“ಉಸಿರಾಗಲಿ ಕನ್ನಡ  ಉಸಿರಾಡಲಿ ಕರ್ನಾಟಕ’


Team Udayavani, Jun 30, 2021, 11:53 PM IST

desiswara

ಟೊರೊಂಟೊ

ಸ್ವಭಾವ ಲಲಿತ ಕಲಾ ವೇದಿಕೆಯು ಕೆನಡಾ ಕನ್ನಡಿಗರ  ಸಹಯೋಗದಲ್ಲಿ ಕೆನಡದಾದ್ಯಂತ ನೆಲೆಸಿರುವ ಕಲಾವಿದರಿಂದ  “ಉಸಿರಾಡಲಿ ಕರ್ನಾಟಕ’ ಎಂಬ ಕನ್ನಡ ಸಂಗೀತ ಸಂಜೆ ಕಾರ್ಯಕ್ರಮವನ್ನು  ಜೂ. 12ರಂದು ವರ್ಚುವಲ್‌ನಲ್ಲಿ ಆಯೋಜಿಸಿತ್ತು.

ಅಕ್ಷತಾ ಶರಣ್‌ ಪ್ರಾರಂಭಿಸಿದ ಸಂಗೀತ ಸಂಜೆಯಲ್ಲಿ ಕೆನಡಾದ ಹಲವು ಗಾಯಕರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಂಟ್ರಿಯಲ್‌ ನಗರದ ಕನ್ನಡ ಕೂಟದ ಅಧ್ಯಕ್ಷರಾದ ಡಾ| ಹೊಸಳ್ಳಿ ರಾಮಸ್ವಾಮಿ ಅವರು ಕೊರೊನಾದಿಂದ ರಕ್ಷಿಸಿಕೊಳ್ಳಬೇಕಾದರೆ ನಾವು ಅನುಸರಿಸ ಬೇಕಾದ ಆಹಾರ ಮತ್ತು ಜೀವನ ಕ್ರಮದ ಕುರಿತು ವಿವರಿಸಿದರು.

ನಂದ ಕುಮಾರ್‌ ಚೌಡಪ್ಪ ಅವರು ಮಾತನಾಡಿ, ಕರ್ನಾಟಕದಲ್ಲಿ ಕೋವಿಡ್‌ ಎರಡನೇ ಅಲೆ ಆತಂಕ ಸೃಷ್ಟಿಸಿತ್ತು. ಹೀಗಾಗಿ ಇಲ್ಲಿಂದ ಸಹಾಯ ಮಾಡುವ ಸಲುವಾಗಿ “ಉಸಿರಾಡಲಿ ಕರ್ನಾಟಕ’ ಎಂಬ ಹೆಸರಿನಲ್ಲಿ ಚಟುವಟಿಕೆಗಳು ಆರಂಭವಾಗಿ ಸುಮಾರು ಒಂದು ತಿಂಗಳಾಗಿದೆ. ಕೆನಡಾದ ಎಲ್ಲ ಕನ್ನಡಿಗರು ಸೇರಿ ಮಾಡಿರುವ ಪ್ರಯತ್ನದ ಫ‌ಲವಾಗಿ ಸುಮಾರು  41 ಸಾವಿರ ಡಾಲರ್‌ ಸಂಗ್ರಹವಾಗಿದ್ದು, ಮೊದಲನೇ ಹಂತದಲ್ಲಿ 25 ಆಕ್ಸಿಜನ್‌ ಕಾನ್ಸಂಟ್ರೇಟರ್‌ಗಳನ್ನು ಕರ್ನಾಟಕದ ಎಡಿಜಿಪಿ ಸೀಮಂತ್‌ ಕುಮಾರ್‌ ಸಿಂಗ್‌ ಅವರ ನೇತೃತ್ವದಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಅವಶ್ಯಕತೆ ಇರುವಲ್ಲಿಗೆ ತಲು

ಪಿಸಲಾಯಿತು. ಉಳಿದ ಮೊತ್ತ 16 ಸಾವಿರ ಡಾಲರ್‌ಗಳಾಗಿದ್ದು 50 ಸಾವಿರ ಡಾಲರ್‌ ಸಂಗ್ರಹದ ಗುರಿ ಯನ್ನು ಹೊಂದಲಾಗಿದೆ. ಇದುವರೆಗೆ ಸಾಮಾಜಿಕ ಜಾಲ ತಾಣದ ಮೂಲಕ ದೇಣಿಗೆ ಸಂಗ್ರಹ ಕಾರ್ಯ ಮಾಡಲಾಗಿದ್ದು, ಚಾರಿಟೇಬಲ್‌ ಟ್ರÓr… ಸೇವಾ ಕೆನಡಾದ ಮೂಲಕ ಕರ್ನಾಟಕಕ್ಕೆ ಇದನ್ನು ತಲುಪಿಸಲಾಗುತ್ತಿದೆ. ಇದಕ್ಕಾಗಿ ಕೆನಡಾ ಕನ್ನಡಿಗರು ಎಂಬ ಸಮಿತಿಯೊಂದಿಗೆ ಹೆಲ್ಪ…ಲೈನ್‌ ಸದಸ್ಯರೂ ಕೈ ಜೋಡಿಸಿದ್ದರಿಂದ ಬಹಳಷ್ಟು ಸಹಾಯವಾಯಿತು ಎಂದರು.

