ನಿರಾಕರಣೆಯಲ್ಲಿಯೇ ಬದುಕುವುದು ಯಾವುದನ್ನೂ ಪರಿಹರಿಸುವುದಿಲ್ಲ : ಮೋದಿಗೆ ರಾಹುಲ್ ಪಾಠ


Team Udayavani, Jun 17, 2021, 5:33 PM IST

living-in-denial-will-not-solve-anything-rahul-gandi

ನವ ದೆಹಲಿ : ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಪ್ರಧಾನಿ ನರೇಂದ್ರ ಮೊದಿಯವರ ನೇತೃತ್ವದ ಸರ್ಕಾರ ಎಡವಿದ ಎಂಬ ಆರೋಪಗಳು ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಕೋವಿಡ್ ಸೋಂಕಿನ ಕಾರಣದಿಂದಾಗಿ ಇಡೀ ವಿಶ್ವದ ನಾಗರಿಕ ವ್ಯವಸ್ಥೆ ಅಡಿಮೇಲಾಗಿದ್ದು, ಜಾಗತಿಕವಾಗಿ ಬಡತನದ ಮಟ್ಟ ಏರಿಕೆಯಾಗಿದೆ ಹಾಗೂ ಸಾಮಾನ್ಯ ಮಧ್ಯಮ ವರ್ಗದವರ ಆದಾಯ ಇಳಿಮುಖವಾಗಿದೆ ಎಂಬ ವರದಿಗಳಾಗುತ್ತಿವೆ.

ಇದನ್ನೂ ಓದಿ : ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಮಾಜಿ ಎನ್ ಕೌಂಟರ್ ಸ್ಪೆಷಲಿಸ್ಟ್ ಶರ್ಮಾ ಬಂಧನ

ತಮ್ಮ ಅಧಿಕೃತ ಟ್ವೀಟರ್ ಖಾತೆ ಮೂಲಕ ಜಾಗತಿಕ ಬಡತನಕ್ಕೆ ಭಾರತದ ಶೇಕಡಾ 50ಕ್ಕಿಂತ ಹೆಚ್ಚು ಕೊಡುಗೆ ಇದೆ ಎಂಬ ಅಂತಾರಾಷ್ಟ್ರೀಯ ಮಟ್ಟದ ಸುದ್ದಿ ಸಂಸ್ಥೆಯೊಂದರ ವರದಿಯ ತುಣಕಿನ ಜೊತೆಗೆ ಟ್ವೀಟ್ ಮಾಡಿದ ಗಾಂಧಿ, ಇದು ಭಾರತ ಸರ್ಕಾರ ಸಾಂಕ್ರಾಮಿಕದ ಪರಿಸ್ಥಿತಿಯಲ್ಲಿ ಮಾಡಿದ ಕೆಟ್ಟ ನಿರ್ವಹಣೆಯ ಫಲಿತಾಂಶವಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.

ನಾವು ಈಗ ಭವಿಷ್ಯವನ್ನು ನೋಡಬೇಕು. ಪ್ರಧಾನಿ ತನ್ನ ತಪ್ಪುಗಳನ್ನು ಒಪ್ಪಿಕೊಂಡಾಗ ಮತ್ತು ತಜ್ಞರ ಸಹಾಯವನ್ನು ಪಡೆದಾಗ ನಮ್ಮ ದೇಶ ಪುನರ್ ನಿರ್ಮಾಣದ ಆರಂಭಕ್ಕೆ ಸಾಧ್ಯವಾಗುತ್ತದೆ. ನಿರಾಕರಣೆಯಲ್ಲಿಯೇ ಬದುಕುವುದು ಯಾವುದನ್ನೂ ಪರಿಹರಿಸುವುದಿಲ್ಲ ಎಂದು ಅವರು ಸೌಮ್ಯವಾಗಿಯೇ ಆಕ್ರೋಶ ಹೊರ ಹಾಕಿದ್ದಾರೆ.


ಇನ್ನು, ಅವರು ಟ್ವೀಟ್ ನಲ್ಲಿ ಸೇರಿಸಿದ ವರದಿಯ ತುಣುಕಿನಲ್ಲಿ ಜಾಗತಿಕ ಬಡತನ ಮಟ್ಟಕ್ಕೆ ಶೇಕಡಾ. 57. 3 ರಷ್ಟು ಭಾರತದ ಕೊಡುಗೆ ಇದೆ ಎಂದು ಉಲ್ಲೇಖಿಸಿದೆ.

ಇದನ್ನೂ ಓದಿ : ಮೋದಿ ತಾವೊಬ್ಬ ದುರ್ಬಲ ನಾಯಕರೆಂದು ಸಾಬೀತುಪಡಿಸಿದ್ದಾರೆ  : ಸಿದ್ದು ವ್ಯಂಗ್ಯ

ಟಾಪ್ ನ್ಯೂಸ್

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

1-v-a

ಲಂಬವಾಗಿ ಟೇಕಾಫ್ ಆಗುವ ಏರ್‌ ಆ್ಯಂಬುಲೆನ್ಸ್‌ ಶೀಘ್ರ ಭಾರತದಲ್ಲಿ ಲಭ್ಯ

1-ioo

Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?

1-vk

BCCI ಕಟ್ಟಪ್ಪಣೆಯಿಂದ ಸಂದಿಗ್ಧ; ತನ್ನಿಷ್ಟದ ಆಹಾರಕ್ಕೆ ಕೊಹ್ಲಿ ಹೊಸ ಮಾರ್ಗ!

bjp-congress

BJP 4,340 ಕೋಟಿ ಆದಾಯ: 50% ವೆಚ್ಚ ; ಕಾಂಗ್ರೆಸ್‌ಗೆ 1,225 ಕೋಟಿ ರೂ.

supreem

Supreme Court; ಮಸೀದಿಯಡಿ ಮಂದಿರ ಹುಡುಕುವ ಅರ್ಜಿ ಸಾಕು,ನಿಲ್ಲಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

1-v-a

ಲಂಬವಾಗಿ ಟೇಕಾಫ್ ಆಗುವ ಏರ್‌ ಆ್ಯಂಬುಲೆನ್ಸ್‌ ಶೀಘ್ರ ಭಾರತದಲ್ಲಿ ಲಭ್ಯ

bjp-congress

BJP 4,340 ಕೋಟಿ ಆದಾಯ: 50% ವೆಚ್ಚ ; ಕಾಂಗ್ರೆಸ್‌ಗೆ 1,225 ಕೋಟಿ ರೂ.

supreem

Supreme Court; ಮಸೀದಿಯಡಿ ಮಂದಿರ ಹುಡುಕುವ ಅರ್ಜಿ ಸಾಕು,ನಿಲ್ಲಿಸಿ

palaniswami

AIADMK; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

1-v-a

ಲಂಬವಾಗಿ ಟೇಕಾಫ್ ಆಗುವ ಏರ್‌ ಆ್ಯಂಬುಲೆನ್ಸ್‌ ಶೀಘ್ರ ಭಾರತದಲ್ಲಿ ಲಭ್ಯ

1-ioo

Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?

1-vk

BCCI ಕಟ್ಟಪ್ಪಣೆಯಿಂದ ಸಂದಿಗ್ಧ; ತನ್ನಿಷ್ಟದ ಆಹಾರಕ್ಕೆ ಕೊಹ್ಲಿ ಹೊಸ ಮಾರ್ಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.