ಬಿಜೆಪಿ ಕಾರ್ಯಕರ್ತರಿಂದ ಬೀಜದುಂಡೆ ತಯಾರಿಕೆ


Team Udayavani, Jun 28, 2021, 10:54 PM IST

28-20

ಚಿತ್ರದುರ್ಗ: ಪರಿಸರ ದಿನಾಚರಣೆ ಅಂಗವಾಗಿ ನಗರದ ಅಕ್ಕಮಹಾದೇವಿ ಸಮಾಜದ ಆವರಣದಲ್ಲಿ ಭಾನುವಾರ ಬಿಜೆಪಿ ಕಾರ್ಯಕರ್ತರು ಪ್ರಧಾನಮಂತ್ರಿಗಳ ಮನ್‌ ಕೀ ಬಾತ್‌ ಆಲಿಸುತ್ತಾ ಬೀಜದುಂಡೆ(ಸೀಡ್‌ಬಾಲ್‌) ತಯಾರಿಸಿದರು. ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮಾತನಾಡಿ, ಸಸಿಗಳನ್ನು ನೆಡುವುದು ಮಾತ್ರ ಪರಿಸರ ದಿನಾಚರಣೆಯಲ್ಲ. ನೆಟ್ಟ ಸಸಿಗಳನ್ನು ಪೋಷಣೆ ಮಾಡಿ ಮರವಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಹಲವು ವರ್ಷಗಳಿಂದ ಪರಿಸರ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ. ಬಹುತೇಕರು ಸಸಿ ನೆಟ್ಟ ನಂತರ ಮತ್ತೆ ಆ ಕಡೆ ತಿರುಗಿಯೂ ನೋಡುವುದಿಲ್ಲ. ಈ ಇದರಿಂದ ಪರಿಸರ ರಕ್ಷಣೆ ಆಗುವುದಿಲ್ಲ. ಅರಣ್ಯವೂ ಉಳಿಯುವುದಿಲ್ಲ. ಮಾನವನ ಅಗತ್ಯಕ್ಕೆ ಮರಗಳನ್ನು ಕಡಿಯಲಾಗುತ್ತದೆ, ಕಡಿಯುವಾಗ ಇರುವ ಆಸಕ್ತಿ ಬೆಳಸುವುದರಲ್ಲಿ ಇಲ್ಲವಾಗುತ್ತಿದೆ ಎಂದರು.

ನಾವು ಸಣ್ಣವರಾಗಿದ್ದಾಗಲೂ ಪರಿಸರ ದಿನಾಚರಣೆ ಮಾಡಲಾಗುತ್ತಿದೆ. ಆದರೆಲ, ಪರಿಸರ ಮಾತ್ರ ಇದ್ದ ಹಾಗೆಯೇ ಇದೆ. ಹೆಚ್ಚಾಗಿಲ್ಲ. ನಿಜವಾದ ಅರ್ಥದಲ್ಲಿ ಪರಿಸರ ಬೆಳೆದಿಲ್ಲ. ಈ ನಿಟ್ಟಿನಲ್ಲಿ ಎಲ್ಲರೂ ಆತ್ಮಾವಲೋಕನ ಮಾಡಿಕೊಂಡು, ನೆಟ್ಟ ಸಸಿಗಳನ್ನು ಬೆಳೆಸುವುದು ನಮ್ಮ ಜವಾಬ್ದಾರಿ ಎಂದು ಮುಂದುವರಿಯಬೇಕು ಎಂದು ಹೇಳಿದರು.

ಚಿತ್ರದುರ್ಗದಲ್ಲಿ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇದಕ್ಕಾಗಿ ಮರಗಳನ್ನು ಕಡಿಯಲಾಗಿದೆ. ಇದಕ್ಕೆ ಪರ್ಯಾಯವಾಗಿ ಸಸಿಗಳನ್ನು ನೆಡುವ ಕಾರ್ಯವನ್ನು ಮುಂದಿನ ದಿನಗಳಲ್ಲಿ ಎಲ್ಲರೂ ಸೇರಿ ಮಾಡೋಣ. ಇದಕ್ಕೆ ಅಗತ್ಯವಿರುವ ಸಸಿಗಳು, ಗುಂಡಿ ತೆಗೆಸುವುದನ್ನು ಮಾಡಲಾಗುತ್ತದೆ ಎಂದು ಶಾಸಕ ತಿಪ್ಪಾರೆಡ್ಡಿ ತಿಳಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ನವೀನ್‌ ಮಾತನಾಡಿ, ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕಿದೆ. ಮಾನವನಿಗೆ ಅತ್ಯಗತ್ಯವಾಗಿರುವ ಆಮ್ಲಜನಕ ಮರಗಳಿಂದ ಮಾತ್ರ ದೊರೆಯುತ್ತದೆ ಎಂದರು. ಕೊರೊನಾ ಎರಡನೇ ಅಲೆಯಲ್ಲಿ ಜನ ಆಮ್ಲಜನಕಕ್ಕಾಗಿ ಪರದಾಡುವ ಸ್ಥಿತಿಯಿತ್ತು. ಸಾಕಷ್ಟು ಸಂಖ್ಯೆಯಲ್ಲಿ ಮರಗಳನ್ನು ಬೆಳೆಸಿದರೆ ಮುಂದೆ ಇಂತಹ ಸಮಸ್ಯೆ ಉದ್ಭವವಾಗುವುದಿಲ್ಲ ಎಂದು ಹೇಳಿದರು.

ಮುಂದಿನ ದಿನಮಾನದಲ್ಲಿ ಬೂತ್‌ ಮಟ್ಟದಲ್ಲಿ ಮನಕಿ ಬಾತ್‌ ಕಾರ್ಯಕ್ರಮವನ್ನು ಎಲ್ಲರು ಕೇಳುವಂತಾಗಬೇಕಿದೆ. ಇದಕ್ಕೆ ಬೇಕಾದ ವಾತಾವರಣವನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಕಲ್ಪಿಸಬೇಕಿದೆ. ನರೇಂದ್ರ ಮೋದಿ ಪ್ರಧಾನಿಯಾದ ದಿನದಿಂದ ಈವರೆಗೆ ಮನ್‌ ಕೀ ಬಾತ್‌ ಮೂಲಕ ದೇಶದ ಜನರ ಸಮಸ್ಯೆ ಪರಿಹರಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರುಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಸಿದ್ದೇಶ್‌ ಯಾದವ್‌, ನಂದಿ ನಾಗರಾಜ್‌, ವೆಂಕಟೇಶ್‌ ಯಾದವ್‌, ಶೈಲಜಾ ರೆಡ್ಡಿ, ಹನುಮಂತಗೌಡ, ನಗರಾಧ್ಯಕ್ಷ ಶಶಿಧರ್‌, ವಕ್ತಾರ ನಾಗರಾಜ್‌ ಬೇದ್ರೆ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-dddasasa

Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.