ವಿವಿಗಳು ಜ್ವಲಂತ ಸಮಸ್ಯೆಗಳ ಸಂಶೋಧನೆ ಕೈಗೊಳ್ಳಲಿ
Team Udayavani, Jul 2, 2021, 9:33 PM IST
ಶಿವಮೊಗ್ಗ: ಅಸಮಾನತೆ, ಅಭಿವೃದ್ಧಿ ಕುಂಠಿತ, ನಿರುದ್ಯೋಗದಂತಹ ಸಮಾಜದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಂಶೋಧನೆ ಕೈಗೊಳ್ಳುವ ಮೂಲಕ ವಿಶ್ವವಿದ್ಯಾಲಯಗಳು ಮತ್ತು ಸಂಶೋಧಕರು ಸಮಾಜ ಹಿತದ ಜವಾಬ್ದಾರಿ ನಿಭಾಯಿಸಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.
ವಿವಿಯ ಸಮಾಜಶಾಸ್ತ್ರ ವಿಭಾಗವು ಮೈಸೂರಿನ ಸಮೃದ್ಧಿ ಫೌಂಡೇಶನ್ ಜತೆಗೂಡಿ ಸಮಾಜ ವಿಜ್ಞಾನ ವಿಭಾಗಗಳ ಪಿಎಚ್ಡಿ ವಿದ್ಯಾರ್ಥಿಗಳಿಗೆ ಸಂಶೋಧನಾ ವಿಧಾನ ಕುರಿತಂತೆ ಕನ್ನಡದಲ್ಲಿ ಜುಲೆ„ 1-11ರ ವರೆಗಿನ 11 ದಿನಗಳ ಆನ್ಲೈನ್ ಕಾರ್ಯಾಗಾರ ಸರಣಿಯನ್ನು ಆಯೋಜಿಸಿದ್ದು, ಬುಧವಾರ ಈ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವೈಯಕ್ತಿಕ ಹಿತಾಸಕ್ತಿ ಅಥವಾ ಕೇವಲ ಕೆಲವರ ಲಾಭಕ್ಕಾಗಿ ಸಂಶೋಧನೆ ಕೈಗೊಳ್ಳುವಂತದ್ದಲ್ಲ. ವಸ್ತುನಿಷ್ಠ ಮಾದರಿಯಲ್ಲಿ ಮಾತ್ರ ನಡೆಸುವ ಸಂಶೋಧನೆಯ ಕೇಂದ್ರ ಉದ್ದೇಶವು ಸಮಾಜದ ಉದ್ಧಾರವಾಗಿರುತ್ತದೆ ಎಂದು ತಿಳಿಸಿದರು.
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಉಲ್ಲೇಖೀಸಿರುವಂತೆ ಭಾರತದಲಿ ಉನ್ನತ ಶಿಕ್ಷಣಕ್ಕೆ ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಶೇ. 26 ರಷ್ಟಿದೆ. ಪಿಎಚ್.ಡಿ. ಸೇರಿದಂತೆ ವಿವಿಧ ಸಂಶೋಧನೆಗಳಿಗೆ ಮುಂದಾಗುವವರ ಪಾಲು ಶೇ. 5 ಎಂಬುದು ವಿಷಾದನೀಯ ಸಂಗತಿ ಎಂದರು.
ವಿಭಾಗದ ಪ್ರೊ| ಎ. ರಾಮೇಗೌಡ, ಪ್ರೊ| ಎಂ. ಗುರುಲಿಂಗಯ್ಯ, ಪ್ರೊ| ಅಂಜನಪ್ಪ, ಪ್ರೊ|ಚಂದ್ರಶೇಖರ್ ಹಾಗೂ ಸಮೃದ್ಧಿ ಫೌಂಡೇಶನ್ನ ಕಾರ್ಯದರ್ಶಿ ಡಾ| ಶಾಂತಿ ಇದ್ದರು. 11 ದಿನಗಳ ಕಾರ್ಯಾಗಾರದಲ್ಲಿ ಪ್ರೊ| ಮುಝಫರ್ಅಸ್ಸಾದಿ, ಪ್ರೊ| ಇಂದಿರಾ, ಡಾ| ಕೆ. ಜಿ. ಗಾಯತ್ರಿದೇವಿ, ಪ್ರೊ| ಛಾಯ ಕೆ. ದೇಗಾಂವಕರ್, ಪ್ರೊ| ಸಿ.ಎ. ಸೋಮಶೇಖರಪ್ಪ, ಪ್ರೊ|ಟಿ.ಬಿ.ಬಿ.ಎಸ್ .ವಿ. ರಮಣಯ್ಯ ಸೇರಿದಂತೆ ಸಮಾಜ ವಿಜ್ಞಾನ ವಿಷಯಗಳ 15 ಕ್ಕೂ ಹೆಚ್ಚು ತಜ್ಞರು ವಿವಿಧ ಸಂಶೋಧನಾ ವಿಷಯಗಳ ಮೇಲೆ ಉಪನ್ಯಾಸ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ
Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.