ವಯಸ್ಸು – ಮನಸ್ಸು ಮಳೆಯೊಡನೆ ಬೆರೆತಾಗ


Team Udayavani, Jun 13, 2021, 5:35 PM IST

ವಯಸ್ಸು – ಮನಸ್ಸು ಮಳೆಯೊಡನೆ ಬೆರೆತಾಗ

ಮಳೆ ಅದೊಂದು ರೀತಿ ನೆನಪಿನ ಜೋಳಿಗೆಯಲ್ಲಿರುವ ಭಾವನೆಗಳನ್ನು ಹೊರಸೂಸುವ ಮಾಯೆ. ಒಣಗಿಹೋದ ನೆಲಕ್ಕೆ ಮೊದಲ ಹನಿ ಬಿದ್ದಾಗ ಬೀರುವ ಆ ಘಮ ಮನದಂಗಳದಿ ಮುದುರಿಕೊಂಡಿರುವ ಭಾವನೆಗಳನ್ನು ರಂಗೇರಿ ಸು ತ್ತದೆ. ಮಳೆ ಹನಿಗಳು ಇಳೆಯನು ಸೋಕಿದಾಗ ಹಸುರೆಲೆಗಳು ನಾಚುವಂತೆ ಮನದೊಳಗಿರುವ ಹುಚ್ಚು ಹುಚ್ಚು ಆಸೆಗಳು ಚಿಗುರೊಡೆಯುತ್ತವೆ.

ಮನೆಯ ಅಂಗಳವನ್ನೇ ಕಡಲನ್ನಾಗಿ ಮಾಡುವ ಮಳೆಯಲ್ಲಿ, ಸಣ್ಣ ಮಕ್ಕಳು ಆಡುವ ಆಟಗಳನ್ನು ನೋಡುವುದೇ ಚೆಂದ. ಮಕ್ಕಳು ಮಳೆಯಲ್ಲಿ ನೆನೆದರೆ ಅವರ ಆರೋಗ್ಯ ಕೆಡುತ್ತದೆ ಎಂಬ ಭಯಕ್ಕೆ ಅಮ್ಮನ ಬಾಯಲ್ಲಿ ಬರುವ ಬೈಗುಳಕ್ಕೂ ಕಿವಿಗೊಡದೆ ನೋಟ್‌ಬುಕ್‌ಗಳ ಹಾಳೆಯನ್ನು ಹರಿದು ದೋಣಿ ಮಾಡಿ ಅಂಗಳದಲ್ಲಿ ತುಂಬಿರುವ ಮಳೆ ನೀರಿನಲ್ಲಿ ಆಡುವ ಆ ಮಕ್ಕಳ ಲೋಕವೇ ಸುಂದರ. ಶಾಲೆ ಬಿಟ್ಟಾಗ ಜೋರು ಮಳೆ ಬಂದರೆ ಮಕ್ಕಳು ಪಡುವ ಸಂತೋಷಕ್ಕೆ ಮಿತಿಯೇ ಇರುವುದಿಲ್ಲ. ಕೊಡೆ ಇದ್ದರೂ ಅದನ್ನು ಬಿಡಿಸದೆ ಬ್ಯಾಗ್‌ನಲ್ಲಿ ತುರುಕಿ ಜಡಿ ಮಳೆಗೆ ಒದ್ದೆಯಾಗುತ್ತಾ ಕುಣಿದಾಡಿಕೊಂಡು ಮನೆಗೆ ಬರುವ ಆ ಬಾಲ್ಯವೇ ಚಂದ. ಬೆನ್ನ ಮೇಲೆ ಹೊತ್ತು ತಂದ ಮಣಭಾರದ ಬ್ಯಾಗ್‌ನ ಭಾರವನ್ನು ಇಳಿಸಿ ಬೆಚ್ಚನೆಯ ನೀರಿನಲ್ಲಿ ಸ್ನಾನ ಮಾಡಿ ಅಮ್ಮ ಮಾಡಿಟ್ಟ ಬಿಸಿ ಬಿಸಿ ಚಾದೊಂದಿಗೆ ಕಾಯಿಸಿದ ಹಪ್ಪಳವೋ ಸಂಡಿಗೆಯೊ ತಿನ್ನುವ ಮಜವೇ ಬೇರೆ.

ಮಳೆಗಾಲದಲ್ಲಿ ಯುವ ಪ್ರೇಮಿಗಳ ಕನಸುಗಳಂತೂ ಎಲ್ಲೆಯಿಲ್ಲದ ಬಾನಿನಂತಾಗುತ್ತದೆ. ತನ್ನ ಪ್ರೇಮಿಯೊಡನೆ ಭವಿಷ್ಯದಲ್ಲಿ ಕಳೆಯಲು ಬಯಸುವ ಸುಂದರ ಕ್ಷಣಗಳ ಕನಸಿಗೆ ಮಳೆರಾಯನೇ ಸಾಕ್ಷಿ. ತುಂತುರು ಮಳೆ ಹನಿಗಳು ಭುವಿಗೆ ಕಚಗುಳಿ ಇಡುವ ಹಾಗೆ ಪ್ರೇಮಿಗಳ ಮನದಲ್ಲೂ ಹೊಸ ಹೊಸ ಕನಸುಗಳೂ ಲಗ್ಗೆ ಇಡುತ್ತವೆ. ಇವೆಲ್ಲದರ ಅನುಭವ ಕಳೆದು ಈ ಸುಂದರ ನೆನಪುಗಳನ್ನು ಮೆಲುಕು ಹಾಕುತ್ತಿರುವ ಹಿರಿತನ ಕಿಟಕಿಯ ಗಾಜಿನಲಿ ಮಾಸಿ ಹೋಗುತ್ತಿರುವ ಮಂಜಿನ ಹಾಗೆ ಜೀವನವಿಷ್ಟೇ ಎಂದು ತಿಳಿಸುತ್ತದೆ.

