ಗ್ರೀಷ್ಮದಲ್ಲಿ ಹೇಮಂತ: ಋತುಗಳೇ ಅದಲು ಬದಲು!


Team Udayavani, Jun 21, 2021, 6:40 AM IST

ಗ್ರೀಷ್ಮದಲ್ಲಿ ಹೇಮಂತ: ಋತುಗಳೇ ಅದಲು ಬದಲು!

ಪ್ರಕೃತಿಯ ಮಡಿಲಲ್ಲಿ ಅದೆಷ್ಟು ಅದ್ಭುತಗಳ್ಳೋ…

ಈಗ ಬಂದಿರುವ ದಕ್ಷಿಣಾಯನ ಪುಣ್ಯ ಕಾಲ, ಜೂನ್‌ 21, ಹೀಗೆಯೇ ಯಾವಾಗಲೂ ನಡೆಯುತ್ತಿದೆ ಅಂತೇನೂ ಇಲ್ಲ. ಕಾಲ ಕಳೆದಂತೆ, ಉತ್ತರಾಯಣ, ದಕ್ಷಿಣಾಯನವಾಗುತ್ತದೆ.ಋತುಗಳೇ ಅದಲುಬದಲಾಗಲಿದೆ. ಸುಮಾರು 13 ಸಾವಿರ ವರ್ಷಗಳ ಅನಂತರ.

ಇಂದು ಜೂನ್‌ 21. ದಕ್ಷಿಣಾಯನ ಪುಣ್ಯ ಕಾಲ. ಆರು ತಿಂಗಳ ಉತ್ತರಾಯಣ ಮುಗಿಸಿ ಸೂರ್ಯನ ದಕ್ಷಿಣ ಮುಖ ಚಲನೆ ಪ್ರಾರಂಭ. ಇದು ಡಿಸೆಂಬರ್‌ 21ರ ವರೆಗೆ. ಅಲ್ಲಿಂದ ಪುನಃ ಉತ್ತರಾಯಣ. ವರ್ಷದಲ್ಲಿ ಆರು ತಿಂಗಳು ಸೂರ್ಯ ಉತ್ತರಾಯಣ, ಆರು ತಿಂಗಳು ದಕ್ಷಿಣಾಯನ.

ಭೂಮಿಯ ಉತ್ತರಾರ್ಧ ಗೋಲದವರಿಗೆ ಈಗ ಬೇಸಗೆ ಕಾಲ, ಹಗಲು ಹೆಚ್ಚು. ಅದೇ ಈಗ ದಕ್ಷಿಣಾರ್ಧ ಗೋಲದವರಿಗೆ ಚಳಿಗಾಲ, ಹಗಲು ಕಡಿಮೆ. ಈ ಹಗಲು, ಭೂಮಧ್ಯ ರೇಖೆಯಿಂದ ಉತ್ತರಕ್ಕೆ ಹೋದಂತೆ ಹೆಚ್ಚುತ್ತಾ ಹೋಗಿ ಉತ್ತರ ಧ್ರುವ ಪ್ರದೇಶದಲ್ಲಿ 24 ಗಂಟೆ ಹಗಲು. ಆಗ ದಕ್ಷಿಣ ಧ್ರುವ ಪ್ರದೇಶದಲ್ಲಿ 24 ಗಂಟೆಯೂ ರಾತ್ರಿ. ಆದರೆ ಡಿಸೆಂಬರ್‌ 21 ರ ಸಮಯ ದಕ್ಷಿಣಾರ್ಧ ಗೋಲದವರಿಗೆ ಬೇಸಗೆ. ಹಗಲು ಹೆಚ್ಚು. ಉತ್ತರಾರ್ಧ ಗೋಲದವರಿಗೆ ಚಳಿಗಾಲ, ಹಗಲು ಕಡಿಮೆ, ರಾತ್ರಿ ಹೆಚ್ಚು.

ವರ್ಷದಲ್ಲಿ, ಎರಡು ದಿನಗಳಲ್ಲಿ ಅಂದರೆ ಮಾರ್ಚ್‌ 21 ಹಾಗೂ ಸೆಪ್ಟಂಬರ್‌ 21ರಂದು ಸೂರ್ಯ, ಭೂಮಧ್ಯ ರೇಖೆಗೆ ನೇರ ಬರುವುದರಿಂದ, ಇಡೀ ಭೂಮಿಯಲ್ಲಿ ಹಗಲು -ರಾತ್ರಿ ಸಮಾನ. 12 ಗಂಟೆ ಹಗಲು, 12 ಗಂಟೆ ರಾತ್ರಿ. ಈ ಎಲ್ಲ ಬದಲಾವಣೆಗಳಿಗೆ ಕಾರಣ, ಭೂಮಿ ಸೂರ್ಯನನ್ನು ಸುತ್ತುವ ಸಮತಲಕ್ಕೆ ನೇರವಾಗಿರದೇ, 23.5 ಡಿಗ್ರಿ ಓರೆಯಾಗಿರುವುದು.

