ಪ್ರವಾಹ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ


Team Udayavani, Jul 1, 2021, 10:15 PM IST

1-17

ಸಿರುಗುಪ್ಪ: ರಾಜ್ಯದಲ್ಲಿ ಮುಂಗಾರು ತೀವ್ರಗೊಂಡಿದ್ದು, ಜಲಾಶಯಗಳ ನೀರಿನ ಸಂಗ್ರಹ ಹೆಚ್ಚುತ್ತಿದೆ. ವಿಪತ್ತು ಹಾನಿ ನಿರ್ವಹಣೆಗೆ ತಾಲೂಕು ಆಡಳಿತವನ್ನು ಸಜ್ಜುಗೊಳಿಸಲಾಗಿದೆ. ತಾಲೂಕಿನಲ್ಲಿ ತುಂಗಭದ್ರಾ ನದಿಯಿಂದ ಉಂಟಾಗಬಹುದಾದ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕೆಂದು ಸಹಾಯಕ ಆಯುಕ್ತ ರಮೇಶ ಕೋನಾರೆಡ್ಡಿ ತಿಳಿಸಿದರು.

ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ಪ್ರವಾಹ ಮುಂಜಾಗ್ರತ ಕ್ರಮಗಳ ಕುರಿತು ಬುಧವಾರ ನಡೆಸಿದ ಅಧಿ ಕಾರಿಗಳ ಸಭೆಯಲ್ಲಿ ಮಾತನಾಡಿ, ಸಿರುಗುಪ್ಪ ತಾಲೂಕಿನಲ್ಲಿ ಪ್ರವಾಹದಿಂದ 16 ಗ್ರಾಮಗಳು ಬಾಧಿತಗೊಳ್ಳುತ್ತಿದ್ದು, ಅವುಗಳ ಮೇಲೆ ನಿಗಾವಹಿಸಬೇಕು. ಪ್ರವಾಹ ಉಂಟಾದರೆ ಜನರ ಸ್ಥಳಾಂತರಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಬೇಕು. ಅಗತ್ಯ ಬಿದ್ದರೆ ಕಾಳಜಿ ಕೇಂದ್ರಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಪ್ರವಾಹದಿಂದ ಬಾಧಿ ತವಾಗುವ 16 ಗ್ರಾಮಗಳ ಉಸ್ತುವಾರಿಯನ್ನು ನೋಡಿಕೊಳ್ಳಲು ವಿವಿಧ ಇಲಾಖೆಗಳ 16 ಅಧಿ ಕಾರಿಗಳನ್ನು ನೋಡಲ್‌ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಪ್ರವಾಹ ಬರುವ ಮುನ್ನವೇ ಅಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಡುವ ವ್ಯವಸ್ಥೆಯನ್ನು ನೋಡಲ್‌ ಅಧಿ ಕಾರಿಗಳು ಪರಿಶೀಲಿಸಿ ತಾಲೂಕು ಆಡಳಿತಕ್ಕೆ ಮಾಹಿತಿ ನೀಡಲಿದ್ದಾರೆ. ಬಾಗೇವಾಡಿ ಗ್ರಾಮದ ಹತ್ತಿರ ತುಂಗಭದ್ರಾ ನದಿಯಲ್ಲಿರುವ ನಡುಗಡ್ಡೆಯಲ್ಲಿ ಯಾರು ಇರದಂತೆ ನೋಡಿಕೊಳ್ಳಲು ನಮ್ಮ ಕಂದಾಯ ಇಲಾಖೆ ಸಿಬ್ಬಂದಿಯನ್ನು ನೇಮಕಮಾಡಲಾಗಿದೆ. ಪ್ರತಿನಿತ್ಯವೂ ನಡುಗಡ್ಡೆಗೆ ತೆರಳಿ ಪರಿಶೀಲನೆ ಮಾಡಲಾಗುವುದು.

ನಡುಗಡ್ಡೆಯಲ್ಲಿ ಯಾರು ಇರದಂತೆ ಸೂಚನೆ ನೀಡಲಾಗಿದೆ. ಆದರೆ ಸರ್ಕಾರದ ಸೂಚನೆಯನ್ನು ಪಾಲಿಸದೆ ನಡುಗಡ್ಡೆಗೆ ಹೋದರೆ ಅಂತವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗುವುದು. ಪ್ರವಾಹ ಉಂಟಾದಾಗ ಜನರನ್ನು ರಕ್ಷಿಸಲು ನುರಿತ ಈಜು ಪಟುಗಳ ಪಟ್ಟಿಯನ್ನು ಮತ್ತು ಅವರ ದೂರವಾಣಿ ಸಂಖ್ಯೆಯನ್ನು ಸಂಗ್ರಹಿಸಲಾಗಿದೆ. ಅಲ್ಲದೆ ಒಂದು ಬೋಟ್‌ನ್ನು ಇಲ್ಲಿಯೇ ಇಡಲಾಗುತ್ತದೆ. ಬೋಟ್‌ ಸುವ್ಯವಸ್ಥೆಯಲ್ಲಿದೆಯೋ ಎನ್ನುವುದರ ಬಗ್ಗೆ ಬಳ್ಳಾರಿಯ ರಾಜ್‌ಕುಮಾರ್‌ ಪಾರ್ಕ್‌ನಲ್ಲಿರುವ ಕೊಳದಲ್ಲಿ ಬಿಟ್ಟು ಪರೀಕ್ಷೆ ಮಾಡಲಾಗುತ್ತದೆ.

ಉತ್ತಮವಾದ ಬೋಟೊಂದನ್ನು ಇಲ್ಲಿ ಇಡಲಾಗುತ್ತದೆ ಎಂದು ಹೇಳಿದರು. ತಹಶೀಲ್ದಾರ್‌ ಎಸ್‌.ಬಿ. ಕೂಡಲಗಿ ಮಾತನಾಡಿ, ನೋಡಲ್‌ ಅ ಧಿಕಾರಿಗಳು ತಮಗೆ ವಹಿಸಿದ ಕಾರ್ಯವನ್ನು ಮಾಡಬೇಕು, ವಿನಾ ಕಾರಣಗಳನ್ನು ಹೇಳಬಾರದೆಂದು ಹೇಳಿದರು. ಸಹಾಯಕ ಕೃಷಿ ನಿರ್ದೇಶಕ ನಜೀರ ಅಹಮ್ಮದ್‌, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ರವೀಂದ್ರನಾಯ್ಕ, ಬಿಸಿಎಂ ಅಧಿ ಕಾರಿ ಗಾದಿಲಿಂಗಪ್ಪ, ಸಮಾಜ ಕಲ್ಯಾಣಾಧಿಕಾರಿ ಎಂ.ಸಿದ್ದಯ್ಯ, ಪೌರಾಯುಕ್ತ ಪ್ರೇಮ್‌ಚಾರ್ಲ್ಸ್‌, ಸಿಡಿಪಿಒ ಜಲಾಲಪ್ಪ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ: ಡಿಡಿ ಚಾನೆಲ್‌ ಮಾತ್ರ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ; ಡಿಡಿ ಚಾನೆಲ್‌ ಮಾತ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.