ಮಳೆಯೊಡನೆ ನೆಂಟರಂತೆ ಬರುವ ಗುಡುಗು ಸಿಡಿಲಿನ ಅಬ್ಬರ ಒಳಗೊಳಗೆ ಹುದುಗಿರುವ ಭಯವನ್ನು ಹೊರದಬ್ಬುತ್ತದೆ. ಇದರೊಡನೆ ಜತೆಯಾಗುವ ಮಿಂಚಿನ ಬೆಳಕು ಮನದೊಳಗೆ ಅವಿತಿರುವ ಭಯದ ಕತ್ತಲೆಯನ್ನು ಹೋಗಲಾಡಿಸುವ ಬೆಳಕಾಗಬಾರದೇ..! ಇನ್ನು ಮಳೆಯ ಕತ್ತಲೆಯೋ ರಾತ್ರಿಯ ಕತ್ತಲೆಯೋ ಎಂಬ ವ್ಯತ್ಯಾಸವನ್ನು ತಿಳಿಸದೇ ಕಗ್ಗತ್ತಲೆಯನ್ನು ಹೊತ್ತು ತರುವ ಸಂಜೆಯ ಮಳೆ ನಿಲ್ಲದೆ ಒಂದೇ ಸಮನೆ ಬರುತ್ತಲೇ ಇರುತ್ತದೆ. ಇದಕ್ಕಾಗಿಯೇ ಸಂಜೆ ಬರುವ ನೆಂಟ ಸಂಜೆ ಬರುವ ಮಳೆಯಂತೆ ಬೇಗನೆ ಹೋಗುವುದಿಲ್ಲ ಎಂಬ ಮಾತು ಬಂದಿರಬಹುದು.

ಆಗಸದಿ ಬೀಳುವ ಹನಿಗಳು ಭೂಮಿಯಂಗಳದಿ ಜತೆಯಾಗುವ ಹಾಗೆ ಸಂಜೆಯ ಮಳೆ ಮನೆಮಂದಿಯನ್ನು ಚಾವಡಿಯಲಿ ಒಗ್ಗೂಡಿಸಿ ಮಾತಿನ ವೇದಿಕೆಯನ್ನೇ ನಿರ್ಮಿಸುತ್ತದೆ. ಇನ್ನು ಆ ಹೊತ್ತಿನಲ್ಲಿ ಕರೆಂಟ್‌ ಇಲ್ಲದಿದ್ದರೆ ಚಿಮಿಣಿಯ ಬೆಳಕಿನಲಿ ಪರದಾಡುತ್ತಾ ಆಡುವ ಮಾತುಗಳಿಗೆ ಕೊನೆಯೇ ಇಲ್ಲ. ಅದೇ ಮಾತಿನ ಗುಂಗಿನಲ್ಲಿ ತಣ್ಣನೆಯ ಗಾಳಿಯ ಬೆಸುಗೆಯೊಂದಿಗೆ ದಪ್ಪನೆಯ ಕಂಬಳಿಯನ್ನು ಸುತ್ತಿ ಮಲಗುವಾಗ ಕೇಳುವ ಕಪ್ಪೆಗಳ ಸದ್ದಿನ ಗದ್ದಲ, ಮನೆಯ ಮಾಡಿನಲಿ ಸುರಿಯುವ ನೀರಿನ ನಿನಾದ ಸುಂದರ ಕನಸಿನ ಲೋಕಕ್ಕೆ ಕೊಂಡೊಯ್ಯುತ್ತದೆ. ಈ ರೀತಿ ಸೊಗಸಾದ ಅನುಭವ ನೀಡುವ ಮಳೆರಾಯನ ತುಂಟಾಟಕ್ಕೆ ಮನಸ್ಸು ಮತ್ತೆ ಮತ್ತೆ ಹಾತೊರೆಯುತ್ತದೆ. ಆದರೆ ಅವನದ್ದೇ ಹುಚ್ಚಾಟದಿಂದಾಗಿ ಉಂಟಾಗುವ ಪ್ರವಾಹಗಳು, ಸಿಡಿಲ ಹೊಡೆತಗಳು, ಆತಂಕವನ್ನು ಹುಟ್ಟಿಸುತ್ತದೆ. ಯಾವಾಗ ಈ ಮಳೆಗೆ ಕೊನೆ ಎಂದು ಚಿಂತೆಗೆ ತಳ್ಳುತ್ತದೆ

ಹೀಗೆ ಮಳೆಯೆಂಬ ಮಾಯೆಯೊಳಗೆ ವಯಸ್ಸು ಹಾಗೂ ಮನಸ್ಸು ಸಿಲುಕಿದಾಗ ಆಗುವ ಭಾವನೆಗಳ ತೊಳಲಾಟ ಅದು ಮಳೆಯೊಡನೆ ಆಡುವ ಮನದಾಟವಿದ್ದಂತೆ…

 

ನಳಿನಿ ಎಸ್‌. ಸುವರ್ಣ

ಆಳ್ವಾಸ್‌ ಕಾಲೇಜು ಮೂಡುಬಿದಿರೆ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.