ಡೆಲ್ಟಾ ಪ್ಲಸ್ ಹರಡದಂತೆ ಕೂಡಲೇ ಕ್ರಮ ವಹಿಸಿ: ಸರ್ಕಾರಕ್ಕೆ ಪತ್ರ ಬರೆದ ಸಿದ್ದರಾಮಯ್ಯ


Team Udayavani, Jun 24, 2021, 2:59 PM IST

ಡೆಲ್ಟಾ ಪ್ಲಸ್ ಹರಡದಂತೆ ಕೂಡಲೇ ಕ್ರಮ ವಹಿಸಿ: ಸರ್ಕಾರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್ ಎರಡನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ಇನ್ನಷ್ಟು ಉಗ್ರವಾದ ರೂಪಾಂತರಿ ವೈರಸ್ಸು ದೇಶದಲ್ಲಿ ಮತ್ತೆ ವೇಗವಾಗಿ ಹರಡುವ ಭೀತಿ ಸೃಷ್ಟಿಯಾಗಿದೆ. ಇದನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ರೀತಿಯ ಕ್ರಮಗಳನ್ನು ಶೀಘ್ರವೇ ತೆಗೆದುಕೊಳ್ಳಬೇಕಾಗಿದೆ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿರುವ ಅವರು, ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಲವಾರು ಸಲಹೆ ನೀಡಿದ್ದಾರೆ.

ದೇಶದ ಶೇ.80 ರಷ್ಟು ಜನರಿಗೆ ಲಸಿಕೆ ನೀಡುವವರೆಗೆ ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸುವುದು ಸೂಕ್ತ. ದೇಶದ ಯಾವ ಯಾವ ಸ್ಥಳಗಳಲ್ಲಿಕೋವಿಡ್ ವೈರಸ್ ನ ಡೆಲ್ಟಾ ಪ್ಲಸ್ ಪ್ರಬೇಧ ಪತ್ತೆಯಾಗಿದೆಯೊ ಆ ಸ್ಥಳಗಳ ಕುರಿತು ತೀವ್ರ ನಿಗಾ ವಹಿಸಿ ಇತರರಿಗೆ ಹರಡದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

ಹೊಸ ಹೊಸ ತಳಿಗಳಾಗಿ ಅತ್ಯಂತ ವೇಗವಾಗಿ ರೂಪಾಂತರ ಹೊಂದುತ್ತಿದೆ. ಪರಿಸ್ಥಿತಿ ಹೀಗಿರುವಾಗ ಸರ್ಕಾರಗಳು ವ್ಯಾಪಕವಾಗಿ ಮತ್ತು ಉಚಿತವಾಗಿ ಸಾರ್ವಜನಿಕ ಆಂದೋಲನಗಳ ಮೂಲಕ ಲಸಿಕೆಗಳನ್ನು ನೀಡಬೇಕು. ಈಗ ರಾಜ್ಯಗಳ ಬಳಿ 2.5 ಕೋಟಿ ಡೋಸ್ ಲಸಿಕೆಗಳಿವೆ ಎಂದು ಬೇರೆ ಹೇಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳ ಬಳಿ ಎಷ್ಟಿವೆ ಎಂದು ಹೇಳುತ್ತಿಲ್ಲ. ಲಸಿಕೆ ಉತ್ಪಾದಕ ಕಂಪೆನಿಗಳು ಪ್ರತಿ ದಿನ ಸರ್ಕಾರಕ್ಕೆ ಮತ್ತು ಖಾಸಗಿಯವರಿಗೆ ನೀಡಿದ ಲಸಿಕೆಗಳ ಕುರಿತು ಪ್ರಕಟಣೆಗಳನ್ನು ಹೊರಡಿಸಬೇಕು. ಮೂರನೆ ಅಲೆಯ ಕುರಿತು ತಜ್ಞರು ಮಾಡಿರುವ ಶಿಫಾರಸ್ಸುಗಳಂತೆ, ಖಾಸಗಿ ಆಸ್ಪತ್ರೆಗಳು ಕಂಪೆನಿಗಳಿಂದ ಲಸಿಕೆಗಳನ್ನು ಸ್ವೀಕರಿಸಿ ಗರಿಷ್ಠ 10 ದಿನಗಳ ಕಾಲ ಮಾತ್ರ ದಾಸ್ತಾನಿರಿಸಿಕೊಳ್ಳಬೇಕೆಂಬ ಕುರಿತು ಆದೇಶ ಹೊರಡಿಸುವಂತೆ ತಿಳಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುರ್ತಾಗಿ ಮಾಡಬೇಕಾದ ಕೆಲಸ ಇದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ:ಸುತ್ತೂರು ಮಠಕ್ಕೆ ಪರಮೇಶ್ವರ್ ಭೇಟಿ : ಮುಂದಿನ ಸಿಎಂ ಎಂದು ಕೂಗಿದ ಅಭಿಮಾನಿಗಳು

