ಜು.1ರಿಂದ ವಿದ್ಯಾರ್ಥಿಗಳಿಗಾಗಿ ವಿಶೇಷ ಲಸಿಕಾ ಅಭಿಯಾನ


Team Udayavani, Jun 29, 2021, 11:06 PM IST

29-20

ಶಿವಮೊಗ್ಗ: ವಿದ್ಯಾರ್ಥಿಗಳಿಗಾಗಿ ವಿಶೇಷ ಲಸಿಕಾ ಅಭಿಯಾನವನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜು.1 ರಿಂದ 3 ರ ವರೆಗೆ ಆಯೋಜಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಎಂಪಿಎಲ್‌ ನ್ಪೋರ್ಟ್ಸ್ ಫೌಂಡೇಷನ್‌, ಸೇವಾ ಭಾರತಿ ಕರ್ನಾಟಕ, ಪಿಇಎಸ್‌ ಶಿವಮೊಗ್ಗ, ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಜು. 1,2,3 ರಂದು ಶಿವಮೊಗ್ಗ ನಗರ ಹೊರತುಪಡಿಸಿ ಶಿವಮೊಗ್ಗ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪಿಯು ಮತ್ತು ಪದವಿ ಕಾಲೇಜುಗಳಲ್ಲಿ 18 ವರ್ಷ ಮೇಲ್ಪಟ್ಟ ಸುಮಾರು 17 ಸಾವಿರಕ್ಕೂ ಅ ಧಿಕ ವಿದ್ಯಾರ್ಥಿಗಳಿಗೆ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಎಲ್ಲವನ್ನೂ ಸರ್ಕಾರವೇ ಮಾಡುವುದು ಕಷ್ಟಸಾಧ್ಯ. ಕೋವಿಡ್‌ ಸಂದರ್ಭದಲ್ಲಿ ಅನೇಕ ಸಂಘ-ಸಂಸ್ಥೆಗಳು ಅನೇಕ ರೀತಿಯ ಸಹಕಾರ ನೀಡಿವೆ. ಈಗ ಸೇವಾ ಭಾರತಿ ಹಾಗೂ ಪಿಇಎಸ್‌, ಎಂಪಿಎಲ್‌ ನ್ಪೋಟ್‌ Õì ಫೌಂಡೇಷನ್‌ ಸಹಯೋಗದಲ್ಲಿ ಅಭಿಯಾನ ನಡೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ತೀರ್ಮಾನಿಸಿದ್ದು, ಈಗಾಗಲೇ ಜಿಲ್ಲೆಯಲ್ಲಿ 4.48 ಲಕ್ಷ ಜನರಿಗೆ ಪ್ರಥಮ ಡೋಸ್‌ ನೀಡಲಾಗಿದೆ. 88,106 ಜನರಿಗೆ ಎರಡನೇ ಡೋಸ್‌ ನೀಡಲಾಗಿದೆ ಎಂದರು.

ಜು.1 ರಿಂದ ಮೂರು ದಿನಗಳ ಕಾಲ ಹಮ್ಮಿಕೊಂಡ ಈ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದು, ಪ್ರಾಯೋಜಿತ ಸಂಸ್ಥೆಯ ಎಲ್ಲರೂ ಉಪಸ್ಥಿತರಿರುವರು. ಎಲ್ಲಾ ಅನುದಾನಿತ, ಖಾಸಗಿ ಮತ್ತು ಸರ್ಕಾರಿ ಕಾಲೇಜುಗಳು ಈ ಅವಕಾಶ ಬಳಸಿಕೊಳ್ಳಬೇಕೆಂದು ತಿಳಿಸಿದರು.

ಪರಿಸರ ಹಾನಿ ಮಾಡಿ ಅಭಿವೃದ್ಧಿ ಇಲ್ಲ: ಇಎಸ್‌ಐ ಆಸ್ಪತ್ರೆ ಜಾಗದಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆದಿದೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, ಒಟ್ಟು 5 ಎಕರೆ ಜಾಗವನ್ನು ಇಎಸ್‌ಐ ಆಸ್ಪತ್ರೆಗೆ ಕಾಯ್ದಿರಿಸಿದ್ದು ಎರಡೂವರೆ ಎಕರೆಯಲ್ಲಿ ಕಟ್ಟಡಗಳ ನಿರ್ಮಾಣ ಮಾಡಲಾಗುತ್ತಿದೆ. ಪ್ಲಾÂನಿಂಗ್‌ ಪ್ರಕಾರ ಗುಡ್ಡದ ಬುಡಕ್ಕೆ ಯಾವುದೇ ರೀತಿಯ ಡ್ಯಾಮೇಜ್‌ ಆಗದ ರೀತಿಯಲ್ಲಿ ಆ್ಯಂಬುಲೆನ್ಸ್‌ ಓಡಾಡುವ ದೃಷ್ಟಿಯಿಂದ ಮಾತ್ರ ಸ್ವಲ್ಪ ಗುಡ್ಡವನ್ನು ಮೇಲ್ಭಾಗದಲ್ಲಿ ಕೊರೆದು ಸಮತಟ್ಟು ಮಾಡಲಾಗಿದ್ದು, ಪ್ರಕೃತಿ ಮತ್ತು ಪರಿಸರಕ್ಕೆ ಹಾನಿ ಮಾಡಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡುವುದಿಲ್ಲ ಎಂದರು.

ಗೋಷ್ಠಿಯಲ್ಲಿ ಮೇಯರ್‌ ಸುನಿತಾ ಅಣ್ಣಪ್ಪ, ಉಪಮೇಯರ್‌ ಶಂಕರ್‌ ಗನ್ನಿ, ಪಿಇಎಸ್‌ ಕಾಲೇಜಿನ ಅ ಧಿಕಾರಿ ಆರ್‌. ನಾಗರಾಜ್‌, ಸಹ್ಯಾದ್ರಿ ನಾರಾಯಣ ಹೃದಯಾಲಯದ ಫ್ಯಾಕಲ್ಟಿ ಡೈರೆಕ್ಟರ್‌ ವರ್ಗೀಸ್‌, ಡಿಎಚ್‌ಒ ಡಾ| ರಾಜೇಶ್‌ ಸುರಗಿಹಳ್ಳಿ, ಪ್ರಮುಖರಾದ ಸುರೇಂದ್ರ, ಜಗದೀಶ್‌, ಸೇವಾ ಭಾರತಿಯ ಡಾ|ರವಿಕಿರಣ್‌, ಆರ್‌.ಎಸ್‌.ಎಸ್‌. ಮುಖಂಡ ಯಾದವ್‌ ಕೃಷ್ಣ, ಸಂತೋಷ್‌ ಬಳ್ಳೆಕೆರೆ ಮೊದಲಾದವರಿದ್ದರು.

ಟಾಪ್ ನ್ಯೂಸ್

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.