ಜೂನ್ 23, 24ರಂದು ತಜಿಕಿಸ್ತಾನದಲ್ಲಿ ಭಾರತ, ಪಾಕಿಸ್ತಾನ್, ಎನ್ ಎಸ್ ಎ ಸಭೆ
ಕಿರ್ಗಿಸ್ತಾನ್, ತಜಿಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಸೇರಿದಂತೆ ಎಂಟು ದೇಶಗಳನ್ನು ಒಳಗೊಂಡಿರುವುದಾಗಿ ವರದಿ ವಿವರಿಸಿದೆ.
Team Udayavani, Jun 19, 2021, 3:27 PM IST
ನವದೆಹಲಿ: ತಜಿಕಿಸ್ತಾನ್ ದುಶಾನ್ಬೆಯಲ್ಲಿ ಮುಂದಿನ ವಾರ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ(ಎಸ್ ಸಿಒ) ಸಭೆಯಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಪಾಕಿಸ್ತಾನದ ಎನ್ ಎಸ್ ಎ ಮೊಯೀದ್ ಯೂಸುಫ್ ಭಾಗವಹಿಸಲಿದ್ದಾರೆ. ಜೂನ್ 23, 24ರಂದು ಇತರ ದೇಶಗಳ ಎನ್ ಎಸ್ ಎ ಜೊತೆ ಸಭೆ ನಡೆಯಲಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ತನ್ನ ಕಿರಿಯ ಉದ್ಯೋಗಿಗಳಿಗೆ ಒಂದೇ ವರ್ಷದಲ್ಲಿ ಎರಡು ಬಾರಿ ವೇತನ ಹೆಚ್ಚು ಮಾಡಿದ ವಿಪ್ರೊ..!
ಆದರೆ ಮುಂದಿನ ವಾರ ನಡೆಯಲಿರುವ ಎನ್ ಎಸ್ ಎ ಅಧಿಕಾರಿಗಳ ದ್ವಿಪಕ್ಷೀಯ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಭಾರತ ಮತ್ತು ಪಾಕಿಸ್ತಾನ ಈವರೆಗೂ ಖಚಿತಪಡಿಸಿಲ್ಲ ಅಥವಾ ಸಭೆಯಿಂದ ದೂರ ಉಳಿಯಲಿದೆಯೇ ಎಂಬುದು ತಿಳಿದು ಬಂದಿಲ್ಲ ಎಂದು ವರದಿ ಹೇಳಿದೆ.
ಕಳೆದ ಕೆಲವು ತಿಂಗಳಿನಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಎಚ್ಚರಿಕೆಯ ನಡೆ ಮುಂದುವರಿಸಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ. ಈ ವರ್ಷದ ಫೆಬ್ರುವರಿಯಲ್ಲಿ ಕಾಶ್ಮೀರ ನಿಯಂತ್ರಣ ರೇಖೆಯಲ್ಲಿ 2003ರ ಕದನ ವಿರಾಮ ಒಪ್ಪಂದ ಬಗ್ಗೆ ಉಭಯ ಸೇನೆಯು ಸಮ್ಮತಿ ಸೂಚಿಸಿತ್ತು. ಆ ಬಳಿಕ ಯಾವುದೇ ಗುಂಡಿನ ದಾಳಿ ನಡೆದಿರಲಿಲ್ಲ ಎಂದು ವರದಿ ವಿವರಿಸಿದೆ.
ಇದಕ್ಕೂ ಮುನ್ನ ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ನಡೆದ ಸಭೆಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಖುರೇಷಿ ಕೂಡಾ ಹಾಜರಾಗಿದ್ದರು. ಆದರೆ ಇಬ್ಬರು ಒಂದೇ ಸ್ಥಳದಲ್ಲಿದ್ದರೂ ಯಾವುದೇ ಮಾತುಕತೆ ನಡೆದಿರಲಿಲ್ಲವಾಗಿತ್ತು. ಏಪ್ರಿಲ್ ನಲ್ಲಿ ದ್ವಿಪಕ್ಷೀಯ ಭೇಟಿಗಾಗಿ ಇಬ್ಬರು ಯುಎಗೆ ತೆರಳಿದ್ದರು.
ಮುಖ್ಯವಾಗಿ ಎಸ್ ಸಿಒನಲ್ಲಿ ರಷ್ಯಾ, ಚೀನಾ, ಭಾರತ, ಪಾಕಿಸ್ತಾನ, ಕಜಕಿಸ್ತಾನ್, ಕಿರ್ಗಿಸ್ತಾನ್, ತಜಿಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಸೇರಿದಂತೆ ಎಂಟು ದೇಶಗಳನ್ನು ಒಳಗೊಂಡಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.