ಪೆಟ್ರೋಲ್, ಡಿಸೇಲ್ ದರ ಹೆಚ್ಚಿಸಲು ಬಿಜೆಪಿ ನಾಯಕರಿಗೆ ನಾಚಿಕೆಯಾಗಲ್ವೇ : ಸಿದ್ದು ಕಿಡಿ

ಬೆಲೆ ಏರಿಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ನ ಸೂಚನೆ ಮೇರೆಗೆ ರಾಜ್ಯದಲ್ಲಿ 5 ದಿನಗಳ ಕಾಲ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ : ಸಿದ್ದರಾಮಯ್ಯ

Team Udayavani, Jun 10, 2021, 6:35 PM IST

Siddaamahai on Petrol rate hike

ಬೆಂಗಳೂರು : ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆ ವಿರುದ್ಧವೇ ಪ್ರತಿಭಟನೆ ಮಾಡಿ ಅಧಿಕಾರಕ್ಕೆ ಬಂದ ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪೆಟ್ರೋಲ್ ಡೀಸೆಲ್ ದರ 100 ರೂ. ಗಡಿ ದಾಟಿದರೂ ತುಟಿಕ್ ಪಿಟಿಕ್ ಎನ್ನುತ್ತಿಲ್ಲ ಎಂಬ ಜನ ಸಾಮಾನ್ಯರ ಆಕ್ರೊಶದ ಬೆನ್ನಿಗೆ ಈಗ ಕಾಂಗ್ರೆಸ್ ಕೂಡ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಪ್ರತಿಭಟನೆಯ ಎಚ್ಚರಿಕೆಯನ್ನು ಕೂಡ ನೀಡಿದೆ.

ಈ ಬಗ್ಗೆ ಟ್ವೀಟರ್ ಖಾತೆಯ ಮೂಲಕ ಸರಣಿ ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಕಿಡಿಕಾರಿದ ರಾಜ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿದ್ಯುತ್, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಮನಸೋಯಿಚ್ಛೆ ಹೆಚ್ಚಿಸುವ ಮೂಲಕ ಕೋವಿಡ್ ಸಂಕಷ್ಟದಲ್ಲಿರುವ ಜನರ ತಲೆಯ ಮೇಲೆ ಬಿಜೆಪಿ ಸರ್ಕಾರ ಚಪ್ಪಡಿ ಎಳೆದಿದೆ ಎಂದಿದ್ದಾರೆ.

ಇದನ್ನೂ ಓದಿ : ಕೋವಿಡ್ ಸ್ಥಿತಿಯಲ್ಲಿ ಜಾತಿ, ಧರ್ಮದ ಆಧಾರದ ಮೇಲೆ ವಿಂಗಡಣೆ ಮಾಡುವುದು ಸರಿಯಲ್ಲ :ಸಿದ್ದರಾಮಯ್ಯ

ಮಾಜಿ ಪ್ರಧಾನಿ ಮನಮೋಹನ್ ಸೀಂಗ್ ಅವರನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, ಸಿಂಗ್ ಕಾಲದಲ್ಲಿ ಪೆಟ್ರೋಲ್ ಬೆಲೆ ಕೇವಲ 1 ರೂ ಏರಿಕೆ ಮಾಡಿದಾಗ ಗುಜರಾತ್ ನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ತೀವ್ರ ವಿರೋಧ ಮಾಡಿದ್ದರು. ಈಗ ತಾವೇ ಬೆಲೆಯೇರಿಕೆ ಮಾಡಲು ಬಿಜೆಪಿ ನಾಯಕರಿಗೆ ನಾಚಿಕೆಯಾಗಲ್ವೇ ಎಂದು ಪ್ರಶ್ನೆ ಕೇಳುವುದರ ಮೂಲಕ ಕಿಡಿ ಕಾರಿದ್ದಾರೆ.

ಇನ್ನು, ಸಿಂಗ್ ಪ್ರಧಾನಿಯಾಗಿದ್ದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲ 125 ಡಾಲರ್ ಇತ್ತು. ಆಗ ಪೆಟ್ರೋಲ್, ಡಿಸೇಲ್ ದರವನ್ನು ಈ ಪ್ರಮಾಣದಲ್ಲಿ ಏರಿಕೆ ಮಾಡಿರಲಿಲ್ಲ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಒಂದು ಹಂತದಲ್ಲಿ ಕಚ್ಛಾತೈಲ ದರ 46-47 ಡಾಲರ್ ಕುಸಿದಿತ್ತು. ಆಗ ಗ್ರಾಹಕರಿಗೆ ಕಡಿಮೆ ಬೆಲೆಗೆ ಕೊಟ್ಟಿದ್ದರೆ ? ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರತಿಭಟನೆಗೆ ಸಂಬಂಧಿಸಿದಂತೆ ಟ್ವಿಟ್ ಮಾಡಿದ ಅವರು,  ಬೆಲೆ ಏರಿಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ನ ಸೂಚನೆ ಮೇರೆಗೆ ರಾಜ್ಯದಲ್ಲಿ 5 ದಿನಗಳ ಕಾಲ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೋವಿಡ್ ನಿಂದ ಸುಮ್ಮನಿರ್ತಾರೆ, ಲಾಕ್ ಡೌನ್ ಇರುವ ಕಾರಣ ಹೊರಗೆ ಬಂದು ಪ್ರತಿಭಟನೆ ಮಾಡುವುದಿಲ್ಲ ಎಂದು ಜನರ ತಲೆಯ ಮೇಲೆ ಚಪ್ಪಡಿ ಎಳೆಯುವ ಕೆಲಸವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡುತ್ತಿವೆ ಎಂದಿದ್ದಾರೆ.

ಇದನ್ನೂ ಓದಿ : ಗೋವಾ : ಸಿಎಂ ಹಾಗೂ ಎಚ್ ಎಮ್ ನಡುವೆ ಯಾವ ಭಿನ್ನಾಭಿಪ್ರಾಯಗಳಿಲ್ಲ : ರವಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.