ಉಡುಪಿ ಲಾಕ್‌ಡೌನ್‌ ಮುಕ್ತನಗರಕ್ಕೆ ಮತ್ತೆ ಜನಜೀವನ ಕಳೆ


Team Udayavani, Jul 5, 2021, 7:22 PM IST

ಉಡುಪಿ ಲಾಕ್‌ಡೌನ್‌ ಮುಕ್ತನಗರಕ್ಕೆ ಮತ್ತೆ ಜನಜೀವನ ಕಳೆ

ಉಡುಪಿ: ಉಡುಪಿ ಜಿಲ್ಲೆ ಲಾಕ್‌ಡೌನ್‌ನಿಂದ ಮುಕ್ತವಾಗುತ್ತಿದ್ದಂತೆ ಜನರು ಓಡಾಟವೂ ಹೆಚ್ಚಳವಾಗಿದೆ. ನಗರದಲ್ಲಿ ಟ್ರಾಫಿಕ್‌ ದಟ್ಟನೆ ಆಗುವ ಮೂಲಕ ಉಡುಪಿ ಮತ್ತೆ ಸಹಜಸ್ಥಿತಿಗೆ ಮರಳಿದೆ.

ಬಹುದಿನಗಳಿಂದ ಮುಚ್ಚಿದ್ದ ಮಾಲ್‌ಗ‌ಳೂ ಸೋಮವಾರದಿಂದ ಗ್ರಾಹಕರಿಗೆ ಸೇವೆ ನೀಡಿದವು. ಬಟ್ಟೆ ಮಳಿಗೆ, ಚಪ್ಪಲಿ, ಜುವೆಲರಿ ಶಾಪ್‌ಗ್ಳು, ಗ್ಯಾರೇಜುಗಳಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಿತ್ತು.

ಮತ್ತೆ ಟ್ರಾಫಿಕ್‌ ದಟ್ಟನೆ
ಉಡುಪಿ ನಗರದಾದ್ಯಂತ ಲಾಕ್‌ಡೌನ್‌ ಸಡಿಲಗೊಳ್ಳುತ್ತಿದ್ದಂತೆ ಟ್ರಾಫಿಕ್‌ ದಟ್ಟನೆ ಕಂಡುಬಂತು. ರಸ್ತೆಯ ಎರಡೂ ಬದಿಗಳಲ್ಲಿಯೂ ವಾಹನಗಳನ್ನು ನಿಲುಗಡೆ ಮಾಡುವ ಪ್ರಮೇಯ ಈ ಹಿಂದಿನಂತೆಯೇ ಮುಂದುವರಿಯಿತು.
ಕ್ರೀಡಾಂಗಣದಲ್ಲಿ ಕ್ರೀಡಾಪುಟುಗಳ ಅಭ್ಯಾಸಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಮದುವೆ ಸಮಾರಂಭಕ್ಕೆ ಅನುಮತಿ ಕಡ್ಡಾಯ
ಮದುವೆ ಹಾಗೂ ಕೌಟುಂಬಿಕ ಶುಭ ಸಮಾರಂಭಗಳಿಗೆ ಷರತ್ತಿಗೊಳಪಟ್ಟು 100 ಜನರಿಗೆ ಮೀರದಂತೆ ನಡೆಸಲು ಅನುಮತಿಸಲಾಗಿದೆ. ಸಮಾರಂಭಗಳನ್ನು ನಡೆಸುವವರು ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್‌ಗೆ ಸಲ್ಲಿಸಬೇಕಾಗುತ್ತದೆ.

ಕಾರ್ಯಸ್ಥಗಿಸಿದ್ದ ಚಟುವಟಿಕೆಗಳು
ಚಿತ್ರಮಂದಿರಗಳು, ಸಿನೆಮಾ ಹಾಲ್‌ಗ‌ಳು, ಪಬ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಟುಟೋರಿಯಲ್ಸ್‌, ಕಾಲೇಜುಗಳು ಮುಚ್ಚಿದ್ದವು. ರಾತ್ರಿ 9ರಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಹೇರಲಾಗಿತ್ತು.

ಇದನ್ನೂ ಓದಿ : ನೋಡುವ‌ ದೃಷ್ಠಿಯಂತೆ ಆನೆ ಕಾಣುತ್ತದೆ : ಯೋಗೇಶ್ವರ್, ಯತ್ನಾಳ್ ವಿರುದ್ಧ ನಿರಾಣಿ ಗುಡುಗು

ನಿಯಮಾವಳಿ ಮರೆತ ಜನರು
ಅನ್‌ಲಾಕ್‌ನ ಮೊದಲ ದಿನವೇ ಹೆಚ್ಚಿನ ಮಂದಿ ಕೊರೊನಾ ನಿಯಮಾವಳಿಗಳನ್ನು ಮರೆತಿರುವುದು ಎದ್ದು ಕಂಡಿತು. ಹೆಚ್ಚಿನ ಮಂದಿ ಮಾಸ್ಕ್ ಧರಿಸುವ ಗೋಜಿಗೂ ಹೋಗಲಿಲ್ಲಿ. ಜನರ ಓಡಾಟ ಹೆಚ್ಚಳವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತಷ್ಟು ಜಾಗರೂಕರಾಗಿ ನಿಯಮಾವಳಿ ಪಾಲಿಸಿದರಷ್ಟೇ ಸೋಂಕು ನಿಯಂತ್ರಣಗೊಂಡು ಮತ್ತೆ ಲಾಕ್‌ಡೌನ್‌ ತಪ್ಪಿಸಲು ಸಾಧ್ಯವಿದೆ.

ಬಸ್ಸುಗಳ ಸಂಖ್ಯೆ ಹೆಚ್ಚಳ
ಉಡುಪಿ ನಗರದಲ್ಲಿ ಖಾಸಗಿ ಬಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಟ ನಡೆಸಿದವು. ಪ್ರಯಾಣಿಕರ ಸಂಖ್ಯೆಯೂ ಅಧಿಕವಾಗಿತ್ತು. ಸೋಮವಾರದಿಂದ ಶೇ.40ರಷ್ಟು ಬಸ್ಸುಗಳು ಓಡಾಟ ಮಾಡಿದವು. ಬಸ್ಸುಗಳಲ್ಲಿಯೂ ಶೇ.100ರಷ್ಟು ಪ್ರಯಾಣಿಕರನ್ನು ತುಂಬಲು ಅವಕಾಶ ಕಲ್ಪಿಸಲಾಗಿತ್ತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.