ದೇಶದ ಸಮಸ್ತ ಜನರಿಗೆ ಮುಂದಿನ ಮೂರು- ನಾಲ್ಕು ತಿಂಗಳಲ್ಲಿ ಲಸಿಕೆ ಹಾಕುವಷ್ಟು ಪ್ರಮಾಣದಲ್ಲಿ ಉತ್ಪಾದಿಸಲು ಲಸಿಕೆಗಳ ಮೇಲಿನ ಪೇಟೆಂಟುಗಳನ್ನು ಮೊದಲು ಕಿತ್ತು ಹಾಕಬೇಕು ಎಂದು ಸಿದ್ದರಾಮಯ್ಯ ಅವರು ಸಲಹೆ ನೀಡಿದ್ದಾರೆ.

ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ಓಲೈಕೆ ಮನಸ್ಥಿತಿಯಿಂದ ಹೊರಬಂದು, ಅವುಗಳ ಮೇಲೆ ಪ್ರಬಲ ಹಿಡಿತ ಸಾಧಿಸಬೇಕು. ಕೊರೋನ ಲಸಿಕೆಗಳನ್ನು ‘ಜೆನೆರಿಕ್ ಡ್ರಗ್’ಗಳ ವ್ಯಾಪ್ತಿಗೆ ತಂದು ಸರ್ಕಾರಗಲೇ ಉತ್ಪಾದನೆ ಮತ್ತು ವಿತರಣೆಗಳನ್ನು ನಿಯಂತ್ರಿಸಬೇಕು. ಹೀಗಾದರೆ ಗರಿಷ್ಠ 50 ರೂಪಾಯಿಗಳಿಗೆ ಲಸಿಕೆ ದೊರೆಯುತ್ತದೆ ಎಂದು ಹೇಳಿದ್ದಾರೆ.

