ಕುವೆಂಪು ವಿಶ್ವ ವಿದ್ಯಾಲಯಕ್ಕೆ 56 ನೇ ಸ್ಥಾನ


Team Udayavani, Jun 11, 2021, 11:11 PM IST

11-17

ಶಿವಮೊಗ್ಗ: ಉನ್ನತ ಶಿಕ್ಷಣ ಮತ್ತು ಸಂಶೋಧನಾ ಚಟುವಟಿಕೆ ಕೈಗೊಳ್ಳುವ ಸಂಸ್ಥೆಗಳ ಜಾಗತಿಕ ರ್‍ಯಾಂಕಿಂಗ್‌ ಅನ್ನು ನಿರ್ಧರಿಸುವ ಪ್ರತಿಷ್ಠಿತ ಸೈಮ್ಯಾಗೋ ಪಟ್ಟಿಯು ಇತ್ತೀಚೆಗೆ ಬಿಡುಗಡೆಯಾಗಿದ್ದು, ಭಾರತದ ವಿಶ್ವವಿದ್ಯಾಲಯಗಳ ಪೈಕಿ ಕುವೆಂಪು ವಿಶ್ವವಿದ್ಯಾಲಯ 56ನೇ ಸ್ಥಾನ ಪಡೆದಿದೆ. ಕಳೆದ ವರ್ಷ 66ನೇ ಸ್ಥಾನದಲ್ಲಿದ್ದ ವಿಶ್ವವಿದ್ಯಾಲಯ, 2021ರ ಸಾಲಿನಲ್ಲಿ ಸಂಶೋಧನಾ ಮಾನದಂಡದಲ್ಲಿ 41ನೇ ಸ್ಥಾನ, ನಾವೀನ್ಯತೆಯಲ್ಲಿ 38ನೇ ಸ್ಥಾನ ಮತ್ತು ಸಾಮಾಜಿಕ ಪ್ರಭಾವ ಮಾನದಂಡದಲ್ಲಿ 26ನೇ ಸ್ಥಾನ ಪಡೆದಿದ್ದು, ಸಮಗ್ರವಾಗಿ 56ನೇ ಸ್ಥಾನ ಗಳಿಸಿದೆ.

ಜಗತ್ತಿನಾದ್ಯಂತ ವಿಜ್ಞಾನ ಸಂಶೋಧನಾ ಪ್ರಕಟಣೆಗಳ ಶ್ರೇಷ್ಠತೆಯನ್ನು ಅಳೆಯುವ ಸ್ಕೋಪಸ್‌ ಸಂಸ್ಥೆಯ ಸಹಭಾಗಿತ್ವದಲ್ಲಿ ಸಮೀಕ್ಷೆ ಕೈಗೊಳ್ಳುವ ಸೈಮ್ಯಾಗೋ ಸಂಸ್ಥೆ ಜಾಗತಿಕ ಮಟ್ಟದಲ್ಲಿ ಸರ್ಕಾರಿ, ಖಾಸಗಿ, ಆರೋಗ್ಯ, ಉನ್ನತ ಶಿಕ್ಷಣ ಮತ್ತು ಸರ್ಕಾರೇತರ ಕ್ಷೇತ್ರಗಳ ವಿಭಾಗಗಳಲ್ಲಿ 7533 ಸಂಸ್ಥೆಗಳನ್ನು ಒಳಗೊಂಡ 2021ನೇ ಸಾಲಿನ ಸಮಗ್ರ ರ್‍ಯಾಂಕಿಂಗ್‌ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಜಾಗತಿಕ ವಿಶ್ವವಿದ್ಯಾಲಯಗಳ ಸಮಗ್ರ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಕುವೆಂಪು ವಿವಿ 569ನೇ ಸ್ಥಾನ ಗಳಿಸಿದ್ದು, ಏಷ್ಯಾ ವಲಯದಲ್ಲಿ 1437 ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ 303 ನೇ ಸ್ಥಾನಗಳಿಸಿದೆ.

