ಮೂರನೇ ಅಲೆ ಬಗ್ಗೆ ಜಾಗೃತಿ ಅಗತ್ಯ: ಡಿಸಿಎಂ ಅಜಿತ್‌ ಪವಾರ್‌


Team Udayavani, Jun 21, 2021, 2:53 PM IST

covid news

ಬಾರಾಮತಿ: ಬಾರಾಮತಿ ನಗರ ಸಹಿತ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಕಡಿಮೆಯಾದ ಕಾರಣ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಆದರೆ ಕೊರೊನಾ ಮೂರನೇ ಅಲೆ ಬಗ್ಗೆ ನಗರಗಳಲ್ಲಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವ ಆವಶ್ಯಕತೆಯಿದೆ. ಆಡಳಿತವು ಕಪ್ಪು ಶಿಲೀಂಧ್ರ ರೋಗಿಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಪಾಸಿಟಿವ್‌ ದರದ ಆಧಾರದ ಮೇಲೆ ನಿರ್ಬಂಧಗಳನ್ನು ಸಡಿಲಿಸುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಅಜಿತ್‌ ಪವಾರ್‌ ಹೇಳಿದ್ದಾರೆ.

ಬಾರಾಮತಿಯ ವಿದ್ಯಾ ಪ್ರತಿಷ್ಠಾನದ ಸಭಾಂಗಣದಲ್ಲಿ ಕೋವಿಡ್‌ -19 ಪರಿಸ್ಥಿತಿ ಮತ್ತು ಕ್ರಮಗಳ ಪರಿಶೀಲನೆ ಸಭೆಯಲ್ಲಿ ಅವರು ಬಾರಾ‌ಮತಿ ನಗರ ಸಹಿತ ತಾಲೂಕಿನಲ್ಲಿ ಪ್ರಸ್ತುತ ಕೊರೊನಾ ವೈರಸ್‌ ಸ್ಥಿತಿ, ಕಪ್ಪು  ಶಿಲೀಂಧ್ರ ಪ್ರಸ್ತುತ ಸ್ಥಿತಿ, ಆಡಳಿತವು ಕೈಗೊಳ್ಳಬೇಕಾದ ಕ್ರಮಗಳು, ಮಕ್ಕಳಿಗೆ ವೈದ್ಯಕೀಯ ಸೌಲಭ್ಯಗಳು ಮತ್ತು ಲಸಿಕೆ, ಆಮ್ಲಜನಕದ ಲಭ್ಯತೆ, ಆರೋಗ್ಯದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಹೆಚ್ಚುವರಿ ಕೊರೊನಾ ರೋಗಿಗಳಿರುವ ಸ್ಥಳಗಳಲ್ಲಿ ಹಾಟ್‌ಸ್ಪಾಟ್‌ಗಳನ್ನು ಘೋಷಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು. ಆಮ್ಲಜನಕದ ಮಟ್ಟವನ್ನು ಪರೀಕ್ಷಿಸಬೇಕು. ಆಮ್ಲಜನಕದ ಮಟ್ಟವು ಕಡಿಮೆಯಾಗಿದೆ ಎಂದು ಕಂಡುಬಂದಲ್ಲಿ ರೋಗಿಯನ್ನು ತತ್‌ಕ್ಷಣವೇ ಬೇರೆಡೆ ಸ್ಥಳಾಂತರಿಸುವ ವ್ಯವಸ್ಥೆ ಮಾಡ‌ಬೇಕು ಎಂದು ಅಜಿತ್‌ ಪವಾರ್‌ ಹೇಳಿದರು.

