![Udupi: ಗೀತಾರ್ಥ ಚಿಂತನೆ-129: ಓನರ್ಶಿಪ್ ಮೇಲೇ ಕಣ್ಣು!](https://www.udayavani.com/wp-content/uploads/2024/12/puttige-shree-1-415x253.jpg)
ಕೋವಿಡ್ ಇಳಿಕೆ: ಜೂ.16ರಿಂದ ತಾಜ್ ಮಹಲ್, ಅಜಂತಾ ಸ್ಮಾರಕ ಭೇಟಿಗೆ ಪ್ರವಾಸಿಗರಿಗೆ ಅವಕಾಶ
ಅಜಂತಾ ಗುಹೆ ಸೇರಿದಂತೆ ಪ್ರಮುಖ ಸ್ಮಾರಕಗಳನ್ನು ಬಂದ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.
Team Udayavani, Jun 14, 2021, 6:31 PM IST
![ಕೋವಿಡ್ ಇಳಿಕೆ: ಜೂ.16ರಿಂದ ತಾಜ್ ಮಹಲ್, ಅಜಂತಾ ಸ್ಮಾರಕ ಭೇಟಿಗೆ ಪ್ರವಾಸಿಗರಿಗೆ ಅವಕಾಶ](https://www.udayavani.com/wp-content/uploads/2021/06/Mahal-Taj-620x409.jpg)
ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆಯ ಪರಿಣಾಮ ಕಳೆದ ಎರಡು ತಿಂಗಳಿಂದ ಮುಚ್ಚಲ್ಪಟ್ಟಿದ್ದ, ಕೇಂದ್ರ ಸರ್ಕಾರದ ರಕ್ಷಣೆಗೊಳಪಟ್ಟಿರುವ ಸ್ಮಾರಕಗಳಾದ ತಾಜ್ ಮಹಲ್ ಸೇರಿದಂತೆ ಇನ್ನತರ ಪ್ರಸಿದ್ಧ ಸ್ಥಳಗಳನ್ನು ಜೂನ್ 16ರಿಂದ ಪ್ರವಾಸಿಗರ ಭೇಟಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಎಎಸ್ ಐ(ಭಾರತೀಯ ಪುರಾತತ್ವ ಸಮೀಕ್ಷಾ) ತಿಳಿಸಿದೆ.
ಇದನ್ನೂ ಓದಿ:ಮದುವೆ ಮಾಡುವುದು ತಡವಾದ್ದರಿಂದ ಮೊಬೈಲ್ ಟವರ್ ಕಂಬ ಏರಿ ಕುಳಿತ ಯುವಕ
ಸ್ಮಾರಕಕ್ಕೆ ಭೇಟಿ ನೀಡುವ ಪ್ರವಾಸಿಗರು ಪ್ರವೇಶ ಟಿಕೆಟ್ ಅನ್ನು ಆನ್ ಲೈನ್ ನಲ್ಲಿ ಕಾಯ್ದಿರಿಸಬಹುದಾಗಿದೆ. ಆದರೆ ಯಾವುದೇ ಆಫ್ ಲೈನ್ (ಸ್ಥಳದಲ್ಲಿಯೇ ಟಿಕೆಟ್ ನೀಡುವುದು) ಟಿಕೆಟ್ ಬುಕಿಂಗ್ ವ್ಯವಸ್ಥೆ ಇಲ್ಲ ಎಂದು ಎಎಸ್ ಐ ವಿವರಿಸಿದೆ.
ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ, ಎಲ್ಲಾ ಕೇಂದ್ರೀಕೃತ ಸಂರಕ್ಷಿತ ಸ್ಮಾರಕ, ವಸ್ತುಸಂಗ್ರಹಾಲಯಗಳನ್ನು ಜೂನ್ 16ರಿಂದ ತೆರೆಯಲು ನಿರ್ಧರಿಸಲಾಗಿದೆ ಎಂದು ಸಂಸ್ಕೃತಿ ಮತ್ತು ಪ್ರವಾಸೋದ್ಯಮ ರಾಜ್ಯ ಖಾತೆ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಬಿಡುಗಡೆ ಮಾಡಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಭಾರತದಲ್ಲಿ ಎರಡನೇ ಕೋವಿಡ್ ಅಲೆ ಹರಡಲು ಪ್ರಾರಂಭವಾದ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸೋಂಕು ಹರಡುವುದನ್ನು ತಡೆಗಟ್ಟಲು ಏಪ್ರಿಲ್ 15ರಿಂದ ತಾಜ್ ಮಹಲ್, ಕೆಂಪು ಕೋಟೆ, ಅಜಂತಾ ಗುಹೆ ಸೇರಿದಂತೆ ಪ್ರಮುಖ ಸ್ಮಾರಕಗಳನ್ನು ಬಂದ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.
ಟಾಪ್ ನ್ಯೂಸ್
![Udupi: ಗೀತಾರ್ಥ ಚಿಂತನೆ-129: ಓನರ್ಶಿಪ್ ಮೇಲೇ ಕಣ್ಣು!](https://www.udayavani.com/wp-content/uploads/2024/12/puttige-shree-1-415x253.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್](https://www.udayavani.com/wp-content/uploads/2024/12/amith-shah-150x84.jpg)
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
![Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ](https://www.udayavani.com/wp-content/uploads/2024/12/pushpa-2-5-150x94.jpg)
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.