ಹೊಂಗಿರಣದಲ್ಲಿ ಸಹಜ ಅರಣ್ಯಕ್ಕೆ ಚಾಲನೆ


Team Udayavani, Jun 30, 2021, 10:59 PM IST

30-22

ಸಾಗರ: ತಾಲೂಕಿನ ಅಮಟೇಕೊಪ್ಪದ ಹೊಂಗಿರಣ ಕಾಲೇಜಿನ ಆವರಣದಲ್ಲಿ ಹೆಚ್ಚು ಸಾಂದ್ರತೆಯ ಕ್ಯಾಸಡವಿ ಪದ್ಧತಿಯಲ್ಲಿ ಪಶ್ಚಿಮ ಘಟ್ಟಗಳ ಸಹಜವಾದ ಅರಣ್ಯ ಬೆಳೆಸುವ ಕಾರ್ಯ ನಡೆಯಿತು.

ನಗರದ ಸ್ವಾನ್‌ ಆ್ಯಂಡ್‌ ಮ್ಯಾನ್‌, ಲೋಕ ಹಿತಂ ಪ್ರತಿಷ್ಠಾನ, ಪಂಚವಟಿ ನಿಸರ್ಗ ಸಂಶೋಧನಾ ಅಕಾಡೆಮಿ -ಪ್ರಾಣ, ಹಸಿರು ಸಾಗರ, ಅಭಿನಯ ಸಾಗರ ಮತ್ತು ಯೂತ್‌ ಹಾಸ್ಟೆಲ್ಸ್‌ ಅಸೋಸಿಯೇಷನ್‌ನ ಸುಮಾರು 80 ಜನ ಹಸಿರು ಶ್ರಮಿಕರು ಸಸಿ ನೆಡುವ ಕೆಲಸದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸ್ವಾನ್‌ ಆ್ಯಂಡ್‌ ಮ್ಯಾನ್‌ ಸಂಸ್ಥೆಯ ಕಲ್ಯಾಣ ಸುಂದರಂ, ವಿವಿಧ ಅಭಿವೃದ್ಧಿ ಕಾರ್ಯಗಳು, ದೊಡ್ಡ ದೊಡ್ಡ ಯೋಜನೆಗಳು, ಬಲಾಡ್ಯರ ಒತ್ತುವರಿ ಮೊದಲಾದ ಕಾರಣಗಳಿಂದಾಗಿ ಪಶ್ಚಿಮ ಘಟ್ಟಗಳು ಸೊರಗುತ್ತಿವೆ. ಮಳೆಗಾಲಕ್ಕೂ ಮುನ್ನವೇ ಗುಡ್ಡ ಕುಸಿತದ ಭೀತಿ ಶುರುವಾಗಿದೆ.

ಅತ್ಯಂತ ವೇಗವಾಗಿ ಪಶ್ಚಿಮ ಘಟ್ಟಗಳ ಪತನವಾಗುತ್ತಿದೆ. ಇಂತಹ ಸಂಕಷ್ಟದ ಹೊತ್ತಿನಲ್ಲಿ ಹಸಿರು ಉಳಿದರೆ ಮಾತ್ರ ಮನುಜ ಉಳಿಯುತ್ತಾನೆ. ಮುಂದಿನ ಪೀಳಿಗೆ ಉಳಿಯುತ್ತದೆ ಎಂದರು. ಕ್ಯಾಸಳಿಲು ಎಂಬ ಅಳಿಲು ಕುಟುಂಬದ ವನ್ಯಪ್ರಾಣಿಯ ಬೀಜ ಪ್ರಸರಣದ ಮೂಲಕ ಸಹಜ ಅರಣ್ಯ ವೃದ್ಧಿಸುವ ಬದುಕಿನ ಗತಿಯಿಂದ ಪ್ರೇರಣೆಗೊಂಡು ಒಡಮೂಡಿದ ಪರಿಕಲ್ಪನೆಯೇ ಕ್ಯಾಸಡವಿ ಅರಣ್ಯ ನಿರ್ಮಾಣ ಪದ್ಧತಿ.

ಅತ್ಯಂತ ಕಡಿಮೆ ನಿರ್ವಹಣೆಯನ್ನು ಬಯಸುವ ಈ ಪದ್ಧತಿಯಲ್ಲಿ ಸ್ಥಳೀಯ ಕಾಡು ಜಾತಿಯ ಸಸ್ಯಗಳನ್ನು ಮಾತ್ರ ಆಯ್ಕೆ ಮಾಡಿಕೊಂಡು, ಕಡಿಮೆ ಅಂತರದಲ್ಲಿ ಹೆಚ್ಚಿನ ಸಸಿಗಳನ್ನು ನೆಡುವುದೇ ಇದರ ಜೀವಾಳ. ಹಲವು ಸಂಖ್ಯೆಗಳಲ್ಲಿ ನೆಟ್ಟಂತಹ ಕಾಡು ಸಸ್ಯಗಳಲ್ಲಿ ಕೆಲವು ಸಮರ್ಥವಾದ ಸಸ್ಯಗಳು ಮಾತ್ರ ನೈಸರ್ಗಿಕ ಆಯ್ಕೆಯ ಮೂಲಕ ಉಳಿದುಕೊಂಡು ದಟ್ಟವಾದ ಹಸಿರು ಹೊದಿಕೆಯನ್ನು ಹೊಂದುತ್ತವೆ.

ಶೀಘ್ರ ಅರಣ್ಯ ವರ್ಧನೆ, ಮಣ್ಣಿನ ತೇವಾಂಶ ಉಳಿವಿಕೆ, ಭೂ ಸವಕಳಿ ತಡೆ, ವನ್ಯಜೀವಿಗಳಿಗೆ ನೆಲೆ, ನೀರಿಂಗಿಸುವಿಕೆ ಹೀಗೆ ಹಲವು ತರಹದ ಪಾರಿಸಾರಿಕ ಉಪಯೋಗಗಳಿವೆ ಎಂದರು. ಪ್ರಾಣದ ಡಾ| ಗಿರೀಶ್‌ ಜನ್ನೆ ಮತ್ತು ಕೌಶಿಕ್‌ ಕಾನುಗೋಡು, ಜಯಕುಮಾರ್‌, ಶ್ರೀಧರ್‌ ಭಟ್‌, ಹೊಂಗಿರಣ ಪ್ರಾಚಾರ್ಯೆ ಶೋಭಾ ರವೀಂದ್ರ, ಯೂತ್‌ ಅಸೋಸಿಯೇಷನ್‌ ಜಿಲ್ಲಾಧ್ಯಕ್ಷರಾದ ಮಹಮದ್‌ ರ, ಪ್ರಕಾಶ್‌, ಅಮಿತ್‌ ಕುಮಾರ್‌, ಗೌತಮ್‌ ಪೈ, ನಟರಾಜ್‌ ಗುಲುಗುಂಜಿಮನೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.