ಬಸ್ ಟಿಕೆಟ್ ದರ ಏರಿಕೆ; ಸರಕಾರದ ನಿರ್ಧಾರವನ್ನು ಖಂಡಿಸಿದ ಉಡುಪಿ ಬ್ಲಾಕ್ ಕಾಂಗ್ರೆಸ್  


Team Udayavani, Jun 26, 2021, 5:06 PM IST

ಬಸ್ ಟಿಕೆಟ್ ದರ ಏರಿಕೆ; ಸರಕಾರದ ನಿರ್ಧಾರವನ್ನು ಖಂಡಿಸಿದ ಉಡುಪಿ ಬ್ಲಾಕ್ ಕಾಂಗ್ರೆಸ್  

ಉಡುಪಿ: ಕೋವಿಡ್-19 ಲಾಕ್‌ಡೌನ್ ಮೊದಲು ಖಾಸಗಿ ಬಸ್ ಟಿಕೇಟು ದರ 13 ರೂಪಾಯಿ ಇದ್ದದ್ದು ಮೊದಲ ಅಲೆ ನಂತರ 50% ಪ್ರಯಾಣಿಕರಿಗೆ ಅವಕಾಶ ನೀಡಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಬಸ್ ಓಡಿಸಿದಾಗ 20 ರೂಪಾಯಿಯಾಯಿತು. ಲಾಕ್‌ಡೌನ್ ಸಡಿಲ ಆದಾಗಲೂ ಇಂಧನ ಬೆಲೆ ಏರಿಕೆಯ ನೆಪವೊಡ್ಡಿ ಯಾವುದೇ ಬಸ್‌ನವರೂ ಟಿಕೇಟು ದರವನ್ನು ಪೂರ್ವದರಕ್ಕೆ ಇಳಿಸಲಿಲ್ಲ.

ಈಗ ಕೋವಿಡ್ 19 ಎರಡನೇ ಅಲೆಯ ಲಾಕ್‌ಡೌನ್ ಸಡಿಲಿಕೆ ಆದಾಗ ಪುನಃ 50% ಪ್ರಯಾಣಿಕರಿಗೆ ಬಸ್‌ನಲ್ಲಿ ಅವಕಾಶ ನೀಡುವ ಮಾರ್ಗಸೂಚಿ ಅನುಸರಿಸುವಾಗ ಶೇ.25 ಟಿಕೇಟು ದರ ಹೆಚ್ಚಿಸುವ ಸರಕಾರದ ನಿರ್ಧಾರವನ್ನು ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಜನಸಾಮಾನ್ಯರ ಸುಲಿಗೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಖಂಡಿಸಿದೆ.

ಇದನ್ನೂ ಓದಿ: ಯಾರಾದ್ರೂ ಸಿಎಂ ಆಗಲಿ ರಾಜ್ಯದ ಜನರನ್ನು ಕೋವಿಡ್ ಇಂದ ರಕ್ಷಣೆ ಮಾಡಬೇಕು : ಬೇಳೂರು

ಕೆಲವೇ ತಿಂಗಳುಗಳಲ್ಲಿ 2 ಬಾರಿ ಬಸ್ ಟಿಕೇಟು ದರ ಏರಿಸುವುದು ಕಾನೂನು ಪ್ರಕಾರ ಸರಿಯೇ ? ಕಳೆದೆರಡು ವರ್ಷದಿಂದ ಖಾಸಗಿ ಬಸ್‌ಗಳ ದರ ಸುಮಾರು 100% ಜಾಸ್ತಿಯಾದ ಹಾಗಾಗುತ್ತದೆ. 13 ರೂಪಾಯಿ ಇದ್ದ ದರ ರೂ. 20 ಆಗಿ ಈಗ ರೂ. 25 ಆಗುವ ಸಾಧ್ಯತೆ ಇದೆ. ಬಸ್‌ನ ಮಾಲಿಕರಿಂದ ತೆರಿಗೆ ಪಡೆಯುವಾಗ ಅದರಲ್ಲಿ ನಿರ್ದಿಷ್ಟ ಮೊಬಲಗನ್ನು ಕಾದಿರಿಸಿ ಪ್ರಕೃತಿ ವಿಕೋಪ ಯಾ ಇಂಧನ ಬೆಲೆ ಮಿತಿ ಮೀರಿದಾಗ ಬಳಸುವ ಡೀಸೆಲ್‌ಗೆ ಸಬ್ಸಿಡಿ ನೀಡಿ, ಸರಕಾರ ಸಹಾಯ ಮಾಡಬೇಕು. ಅಲ್ಲದೆ 2 ಲಾಕ್‌ಡೌನ್ ಅವಧಿಯಲ್ಲಿ ಕಟ್ಟಬೇಕಾದ ತೆರಿಗೆಯನ್ನು ಸರಕಾರ ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ಲಾಕ್‌ಡೌನ್ ಅವಧಿಯ ಬಸ್‌ನ ಸಾಲದ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಬೇಕು. ಬಸ್‌ನ ಚಾಲಕರು ಹಾಗೂ ನಿರ್ವಾಹಕರು ಸಂಕಷ್ಟದಲ್ಲಿರುವ ಅವರ ಖಾತೆಗೆ ಕನಿಷ್ಠ 10,000 ರೂಪಾಯಿಯನ್ನು ಸರಕಾರ ವರ್ಗಾಯಿಸುವಂತೆ ಬ್ಲಾಕ್ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ.

ಬಸ್ ಮಾಲಕರಿಗೆ, ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಸರಕಾರ ಯಾವುದೇ ಆರ್ಥಿಕ ನೆರವು ನೀಡದೇ 2 ಲಾಕ್‌ಡೌನ್ ಮುಕ್ತಾಯದ ಸಂದರ್ಭದಲ್ಲಿಯೂ ಬಸ್ ದರ ಏರಿಸುವ ಮೂಲಕ ಪೆಟ್ರೋಲ್ ಗ್ಯಾಸ್, ದಿನಸಿ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರ ಸುಲಿಗೆ ಮಾಡುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸತೀಶ್ ಅಮೀನ್ ಪಡುಕೆರೆ, ಉಪಾಧ್ಯಕ್ಷರಾದ ಸದಾಶಿವ ಅಮೀನ್ ಕಟ್ಟೆಗುಡ್ಡೆ, ನಗರಸಭೆಯ ವಿರೋಧ ಪಕ್ಷದ ನಾಯಕರಾದ ರಮೇಶ್ ಕಾಂಚನ್, ನಗರಸಭಾ ಸದಸ್ಯರಾದ ವಿಜಯ ಪೂಜಾರಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ್ ಭಂಡಾರ್ಕಾರ್, ಬ್ಲಾಕ್ ಎಸ್.ಸಿ. ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ, ಮಾಜಿ ನಗರಸಭಾ ಸದಸ್ಯರುಗಳಾದ ಶಶಿರಾಜ್ ಕುಂದರ್, ಸುಕೇಶ್ ಕುಂದರ್ ಖಂಡಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.