಡೂ ತಾಲೂಕಿನಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿದಿದ್ದು ಬಿತ್ತನೆಗೆ ಸಕಾಲವಾಗಿದೆ. –ಎಂ.ಎಸ್‌.ಬುಜರುಕ, ಕೃಷಿ ಅಧಿಕಾರಿ, ಜಮಖಂಡಿ

 

– ಮಲ್ಲೇಶ ಆಳಗಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.