ಇದೊಂದು ಭೂಮಿಯ ಸಕಲ ಚರಾಚರಗಳ ಭಾಗ್ಯ. ನಮಗಂತೂ ವರ್ಷದಲ್ಲಿ ಆರು ಋತುಗಳು, ವಸಂತ, ಗ್ರೀಷ್ಮ, ವರ್ಷ, ಶರತ್‌, ಹೇಮಂತ ಹಾಗೂ ಶಿಶಿರ. ಎರಡೆರಡು ತಿಂಗಳ ಆರು ಋತುಗಳು ಒಂದು ವರ್ಷದಲ್ಲಿ. ವಸಂತದಲ್ಲಿ ಹೊಸ ಚಿಗುರು, ಗ್ರೀಷ್ಮದಲ್ಲಿ ಸೆಖೆಯೋ ಸೆಖೆ. ವರ್ಷದಲ್ಲಿ ಜಡಿ ಮಳೆ. ಶರತ್‌ ಋತುವಿನಲ್ಲಿ ತಿಳಿನೀರಿನ ನದಿ, ಸ್ವತ್ಛ ಶುಭ್ರ ಆಕಾಶ. ಹೇಮಂತದಲ್ಲಿ ಮಳೆಗಾಲ ಕಳೆದು ಚಳಿ ಪ್ರಾರಂಭ. ಚಳಿ ಜೋರಾಗಿ ಹಾಗೆ ಕಡಿಮೆಯಾಗುವುದು ಶಿಶಿರದಲ್ಲಿ.

ಇವೆಲ್ಲ ಭೂಮಿಯ ಕೃಪೆ ನಮಗೆ. ಒಂದು ವೇಳೆ ಭೂಮಿಯ ತಿರುಗುವ ಅಕ್ಷ, ಸೂರ್ಯನ ಸುತ್ತ ತಿರುಗುವ ಸಮತಲಕ್ಕೆ ನೇರ ಲಂಬವಾಗಿದ್ದಿದ್ದರೆ ಅಂದರೆ 23.5 ಡಿಗ್ರಿ ವಾಲದೇ ಇದ್ದಿದ್ದರೆ ಈ ಎಲ್ಲ ಋತುಗಳೂ ಇರುತ್ತಿರಲಿಲ್ಲ. ನಮ್ಮ ಭೂಮಿ ನಮ್ಮ ಖುಷಿಗಾಗಿಯೇ ಬೇಕೆಂಬಷ್ಟೇ ವಾಲಿದೆಯೋ ಎನ್ನುವಂತಿದೆ.