ಮೋದಿಯವರು ಜೂನ್ 30 ರಂದು ‘ಕೋವಿನ್ ಗ್ಲೋಬಲ್ ಕಾನ್‍ಕ್ಲೇವ್’ ನಡೆಸಲು ಉದ್ದೇಶಿಸಿದ್ದಾರೆಂಬ ಮಾಹಿತಿ ಇದೆ. ಈ ಸಮಾವೇಶದಲ್ಲಿ ಭಾರತವು ಕೋವಿಡ್ ಎದುರಿಸಿದ ರೀತಿಗಳನ್ನು ತಿಳಿಸುವುದಾಗಿ ಹೇಳಿದ್ದಾರೆ. ಇದಂತೂ ಅತ್ಯಂತ ನಾಚಿಕೆಗೇಡಿನ ಮತ್ತು ಅಸೂಕ್ಷ್ಮವಾದ ವಿಷಯ. ಕಳೆದ ಮಾರ್ಚ್ ತಿಂಗಳಿಂದ ದೇಶದಲ್ಲಿ ಏನೇನಾಯಿತು ಎಂದು ಜನರು ಮರೆತು ಬಿಟ್ಟಿದ್ದಾರೆಯೆ? ಹೃದಯವಿರುವ ಮನುಷ್ಯನಿಗೆ ಭೀಕರ ಪಶ್ಚಾತ್ತಾಪ, ಪಾಪಪ್ರಜ್ಞೆಗಳು ಕಾಡಬೇಕಾಗಿತ್ತು. ಅದರ ಬದಲಾಗಿ ಕೋವಿಡ್ ವಿರುದ್ಧ ವಿಜಯ ಸಾಧಿಸಿ ಬಿಟ್ಟಿದ್ದೇವೆ ಎಂಬಂತೆ ವಿಶ್ವದ ಜನರಿಗೆ ತಿಳಿಸಲು ಹೊರಟಿರುವುದನ್ನು ಏನೆನ್ನಬೇಕು? ಇದನ್ನು ನೋಡಿದರೆ ನಮ್ಮ ಪ್ರಧಾನಮಂತ್ರಿಗಳ ಹೃದಯದಲ್ಲಿ ಒಬ್ಬ ಮನುಷ್ಯನಿದ್ದಾನೆ ಎನ್ನಿಸುತ್ತದೆಯೆ? ಮೋದಿಯವರು ತಮ್ಮ ಸಾಧನೆಗಳ ಜಾಗತಿಕ ಸಮಾವೇಶ ನಡೆಸುವ ಬದಲು ವಿಶ್ವದ ನಾಯಕರುಗಳನ್ನು ಒತ್ತಾಯಿಸಿ ಕೋವಿಡ್ ಲಸಿಕೆಯ ಮೇಲಿನ ಪೇಟೆಂಟುಗಳನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಜಾಗತಿಕ ಸಮಸ್ಯೆಗೆ ಜಾಗತಿಕ ಪರಿಹಾರಗಳೆ ಬೇಕಾಗುತ್ತವೆಯೆ ಹೊರತು ಸ್ಥಳೀಯವಾಗಿ ಪರಿಹಾರ ಕಂಡುಕೊಳ್ಳಲಾಗದು. ಆದ್ದರಿಂದ ವಿಶ್ವ ಸಂಸ್ಥೆ ಮತ್ತು ವಿಶ್ವ ಆರೋಗ್ಯ ಸಂಸ್ಥೆಗಳು ಕ್ರಿಯಾಶೀಲಗೊಂಡು ಸದ್ಯದ ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ಸಾಮೂಹಿಕ ಪ್ರಯತ್ನಗಳಾಗಬೇಕೆಂದು ಒತ್ತಾಯಿಸಬೇಕು. ಯಾಕೆಂದರೆ ವಿಶ್ವದ ಯಾವುದೋ ಭಾಗದಲ್ಲಿ ರೂಪಾಂತರಗೊಂಡ ವೈರಸ್ಸು ಬೆಂಕಿಯಂತೆ ಜಗತ್ತನ್ನು ಆವರಿಸಿ ಬಿಡಬಹುದು. ಹಾಗಾಗಿ ವಿವೇಕವುಳ್ಳ, ವೈಜ್ಞಾನಿಕ ಮನೋಭಾವವುಳ್ಳ ಮನುಷ್ಯರು ಒತ್ತಾಯಿಸಬೇಕಾದ ಕ್ರಮಗಳಿವು.  ಈ ಸಲಹೆಗಳನ್ನು ಪ್ರಧಾನಿ ಮೋದಿಯವರಿಗೆ ತಿಳಿಸಿ ಅತ್ಯಂತ ತುರ್ತಾಗಿ ಮನುಷ್ಯ ಪರವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುವ ಜವಾಬ್ಧಾರಿ ರಾಜ್ಯದ ಆಯ್ಕೆಯಾದ ಸಂಸದರು ಮತ್ತು ಕೇಂದ್ರದ ಸಚಿವರುಗಳ ಮೇಲೆ ಇದೆ. ರಾಜ್ಯದ ಮುಖ್ಯಮಂತ್ರಿಗಳೂ ಕೂಡ ಈ ಕುರಿತು ಪ್ರಧಾನಿಗಳನ್ನು ಒತ್ತಾಯಿಸಬೇಕೆಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.