ಕೊರೊನಾ ಸೋಂಕು ನಿರ್ಮೂಲನೆಗೆ ಸಹಕರಿಸಿ


Team Udayavani, Jun 8, 2021, 10:44 PM IST

8-17

ಚಿತ್ರದುರ್ಗ: ಕೋವಿಡ್‌ ಸೋಂಕಿನಿಂದ ಮುಕ್ತಿ ಪಡೆಯುವ ಲಸಿಕೆ ವಿರುದ್ಧ ಅಪಪ್ರಚಾರ ಮಾಡಿದವರು ಇಂದು ಮೊದಲ ಸಾಲಿನಲ್ಲಿ ನಿಂತು ಲಸಿಕೆ ಪಡೆಯುತ್ತಿದ್ದಾರೆ, ಅಮಾಯಕರು ಸಾಯುತ್ತಿದ್ದಾರೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ನಗರದ ಜೆಸಿಆರ್‌ ಬಡಾವಣೆಯ ಸರ್ಕಾರಿ ಶಾಲೆ ಆವರಣದಲ್ಲಿ ಭಾನುವಾರ ಅಖೀಲ ಭಾರತ ವೀರಶೆ„ವ ಮಹಾಸಭಾದಿಂದ ಹಮ್ಮಿಕೊಂಡಿದ್ದ ಕೋವಿಡ್‌ ಲಸಿಕಾ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಎಲ್ಲರೂ ಕೊರೊನಾ ಲಸಿಕೆ ಪಡೆದುಕೊಳ್ಳುವ ಮೂಲಕ ಕೋವಿಡ್‌ ಮುಕ್ತರಾಗಲು ಸಹಕಾರ ನೀಡಬೇಕು. ಬದಲಾಗಿ ಇಲ್ಲಸಲ್ಲದ ಅಪಪ್ರಚಾರ ಮಾಡಿ ಜನರ ದಿಕ್ಕು ತಪ್ಪಿಸಬಾರದು ಎಂದರು.

ಆರಂಭದಲ್ಲಿ ದೇಶಾದ್ಯಂತ ಕೋವಿಡ್‌ ಲಸಿಕೆ ವಿತರಣೆಗೆ ಮುಂದಾದಾಗ ಅನೇಕರು ಇದರಿಂದ ನಪುಂಸಕತ್ವ ಉಂಟಾಗುತ್ತದೆ, ಹೆಣ್ಣುಮಕ್ಕಳಿಗೆ ಸಂತಾನ ಆಗುವುದಿಲ್ಲ ಎಂದು ವದಂತಿ ಹಬ್ಬಿಸಲಾಗಿತ್ತು. ಆದರೆ ಇತ್ತೀಚೆಗೆ ಹೆಚ್ಚು ಹೆಚ್ಚು ಜನ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.

ಏಕಕಾಲದಲ್ಲಿ ಹೆಚ್ಚು ಜನ ಲಸಿಕೆ ಪಡೆಯಲು ಬರುತ್ತಿರುವುದರಿಂದ ಲಸಿಕೆ ಸರಬರಾಜಿನಲ್ಲಿ ಕೊಂಚ ವ್ಯತ್ಯಯವಾಗುತ್ತಿದೆ. ಕೊರೊನಾ ಮೊದಲ ಅಲೆಯಲ್ಲಿ ಆಕ್ಸಿಜನ್‌ ಅಗತ್ಯ ಅಷ್ಟಾಗಿ ಕಂಡುಬರಲಿಲ್ಲ. ಈಗ ಸಾಕಷ್ಟು ಬೇಡಿಕೆ ಇದೆ. ಆದಾಗ್ಯೂ ಆಕ್ಸಿಜನ್‌ ಪೂರೈಸಲಾಗುತ್ತಿದೆ. ಆದರೆ ವಿರೋಧ ಪಕ್ಷಗಳು ಅನಗತ್ಯವಾಗಿ ಈ ಕುರಿತು ಟೀಕೆ ಮಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈಗಾಗಲೇ ನಗರದ ವಿವಿಧೆಡೆಗಳಲ್ಲಿ ಲಸಿಕಾ ವಿತರಣೆ ಮಾಡಲಾಗುತ್ತಿದೆ. ಮುಂದಿನ ದಿನದಲ್ಲಿ ವಿವಿಧ ಬಡಾವಣೆಗಳಲ್ಲಿಯೂ ಲಸಿಕೆ ಹಾಕಲಾಗುತ್ತದೆ. ಯಾರು ಸಹ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಲಾಗುವುದು ಎಂದ ಶಾಸಕರು, ಯಾರಿಗಾದರೂ ಕೋವಿಡ್‌ ಲಕ್ಷಣ ಕಂಡು ಬಂದಲ್ಲಿ ಆತಂಕಪಟ್ಟುಕೊಳ್ಳದೆ ತಮಟಕಲ್ಲು ರಸ್ತೆಯಲ್ಲಿರುವ ಕೋವಿಡ್‌ ಕೇಂದ್ರಕ್ಕೆ ದಾಖಲಾಗಬೇಕು.

ಅಲ್ಲಿ ಅತ್ಯುತ್ತಮ ವ್ಯವಸ್ಥೆ ಮಾಡಲಾಗಿದೆ ಎಂದರು. ಕಾಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಟಿ. ಬದರಿನಾಥ್‌, ಸದಸ್ಯರಾದ ಶ್ರಣೀಕ್‌, ತಾಲೂಕು ಆರೋಗ್ಯಾಧಿಕಾರಿ ಡಾ| ಗಿರೀಶ್‌, ಡಾ| ಕುಮಾರಸ್ವಾಮಿ, ವೀರಶೈವ ಸಮಾಜದ ಮುಖಂಡರಾದ ಕೆಇಬಿ ಷಣ್ಮುಖಪ್ಪ, ನಗರಸಭಾ ಸದಸ್ಯರಾದ ಅನುರಾಧ ರವಿಕುಮಾರ್‌, ರೋಹಿಣಿ ನವೀನ್‌, ಸುರೇಶ್‌, ರವಿಕುಮಾರ್‌, ವೇದಾ, ಮಹಡಿ ಶಿವಮೂರ್ತಿ, ಮಹೇಶ್‌, ದಿವಾಕರ, ಆನಂದ, ಶಶಿಧರ್‌, ಸಿದ್ದಪ್ಪ, ಗಂಗಾಧರ ಮತ್ತಿತರರು ಭಾಗವಹಿಸಿದ್ದರು. ಸುಮಾರು 300ಕ್ಕೂ ಹೆಚ್ಚು ಜನರಿಗೆ ಲಸಿಕೆ ಹಾಕಲಾಯಿತು.

ಟಾಪ್ ನ್ಯೂಸ್

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.