ಸಚಿವ ಈಶ್ವರಪ್ಪ ಜನ್ಮದಿನ: ಕೆರೆ ಪುನಃಶ್ಚೇತನಕ್ಕೆ ಚಾಲನೆ
Team Udayavani, Jun 11, 2021, 10:58 PM IST
ಶಿವಮೊಗ್ಗ: ಕೆರೆ ಪುನಃಶ್ಚೇತನ ಮಾಡುವ ಮೂಲಕ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದು ಖುಷಿ ತಂದಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಮಲ್ಲಿಗೇನಹಳ್ಳಿಯ ಸರ್ವೇ ನಂ.25 ರಲ್ಲಿರುವ ರಾಮಿನಕಟ್ಟೆ ಕೆರೆ ಪುನಃ ಶ್ಚೇತನ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಒಂದು ಕೆರೆಯ ಅಭಿವೃದ್ಧಿಯ ಮೂಲಕ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳುವುದಾಗಿ ಈ ಹಿಂದೆಯೇ ತಿಳಿಸಿದ್ದೆ. ಅದರಂತೆ ಈ ಕೆರೆಯ ಜಾಗದಲ್ಲಿ ನಮ್ಮ ಶಿವಮೊಗ್ಗ ಪರಿಸರಾಸಕ್ತರ ತಂಡದ ಸಹಯೋಗದೊಂದಿಗೆ ಈ ಕೆರೆಯನ್ನು ಪುನರುಜ್ಜೀವಗೊಳಿಸಲಾಗುವುದು ಮತ್ತು ಕೆರೆಯ ಸುತ್ತಲೂ ಹಸಿರು ಬೆಳೆಸಲಾಗುವುದು ಎಂದರು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಶ್ರೀ ಬಸವ ಮಾದಾರ ಚನ್ನಯ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಕೆರೆ ಕಟ್ಟೆಗಳು ಪ್ರಭಾವಿಗಳ ಪಾಲಾಗಿದ್ದು, ಕೆರೆ ಎಲ್ಲಿದೆ ಎಂದು ಹುಡುಕುವ ಸ್ಥಿತಿ ನಿರ್ಮಾಣವಾಗಿದೆ. ಜಲ ಮೂಲಗಳು ಸರಿಯಾಗಿ ಇಲ್ಲದೆ ಇರುವುದರಿಂದ ನದಿಗಳು ಅಕಾಲಿಕವಾಗಿ ಬತ್ತುವಂತಾಗಿದೆ. ಹೀಗಾಗಿ ಕೆರೆಗಳ ಪುನಃಶ್ಚೇತನ ಇಂದು ಅನಿವಾರ್ಯವಾಗಿದೆ ಎಂದರು.
ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ಹಿರಿಯರು ನಮಗೆ ಉತ್ತಮವಾದ ಪರಿಸರ ಬಿಟ್ಟು ಹೋಗಿದ್ದಾರೆ. ನಾವು ಇದನ್ನು ಮುಂದಿನ ಪೀಳಿಗೆಗೆ ಉಳಿಸುವಂತಹ ಯೋಜನೆಗಳನ್ನು ರೂಪಿಸಬೇಕೆಂದು ಹೇಳಿದರು. ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಶಿವಾನಂದ ಕಳವೆ ವಿಶೇಷ ಉಪನ್ಯಾಸ ನೀಡಿದರು. ಶಾಸಕ ಅಶೋಕ್ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಎಸ್. ರುದ್ರೇಗೌಡ, ಆರ್. ಎಸ್.ಎಸ್. ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಟ್ಟಾಭಿರಾಮ, ಮೇಯರ್ ಸುನೀತಾ ಅಣ್ಣಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Expiry Date; ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್ ಸಪ್ತಾಹ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.