ರಾಯಚೂರು ನಗರಸಭೆಯಲ್ಲಿ ಕಾಂಚಾಣ ಕಲಹ!

ಅಧ್ಯಕ್ಷರು ಏರಿಗೆ, ಸದಸ್ಯರು ನೀರಿಗೆ ಎನ್ನುವ ರೀತಿ ನಡೆದುಕೊಳ್ಳುತ್ತಿರುವುದು ನಗರಾಡಳಿತದ ಹಾದಿ ತಪ್ಪಿಸುತ್ತಿದೆ.

Team Udayavani, Jul 1, 2021, 8:07 PM IST

Nagarasabe

ರಾಯಚೂರು: ಹಗ್ಗ ಜಗ್ಗಾಟದಲ್ಲೇ ನಗರಸಭೆ ಚುಕ್ಕಾಣಿ ಹಿಡಿದ ಈ. ವಿನಯಕುಮಾರ್‌ ಮತ್ತು ಸದಸ್ಯರ ನಡುವಿನ ಮುಸುಕಿನ ಗುದ್ದಾಟ ಬೀದಿಗೆ ಬಂದಿದೆ. ಮಂಗಳವಾರ ಸಂಜೆ ಸದಸ್ಯರ ಜಗಳ ಬೀದಿಗೆ ಬರುವ ಮೂಲಕ ನಗರಾಡಳಿತದಲ್ಲಿ ಶಿಸ್ತು ಮಾಯವಾಗಿದೆ ಎಂಬ ಸಂದೇಶ ರವಾನೆಯಾಗಿದೆ.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಸಂಜೆ ವಿಧಾನ ಪರಿಷತ್‌ ವಿಪಕ್ಷ ನಾಯಕ ಎಸ್‌. ಆರ್‌. ಪಾಟೀಲ್‌ ಸಭೆ ಬಳಿಕ ನಗರಸಭೆ ಅಧ್ಯಕ್ಷ ಈ. ವಿನಯ ಕುಮಾರ್‌ ಹಾಗೂ ಸದಸ್ಯ ಜಿಂದಪ್ಪ ನಡುವೆ ಮಾತಿನ ಚಕಮಕಿ ನಡೆದಿದೆ. ಘಟನೆಗೆ ಹಣಕಾಸಿನ ವ್ಯವಹಾರ ಕಾರಣ ಎನ್ನಲಾಗುತ್ತಿದ್ದು, ಪರಸ್ಪರ ಆರೋಪ-ಪ್ರತ್ಯಾರೋಪಗಳು ಜೋರಾಗಿದೆ. ವಿನಯ ಕುಮಾರ್‌ ಬೆನ್ನತ್ತಿ ಬಂದು ರಸ್ತೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಜಿಂದಪ್ಪ ಸದರ ಬಜಾರ್‌ ಠಾಣೆಗೆ ದೂರು ನೀಡಿದ್ದಾರೆ. ನಗರದ ಟಿಪ್ಪು ಸುಲ್ತಾನ್‌ ವೃತ್ತದ ಬಳಿ ಬಹಿರಂಗವಾಗಿ ಮಾತಿನ ಚಕಮಕಿಯಾಗಿದೆ.

ಘಟನೆಗೆ ಸ್ಪಷ್ಟನೆ ನೀಡಿದ ಈ. ವಿನಯಕುಮಾರ್‌, ಸದಸ್ಯ ಜಿಂದಪ್ಪ, ಉಪಾಧ್ಯಕ್ಷೆ ಪತಿ ನರಸಿಂಹಲು ಮಾಡಗಿರಿ ನನಗೆ ಹಣಕ್ಕೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನೂ ಈ ಹೇಳಿಕೆ ನೀಡುತ್ತಿದ್ದಂತೆ ಮತ್ತಷ್ಟು ಆಕ್ರೋಶಗೊಂಡ ಮುಖಂಡರು ಬುಧವಾರ ಬೆಳಗ್ಗೆ ನಗರಸಭೆ ಕಚೇರಿಗೆ ಬಂದು ಮತ್ತೆ ಜಗಳ ಮಾಡಿಕೊಂಡಿದ್ದಾರೆ. ಹಣಕ್ಕೆ ಯಾವಾಗ ಬೇಡಿಕೆ ಇಟ್ಟಿದ್ದೇವೆ? ಎಂದು ಅಧ್ಯಕ್ಷರಿಗೆ ತಾಕೀತು ಮಾಡಿದ್ದಾರೆ. ಪರಿಸ್ಥಿತಿ ಕೈ ಮೀರಿ ಹೋಗುವ ಮುನ್ಸೂಚನೆಯಿಂದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.