ಭೂಮಿಗೆ ಮೂರು ವಿಧದ ಚಲನೆಗಳಿವೆ. ಒಂದು, ಭೂಮಿ ದಿನಕ್ಕೊಮ್ಮೆ 24 ಗಂಟೆಯಲ್ಲಿ ತನ್ನ ಅಕ್ಷದಲ್ಲಿ ತಿರುಗುವುದು. ಎರಡನೇಯದು, ಸೂರ್ಯನ ಸುತ್ತ 365 ದಿನಗಳಿಗೊಮ್ಮೆ ಸುತ್ತು ಬರುವುದು. ಇವೆರಡೂ ನಮಗೆ ನೇರ ಅನುಭವಕ್ಕೆ ಬರುವುದಿಲ್ಲ. ಹಗಲು ರಾತ್ರಿಗಳಿಂದ, ದಿನದ ಚಲನೆಯ ಅನುಭವ, ಹಾಗೆ ಋತುಗಳ ಬದಲಾವಣೆಯಿಂದ ವರ್ಷದ ಚಲನೆಯ ಅನುಭವ. ಭೂಮಿ ಸೂರ್ಯನ ಸುತ್ತ ಸುತ್ತುವ ವೇಗ ಸಾಮಾನ್ಯವೇನಲ್ಲ, 30 ಕಿ.ಮೀ., ಒಂದು ಸೆಕೆಂಡಿಗೆ. ಅಂದರೆ ಗಂಟೆಗೆ 1,08,000 ಕಿ. ಮೀ. ಇಷ್ಟು ವೇಗದಲ್ಲಿ ಯಾವ ವಾಹನವೂ ಚಲಿಸುವುದಿಲ್ಲ. ಆದರೆ ಈ ಚಲನೆ, ಭೂಮಿಯಲ್ಲಿರುವ ನಮಗೆ ಅನುಭ ವಕ್ಕೆ ಬರುವುದಿಲ್ಲವೇಕೆಂದರೆ ಅದರ ವೇಗ, ಒಂದೇ ರೀತಿ ಯಲ್ಲಿರುವುದು. ಬದಲಾವಣೆ ಇಲ್ಲದ, ಒಂದೇ ರೀತಿಯ ಚಲನೆ, ನಮ್ಮ ಗಮನಕ್ಕೆ ಬರುವುದಿಲ್ಲ. ಇದರ ಅನುಭವ ಋತು ಚಕ್ರದಿಂದ ಗೋಚರಿಸುತ್ತದೆ. ದಿನ ನಿತ್ಯವೂ ಭೂಮಿ ತನ್ನ ಅಕ್ಷದಲ್ಲಿ ತಿರುಗುವಾಗ ಅದರ ವೇಗ 1,600 ಕಿ.ಮೀ. ಗಂಟೆಗೆ. ಇದೂ ಅನುಭವಕ್ಕೆ ಬರುವುದಿಲ್ಲ. ಇದು ಹಗಲು ರಾತ್ರಿಗಳಿಂದ, ಸೂರ್ಯನ ಉದಯ, ಅಸ್ತಗಳಿಂದ ಗೋಚರವಾಗುತ್ತದೆ. ಇನ್ನೊಂದು ಚಲನೆ ಇದೆ. ಅದು, 23.5 ಡಿಗ್ರಿ ಓರೆಯಾಗಿರುವ ಭೂಮಿಯ ಅಕ್ಷದ್ದು. ಅದರ ತಿರುಗುವಿಕೆ. ಇದಕ್ಕೆ ಪ್ರಿಸಿಶನ್‌ (precession) ಎನ್ನುತ್ತಾರೆ. ಆಶ್ಚರ್ಯವೆಂದರೆ ಇದು ಒಂದು ಸುತ್ತಾಗಲು 26 ಸಾವಿರ ವರ್ಷ ಬೇಕು. ತುಂಬಾ ನಿಧಾನದ ಚಲನೆ. ಇದು 72 ವರ್ಷಗಳಲ್ಲಿ ಒಂದು ಡಿಗ್ರಿ ಕೋನೀಯ ಚಲನೆ ಮಾತ್ರ. ಹಾಗಾಗಿ ಸುಮಾರು ಒಂದು ಸಾವಿರ ವರ್ಷಗಳಲ್ಲೂ ಹೆಚ್ಚಿನ ಗಮನ ಸೆಳೆಯದು.

ಈ ರೀತಿಯ ಚಲನೆಯನ್ನು ನಾವು ನಮ್ಮ ಆಟದ ಬುಗುರಿಯಲ್ಲಿ ನೋಡುತ್ತೇವೆ. ಭೂಮಿ ಧ್ರುವ ಪ್ರದೇಶಗಳಲ್ಲಿ ಸ್ವಲ್ಪ ಚಪ್ಪಟೆಯಾಗಿ, ಭೂಮಧ್ಯ ಪ್ರದೇಶದಲ್ಲಿ ಉಬ್ಬಿರುವುದು ಹಾಗೂ ಸೂರ್ಯ, ಚಂದ್ರರ ಗುರುತ್ವ ಬಲ, ಭೂಮಿಯ ಈ ಚಲನೆಗೆ ಕಾರಣ. ಈ ಚಲನೆಯಿಂದ ಈಗ ಭೂಮಿಯ ಅಕ್ಷ ನೇರವಾಗಿ ಧ್ರುವ ನಕ್ಷತ್ರದ ಕಡೆಗಿದ್ದರೆ 13,000 ವರ್ಷಗಳ ಅನಂತರ ಅದು ಅಭಿಜಿತ್‌ ನಕ್ಷತ್ರಕ್ಕೆ (vega) ನೇರವಾಗಿರುತ್ತದೆ. ಆಗ ಜೂನ್‌ 21 ರಂದು ದಕ್ಷಿಣಾಯನದ ಬದಲು ಉತ್ತರಾಯಣ ಏರ್ಪಟ್ಟು ಋತುಗಳು ಏರು ಪೇರಾಗುತ್ತವೆ. ಬದಲಾವಣೆಗಳೇ ಪ್ರಕೃತಿಯ ಸಹಜ ಸ್ವಭಾವಗಳ್ಳೋ ಎನ್ನುವಂತಿದೆ.

– ಡಾ| ಎ. ಪಿ. ಭಟ್‌, ಉಡುಪಿ

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.