ಡಾ| ಅರುಣ್‌ ಪ್ರಕಾಶ್‌ ಅವರು ಮಾನಸಿಕ ಒತ್ತಡ ನಿಯಂತ್ರಿಸುವ ಕುರಿತು ಅತ್ಯಮೂಲ್ಯ ಮಾಹಿತಿಗಳನ್ನು ನೀಡಿದರು.

ವೆಂಕಟೇಶ್‌ ಮೈಸೂರು ಅವರು ರೋಟರಿ ಕ್ಲಬ್‌ ಸಹಯೋಗದೊಂದಿಗೆ ಆರೋಗ್ಯ ಅರಿವು, ತುಮಕೂರಿನಲ್ಲಿರುವ ಗುರುಕುಲಾ ಕಲಾ ಪ್ರತಿಷ್ಠಾನ, ಹೆಲ್ತ… ಹೀಲ್‌ ಸಂಸ್ಥೆಯ ಮೂಲಕ ಕೈ ಜೋಡಿಸಿ ನಡೆಸುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಮುಖ್ಯ ಅತಿಥಿ ಕೆನಡಾದ ಸಂಸದ ಚಂದ್ರ ಆರ್ಯ ಮಾತನಾಡಿ, ಕೆನಡಾದಲ್ಲಿ ಕನ್ನಡಿಗರ ಸೇವಾ ಕಾರ್ಯಗಳಿಗೆ ಮೆಚ್ಚುಗೆ ಸೂಚಿಸಿದರು. ಬಳಿಕ ಉಸಿರಾಗಲಿ ಕನ್ನಡ ಹಾಡಿನ ಸಾಲುಗಳನ್ನು ಓದಿದರು.

ಮತ್ತೂಬ್ಬ ಅತಿಥಿ ಕರ್ನಾಟಕದ ಎಡಿಜಿಪಿ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಮಾತನಾಡಿ, ಕೆನಡಾದಲ್ಲಿ ಕುಳಿತು ಇಲ್ಲಿನವರಿಗೆ ಸಹಾಯ ಮಾಡುವ ಯೋಚನೆ ಇಲ್ಲಿನ ಜನರಲ್ಲೂ ಸ್ಫೂರ್ತಿ ತುಂಬಿದೆ. ಅತ್ಯಂತ ಶಿಸ್ತುಬದ್ಧವಾಗಿ ಯೋಜನೆ ರೂಪಿಸಿದ್ದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ನಮಗೂ ಸ್ಫೂರ್ತಿಯಾಗುತ್ತದೆ, ಹೊಸ ಯೋಚನೆ, ಚಿಂತನೆಗೆ ಪ್ರೇರಣೆಯಾಗುತ್ತದೆ ಎಂದು ತಿಳಿಸಿದರು.

ಸೇವಾ ಕೆನಡಾದ ವಿನೋದ್‌ ವರಪ್ರವನ್‌ ಅವರು ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದೆ  ಸೀಮಂತ್‌ ಕುಮಾರ್‌ ಸಿಂಗ್‌ ಅವರು “ಉಸಿರಾಗಲಿ ಕನ್ನಡ’ ಎಂಬ ರಾಜ್ಯ ಭಕ್ತಿಸಾರವುಳ್ಳ ಹಾಡನ್ನು ಲೋಕಾರ್ಪಣೆಗೈದರು.  ಕಿರಣ್‌ ಭಾರ್ತೂರ್‌, ವಿನಾಯಕ್‌ ಹೆಗ್ಡೆ ಮುಖ್ಯ ಅತಿಥಿಗಳನ್ನು ಸ್ವಾಗತಿಸಿ, ಪರಿಚಯಿಸಿದರು.  ಪ್ರಶಾಂತ್‌ ಸುಬ್ಬಣ್ಣ, ಪ್ರಜ್ಞಾ ಜೈನ್‌ ಕಾರ್ಯಕ್ರಮ ನಿರೂಪಿಸಿದರು. ರವೀಂದ್ರ ಕುಮಾರ್‌ ಅವರು ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.