ಆಡಳಿತಕ್ಕೆ ಅಸಹಕಾರ: ನಗರಸಭೆ ಅಧ್ಯಕ್ಷ ಈ. ವಿನಯಕುಮಾರ್‌ ಅಧ್ಯಕ್ಷ ಗಾದಿ ಹಿಡಿದಿರುವುದು ಕಾಂಗ್ರೆಸ್‌ನಲ್ಲೇ ಕೆಲ ನಾಯಕರಿಗೆ ಇಷ್ಟವಿಲ್ಲ ಎನ್ನುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಪಕ್ಷದ ಮೂಲ ನಿವಾಸಿಗಳಿಗೆ ಸಿಗದ ಅವಕಾಶ ವಲಸಿಗರಿಗೆ ಸಿಕ್ಕಿದೆ ಎಂಬ ಅಸಮಾಧಾನ ಮುಂಚೆಯಿಂದಲೂ ಹೊಗೆಯಾಡುತ್ತಿದೆ. ಇದೇ ಕಾರಣಕ್ಕೆ ಅಧ್ಯಕ್ಷರಿಗೆ ಅಸಹಕಾರ ಹೆಚ್ಚುತ್ತಿದ್ದು, ನಗರಸಭೆ ಆಡಳಿತ ಹಳ್ಳ ಹಿಡಿಯುತ್ತಿದೆ.

ಈಗ ನಗರಸಭೆ ಸದಸ್ಯ ಜಿಂದಪ್ಪ, ಉಪಾಧ್ಯಕ್ಷೆ ಪತಿ ನರಸಿಂಹಲು ಮಾಡಗಿರಿ ಪ್ರತಿ ತಿಂಗಳು ಮಾಮೂಲು ಕೊಡಬೇಕು ಎನ್ನುತ್ತಿದ್ದಾರೆ ಎಂದು ಅಧ್ಯಕ್ಷರು ಆರೋಪಿಸಿರುವುದು ಉರಿವ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಅಲ್ಲದೇ, ಅಧ್ಯಕ್ಷ ಎಂಬ ಗೌರವವೂ ಇಲ್ಲದೇ ಬಹಿರಂಗವಾಗಿ ಅಪಮಾನ ಮಾಡುತ್ತಿದ್ದಾರೆ ಎಂದೂ ದೂರಿದ್ದಾರೆ. ಈ ಹೇಳಿಕೆಯಿಂದ ಮತ್ತಷ್ಟು ಕೋಪಗೊಂಡಿರುವ ಜಿಂದಪ್ಪ, ನರಸಿಂಹಲು ಬುಧವಾರ ಕಚೇರಿಯಲ್ಲಿ ಪ್ರಶ್ನಿಸಲು ಹೋದಾಗ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಆಗ ಅಧ್ಯಕ್ಷ ಎಸ್‌ಪಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.

ಮುಳ್ಳಿನ ಹಾಸಿಗೆಯಾದ ಅಧ್ಯಕ್ಷ ಗದ್ದುಗೆ
ನಗರಸಭೆ ಅಧ್ಯಕ್ಷ ಗಾದಿ ಈ. ವಿನಯಕುಮಾರ್‌ ಪಾಲಿಗೆ ಅಕ್ಷರಶಃ ಮುಳ್ಳಿನ ಹಾಸಿಗೆಯಂತಾಗಿದೆ. ಆರಂಭದಿಂದಲೂ ಸುಗಮ ಆಡಳಿತಕ್ಕೆ ಅಡ್ಡಿ-ಆತಂಕಗಳು ಎದುರಾಗುತ್ತಲೇ ಇದೆ. ಪೌರಾಯುಕ್ತರು ಮತ್ತು ಅಧ್ಯಕ್ಷರ ನಡುವೆಯೂ ಹೊಂದಾಣಿಕೆ ಕಂಡು ಬರುತ್ತಿಲ್ಲ. ಸಾಮಾನ್ಯ ಸಭೆಗೆ ಸದಸ್ಯರು ಬಾರದೆ ಅಸಹಕಾರ ತೋರಿದರೆ, ಸಭೆಗಳಲ್ಲೂ ಅಧ್ಯಕ್ಷರು ಏರಿಗೆ, ಸದಸ್ಯರು ನೀರಿಗೆ ಎನ್ನುವ ರೀತಿ ನಡೆದುಕೊಳ್ಳುತ್ತಿರುವುದು ನಗರಾಡಳಿತದ ಹಾದಿ ತಪ್ಪಿಸುತ್ತಿದೆ.

ನಗರಸಭೆ ಅಧ್ಯಕ್ಷರ ವಿರುದ್ಧ ಜಿಂದಪ್ಪ ಸದರ ಬಜಾರ್‌ ಠಾಣೆಗೆ ದೂರು ನೀಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಸೇರಿದಂತೆ ಹಲವು ಆರೋಪ ಮಾಡಿದ್ದಾರೆ. ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯದ ಅನುಮತಿ ಪಡೆಯಬೇಕಿದ್ದು, ಈ ಕುರಿತು ಪರಿಶೀಲಿಸಿ
ಕ್ರಮ ಕೈಗೊಳ್ಳಲಾಗುವುದು.
ಪ್ರಕಾಶ ನಿಕ್ಕಂ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.