ಬೆಲೆ ಏರಿಕೆ ಖಂಡಿಸಿ ಸೈಕಲ್‌ ರ್ಯಾಲಿ

ಕಾಂಗ್ರೆಸ್‌ ಪ್ರತಿಭಟನೆ­ !ಜನರನ್ನು ಬಿಕಾರಿ ಮಾಡಿ ಶ್ರೀಮಂತರ ಮನೆ ತುಂಬಿಸುವ ಪ್ರಧಾನಿ ಬೇಕಿಲ್ಲ

Team Udayavani, Jul 8, 2021, 5:25 PM IST

1625678459877

ಹುಬ್ಬಳ್ಳಿ: ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪಕ್ಷದ ಮಹಾನಗರ ಜಿಲ್ಲಾ ಘಟಕದಿಂದ ಬುಧವಾರ ಸೈಕಲ್‌ ರ್ಯಾಲಿ ನಡೆಸಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಕೈಗೊಳ್ಳಲಾಯಿತು.

ಬುಧವಾರ ಇಲ್ಲಿನ ಡಾ|ಬಿ.ಆರ್‌.ಅಂಬೇಡ್ಕರ್‌ ವೃತ್ತದಿಂದ ಸೈಕಲ್‌ ಜಾಥಾ ಆರಂಭವಾಗಿ ಕಿಮ್ಸ್‌ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಮುಕ್ತಾಯಗೊಂಡಿತು. ಕೋವಿಡ್‌ ಸಂದರ್ಭದಲ್ಲಿ ಕೇಂದ್ರ ಸರಕಾರ ಪೆಟ್ರೋಲ್‌, ಡಿಸೇಲ್‌, ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿ ಜನಸಾಮಾನ್ಯರು ಪರಿತಪಿಸುವಂತೆ ಮಾಡಿದೆ. ಸಂಕಷ್ಟದ ಸಮಯದಲ್ಲಿ ಜನರ ಹಿತ ಕಾಪಾಡಬೇಕಿದ್ದ ಕೇಂದ್ರ ಸರಕಾರ, ಬೆಲೆ ಹೆಚ್ಚಳ ಮೂಲಕ ಜನರ ಸಂಕಷ್ಟ ಹೆಚ್ಚುವಂತೆ ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಮಾಜಿ ಸಚಿವ ಎಂ.ಎಂ.ಹಿಂಡಸಗೇರಿ ಮಾತನಾಡಿ, ಸಾರ್ವಜನಿಕ ಉದ್ದಿಮೆ, ಆಸ್ತಿಗಳನ್ನು ಅಂಬಾನಿ, ಆದಾನಿಯಂತಹ ಶ್ರೀಮಂತರಿಗೆ ಪರಭಾರೆ ಮಾಡುವುದು, ಖಾಸಗೀಕರಣ, ತೈಲ, ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಯಾಗಿದೆ. ಸುಳ್ಳು, ಭರವಸೆ, ಭಾವನಾತ್ಮಕ ಮಾತುಗಳಿಗೆ ಮನಸೋತಿದ್ದ ಜನರು ಬಿಜೆಪಿಯ ಜನವಿರೋಧಿ ಕೆಲಸದಿಂದ ಭ್ರಮನಿರಸನಗೊಂಡಿದ್ದಾರೆ. ಅವರ ಅಚ್ಛೇದಿನ ಸಾಮಾನ್ಯ ಜನರಿಗೆ ಅರ್ಥವಾಗಿದೆ. 60-70 ರೂ. ಅಡುಗೆ ಎಣ್ಣೆ ಇಂದು 200 ಗಡಿ ದಾಟಿದೆ. ಬಡವರ ಇಷ್ಟು ದುಬಾರಿ ಎಣ್ಣೆ ಖರೀದಿಸಿ ಉಣ್ಣಲು ಸಾಧ್ಯವೇ. ಜನರನ್ನು ಬಿಕಾರಿಗಳನ್ನಾಗಿ ಮಾಡಿ ಶ್ರೀಮಂತರ ಮನೆ ತುಂಬಿಸುವ ಪ್ರಧಾನಿ ಈ ದೇಶಕ್ಕೆ ಬೇಕಿಲ್ಲ ಎಂದರು.

ಕಾಂಗ್ರೆಸ್‌ ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್‌ ಹಳ್ಳೂರು ಮಾತನಾಡಿ,ಬಿಜೆಪಿ ನಾಯಕರು ದೇಶದ ಬದಲಾವಣೆ ಮಾಡುತ್ತಾರೆ ಎನ್ನುವ ಕನಸಿನೊಂದಿಗೆ ಮತ ಹಾಕಿ ಗೆಲ್ಲಿಸಿದ್ದರು. ಆದರೆ ಅಂದು ಮತ ಹಾಕಿದವರು ಬಿಜೆಪಿ ನಾಯಕರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ದೇಶದ ಉದ್ಧಾರದ ಬದಲು ಇಡೀ ದೇಶವನ್ನೇ ಮಾರಲು ಹೊರಟಿದ್ದಾರೆ. ಕೋವಿಡ್‌ನಿಂದ ಜನರು ಕೈಯಲ್ಲಿದ್ದ ಹಣ ಕಳೆದುಕೊಂಡಿದ್ದಾರೆ. ಜೀವನ ನಡೆಸುವುದೇ ದುಸ್ತರವಾಗಿರುವ ಸಂದರ್ಭದಲ್ಲಿ ಎಲ್ಲಾ ಬೆಲೆ ಹೆಚ್ಚಳ ಮಾಡಿ ಜನ ದ್ರೋಹಿ ಕೆಲಸ ಬಿಜೆಪಿ ಸರಕಾರ ಮಾಡುತ್ತಿದೆ. ಭ್ರಷ್ಟಾಚಾರ, ಜನ ವಿರೋಧಿ, ಕಾರ್ಮಿಕ, ರೈತ ವಿರೋಧಿ ನೀತಿಗಳ ಮೂಲಕ ಅಚ್ಚೇ ದಿನ್‌ ತೋರಿಸುತ್ತಿದೆ ಎಂದು ವಾಗ್ಧಾಳಿ ನಡೆಸಿದರು.

ಕೆಪಿಸಿಸಿ ಅಲ್ಪ ಸಂಖ್ಯಾತ ರಾಜ್ಯಾಧ್ಯಕ್ಷ ವೈ.ಸೈಯದ್‌, ಮುಖಂಡರಾದ ಎಫ್‌.ಎಚ್‌.ಜಕ್ಕಪ್ಪನವರ, ಸದಾನಂದ ಡಂಗನವರ, ವೆಂಕಟೇಶ ಮೇಸ್ತ್ರಿ, ಪ್ರಕಾಶ ಜಾಧವ, ಅಲ್ತಾಫ್‌ ಕಿತ್ತೂರು, ದಶರಥ ವಾಲಿ, ಬಷೀರ್‌ ಅಹ್ಮದ್‌ ಗುಡಮಾಲ್‌, ರಜತ ಉಳ್ಳಾಗಡ್ಡಿಮಠ, ಮಲ್ಲಿಕಾರ್ಜುನ ಯಾತಗೇರಿ, ಶ್ರೀಕಾಂತ ಯಾತಗೇರಿ, ಶ್ರೀಕಾಂತ ಬಾರಕೇರ, ಮಣಿಕಂಠ ಗುಡಿಹಾಳ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.