ಬಾರಾಮತಿ ತಾಲೂಕಿನಲ್ಲಿ ಎರಡನೇ ಅಲೆಯಲ್ಲಿ  ವಯೋಮಿತಿಯ ಆಧಾರದ ಮೇಲೆ ಎಷ್ಟು ಮಂದಿ ಸಾವನ್ನಪ್ಪಿದ್ದರು ಮತ್ತು ಅವರಲ್ಲಿ ಎಷ್ಟು ಜನರಿಗೆ ಇತರ ಕಾಯಿಲೆಗಳಿವೆ ಎಂಬ ಚಾರ್ಟ್‌ ಅನ್ನು ವೈದ್ಯಕೀಯ ಅಧಿಕಾರಿಗಳು ಸಿದ್ಧಪಡಿಸಬೇಕು. ಮೂರನೇ ಅಲೆ ಸಾಧ್ಯತೆ ಪರಿಗಣಿಸಿ ನಾಗರಿಕರು ಹೆಚ್ಚು ಜಾಗರೂಕರಾಗಿರಬೇಕು ಮತ್ತು ಅಗತ್ಯ ನಿಯಮಗಳನ್ನು ಪಾಲಿಸಬೇಕು. ಮಕ್ಕಳಿಗೆ ಆಗುವ ಅಪಾಯವನ್ನು ಪರಿಗಣಿಸಿ, ಎÇÉಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಪವಾರ್‌ ಹೇಳಿದರು.

ಸರಿಯಾದ ಯೋಜನೆ

ಜನಸಂದಣಿ ನಿಯಂತ್ರಿಸಲು ಪೊಲೀಸ್‌ ಆಡಳಿತವು ಕ್ರಮ ತೆಗೆದುಕೊಳ್ಳುವ ಆವಶ್ಯಕತೆ ಯಿದೆ. ಎಲ್ಲ ಆಸ್ಪತ್ರೆಗಳಲ್ಲಿ ಆಮ್ಲಜನಕ ಹಾಸಿಗೆ ಗಳನ್ನು ಒದಗಿಸುವುದನ್ನು ಖಾತ್ರಿಪಡಿಸಿಕೊಳ್ಳ ಬೇಕು. ಮೂರನೇ ಅಲೆಯ ಅಪಾಯವನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವ ಅವಶ್ಯಕತೆಯಿದೆ. ವ್ಯಾಕ್ಸಿನೇಶನ್‌ಗಳ ಸರಿಯಾದ ಯೋಜನೆ, ಕಪ್ಪು ಶಿಲೀಂಧ್ರದಿಂದ ಪೀಡಿತ ರೋಗಿಗೊಳ ಚಿಕಿತ್ಸೆಗೆ ಚುಚ್ಚುಮದ್ದಿನ ಸರಿಯಾದ ಯೋಜನೆ ಅತ್ಯಗತ್ಯ ಎಂದವರು ತಿಳಿಸಿದರು.

ಆಡಳಿತ ಮಂಡಳಿ ಕೈಗೊಳ್ಳುತ್ತಿರುವ ಕ್ರಮ ಗಳ ಬಗ್ಗೆ ಉಪ ವಿಭಾಗೀಯ ಅಧಿಕಾರಿ ದಾದಾಸಾಹೇಬ್‌ ಕಾಂಬ್ಳೆ ಮಾಹಿತಿ ನೀಡಿದರು. ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಸಂಭವನೀಯ 3ನೇ ಅಲೆ ಯನ್ನು  ಎದುರಿಸಲು ಸಿದ್ಧತೆಗಳು, ಆಮ್ಲಜನಕ ಮತ್ತು ಕಪ್ಪು  ಶಿಲೀಂಧ್ರ ರೋಗಿಗಳ ಒದಗಿಸುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ  ಬಾರಾಮತಿ ಮುನ್ಸಿಪಲ್‌ ಕೌನ್ಸಿಲ್‌ ಮೇಯರ್‌ ಪೂರ್ಣಿಮಾ ತಾವಾರೆ, ಪಂ. ಸಮಿತಿ ಅಧ್ಯಕ್ಷೆ ನೀತಾ ಫರಾಂಡೆ, ಉಪ ಮೇಯರ್‌ ಅಭಿಜೀತ್‌ ಜಾಧವ್‌, ಪಂ. ಸಮಿತಿ ಉಪಾಧ್ಯಕ್ಷ ರೋಹಿತ್‌ ಕೊಕರೆ, ಉಪಮುಖ್ಯಮಂತ್ರಿ ಕಚೇರಿ ಯ ಉಪ ಕಾರ್ಯದರ್ಶಿ ನಂದಕುಮಾರ್‌ ಕಟ್ಕರ್‌ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.