ನಮ್ಮ ಬೇಡಿಕೆಯನ್ನು ನಿರ್ಲಕ್ಷಿಸಿದರು, ಈಗ ಸುಪ್ರೀಂ ಕೇಳಿದೆ : ಸಿದ್ದರಾಮಯ್ಯ

ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ನೀಡುವ ಪರಿಹಾರದ ವಿಚಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ : ಸಿದ್ದು  

Team Udayavani, Jun 30, 2021, 4:13 PM IST

Siddaramaiha Statement on Covid Componsation

ಬೆಂಗಳೂರು :  ಕೋವಿಡ್ ಸೋಂಕಿನಿಂದ ಮೃತಪಟ್ಟಿರುವ ಕುಟುಂಬ ಸದಸ್ಯರಿಗೆ ಪರಿಹಾರ ನೀಡುವ ಬಗ್ಗೆ ಆರು ವಾರಗಳಲ್ಲಿ ಮಾರ್ಗಸೂಚಿ ರೂಪಿಸುವಂತೆ ಸುಪ್ರೀಂಕೋರ್ಟ್ ಬುಧವಾರ(ಜೂನ್ 30) ಕೇಂದ್ರ ಸರ್ಕಾರಕ್ಕೆ ಸೂಚಿಸಿದ ಬೆನ್ನಿಗೆ ರಾಜ್ಯ ಕಾಂಗ್ರೆಸ್ ವಿಪಕ್ಷ ನಾಯಕ ಸಿದ್ದರಾಮಯ್ಯ ನಮ್ಮ ಟ್ವೀಟರ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ : ನಾಳೆಯಿಂದ ಹೀರೋ ಮೊಟೊಕಾರ್ಪ್ ವಾಹನಗಳು ದುಬಾರಿ..! ಇಲ್ಲಿದೆ ಮಾಹಿತಿ

ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮುಖೇನ ಸರಣಿ ಟ್ವೀಟ್ ಮಾಡಿರುವ ಅವರು, ‘ನಾವು ಈ ಹಿಂದೆಯೇ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ  5 ಲಕ್ಷ ಪರಿಹಾರವನ್ನು ನೀಡಿ ಎಂದು ಒತ್ತಾಯಿಸಿದ್ದೇವೆ. ಆದರೇ, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡಿದ್ದವು. ಈಗ ಮಾನ್ಯ ಸುಪ್ರೀಂ ಕೋರ್ಟ್ ಆ ವಿಷಯವನ್ನು ಎತ್ತಿ ಹಿಡಿದಿದೆ. ಮಾರ್ಗಸೂಚಿಯನ್ನು ಆರು ವಾರಗಳಲ್ಲಿ ಬಿಡುಗಡೆ ಮಾಡಿ ಎಂದು ಸೂಚಿಸಿದೆ.ಈಗಲಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾನವೀಯತೆಯಿಂದ ನಡೆದುಕೊಳ್ಳಲಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ಕೋವಿಡ್ ನಿಂದ ಮೃತಪಟ್ಟ ಕುಟುಂಬದ ಒಬ್ಬನಿಗೆ ಮಾತ್ರ ಸೀಮಿತಗೊಳ್ಳುವಂತೆ ಪರಿಹಾರ ನಿಧಿಯಾಗಿ ಒಂದು ಲಕ್ಷವನ್ನು ಘೋಷಣೆ ಮಾಡಿದೆ. ಇದು ರಾಷ್ಟ್ರೀಯ ವಿಪತ್ತು ಪರಿಹಾರ ಮಾನದಂಡಗಳ ನಿಬಂಧನೆಗಳಿಗೆ ವಿರುದ್ಧವಾಗಿದೆ’ ಎಂದು ಅವರು ಹೇಳಿದ್ದಾರೆ.

ಇನ್ನು, ಕೋವಿಡ್ ನಿಂದ ಸಾವನ್ನಪ್ಪಿರುವ ಕುಟುಂಬ ಸದಸ್ಯರಿಗೆ ಅಂತಹ ಯಾವುದೇ ಪರಿಹಾರ ನೀಡಲು ಸಾಧ್ಯವಿಲ್ಲ ಎಂಬ ಕೇಂದ್ರದ ಮನವಿಯನ್ನು ತಿರಸ್ಕರಿಸಿದೆ. ಕೋವಿಡ್ ಸಂತ್ರಸ್ತರಿಗೆ ಪರಿಹಾರ ನೀಡುವುದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್ ಡಿಎಂಎ)ದ ಪ್ರಕಾರ ಶಾಸನಬದ್ಧವಾಗಿ ಕಡ್ಡಾಯವಾಗಿದೆ ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ತನ್ನ ತೀರ್ಪಿನಲ್ಲಿ, ಆರು ವಾರಗಳಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ನೀಡಬೇಕಾದ ಪರಿಹಾರ ಮೊತ್ತ ನಿಗದಿಪಡಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.

ಇದನ್ನೂ ಓದಿ :  ಹಾಲಿ ಸಿಎಂ ಜೈಲಿಗೆ ಹೋದ ಉದಾಹರಣೆಗಳಿವೆ, ರಾಜಾಹುಲಿ ಅಂತ ಹೊಗಳಬೇಡಿ : ಯತ್ನಾಳ್

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.