ಭಾರತದ ವಿಶ್ವವಿದ್ಯಾಲಯಗಳ ಪಟ್ಟಿಯೊಳಗೆ 56 ನೇ ಸ್ಥಾನ ಗಿಟ್ಟಿಸಿದೆ. ಭಾರತೀಯ ಶೈಕ್ಷಣಿಕ ಸಂಸ್ಥೆಗಳ ಪಟ್ಟಿಯಲ್ಲಿ ಕರ್ನಾಟಕ ಮೂಲದ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಮೊದಲನೇ ಸ್ಥಾನದಲ್ಲಿದ್ದರೆ, ಮಣಿಪಾಲ ವಿಶ್ವವಿದ್ಯಾಲಯ 15ನೇ ಸ್ಥಾನದಲ್ಲಿದೆ. ಜೈನ್‌ ವಿಶ್ವವಿದ್ಯಾಲಯ 48ನೇ ಸ್ಥಾನದಲ್ಲಿದ್ದರೆ, ಯೆನೋಪಾಯ ವಿವಿ 49ನೇ ಸ್ಥಾನದಲ್ಲಿದೆ. ಕರ್ನಾಟಕದ ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳ ಪೈಕಿ ಕುವೆಂಪು ವಿಶ್ವವಿದ್ಯಾಲಯ 56ನೇ ರ್‍ಯಾಂಕಿಂಗ್‌ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ (ರ್‍ಯಾಂಕಿಂಗ್‌ 60), ಮೈಸೂರು ವಿಶ್ವವಿದ್ಯಾಲಯ (80), ಕರ್ನಾಟಕ ವಿಶ್ವವಿದ್ಯಾಲಯ (110), ಮತ್ತು ಮಂಗಳೂರು ವಿಶ್ವವಿದ್ಯಾಲಯ (112)ಗಳು ಸ್ಥಾನ ಪಡೆದುಕೊಂಡಿವೆ.

ಸಾಂಪ್ರದಾಯಿಕ ಶೈಕ್ಷಣಿಕ ಕೋಸ್‌ ಗಳನ್ನು ನಡೆಸುವ ಜೊತೆ ಜೊತೆಯಲ್ಲಿಯೇ ಸಂಶೋಧನೆಯಲ್ಲೂ ಗಮನಾರ್ಹ ಸಾಧನೆ ತೋರುತ್ತಿರುವ ಕುವೆಂಪು ವಿವಿ ದೇಶದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳೊಂದಿಗೆ ಸ್ಪ ರ್ಧಿಸಿ ಈ ರ್‍ಯಾಂಕಿಂಗ್‌ ಪಡೆದಿರುವುದು ವಿಶ್ವವಿದ್ಯಾಲಯದ ಶೈಕ್ಷಣಿಕ ಗುಣಮಟ್ಟಕ್ಕೆ ಸಾಕ್ಷಿ ಎಂದು ಕುಲಪತಿ ಪ್ರೊ| ಬಿ. ಪಿ. ವೀರಭದ್ರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. 2010ರಲ್ಲಿ 792ನೇ ರ್‍ಯಾಂಕ್‌ನಲ್ಲಿದ್ದ ವಿವಿಯು, 2020ರಲ್ಲಿ 774ನೇ ರ್‍ಯಾಂಕ್‌ಗೆ ಪಡೆದಿತ್ತು. ಪ್ರಸ್ತುತ ಜಾಗತಿಕ ವಿಶ್ವವಿದ್ಯಾಲಯಗಳ ಪೈಕಿ 569ನೇ ಸ್ಥಾನ ಪಡೆದಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಕುಲಸಚಿವ ಪೊ. ಎಸ್‌. ಎಸ್‌. ಪಾಟೀಲ್‌ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

(Expiry Date)ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್‌ ಸಪ್ತಾಹ

Expiry Date; ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್‌ ಸಪ್ತಾಹ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.