ಕೋವಿಡ್ನಿಂದ ಮೃತರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರಕ್ಕೆ ಆದೇಶ
Team Udayavani, Jul 9, 2021, 7:30 AM IST
ಬೆಂಗಳೂರು: ಕೋವಿಡ್ನಿಂದ ಮೃತಪಟ್ಟಿರುವ ವ್ಯಕ್ತಿಗಳ ಕುಟುಂಬಕ್ಕೆ 1 ಲಕ್ಷ ರೂ. ಆರ್ಥಿಕ ನೆರವು ನೀಡುವ ಸಂಬಂಧ ಸರಕಾರದಿಂದ ಗುರುವಾರ ಅಧಿಕೃತ ಆದೇಶ ಹೊರ ಬಿದ್ದಿದೆ.
ಬಿಪಿಎಲ್ ಕುಟುಂಬಕ್ಕೆ ಮಾತ್ರ ಈ ನೆರವು ಸಿಗಲಿದೆ. ಕುಟುಂಬದ ಒಬ್ಬ ಸದಸ್ಯನಿಗೆ ಮಾತ್ರ ಇದು ಇನ್ವಯ.
ಇತ್ತೀಚೆಗೆ ಸಿಎಂ ಯಡಿಯೂರಪ್ಪ ಅವರೇ ಈ ಘೋಷಣೆ ಮಾಡಿದ್ದು, ಯೋಜನೆಗೆ ರಾಜ್ಯ ಸರಕಾರಕ್ಕೆ ಸುಮಾರು 250ರಿಂದ 300 ಕೋಟಿ ರೂ. ವೆಚ್ಚವಾಗಲಿದೆ.
ಪರಿಹಾರ ಪಡೆಯಲು ಕೆಲವು ಷರತ್ತು ಗಳನ್ನು ವಿಧಿಸಲಾಗಿದೆ. ಬಿಪಿಎಲ್ ಕುಟುಂಬ ದಲ್ಲಿ ಒಂದಕ್ಕಿಂತ ಹೆಚ್ಚು ಸದಸ್ಯರು ಮರಣ ಹೊಂದಿದ್ದರೂ ಒಬ್ಬರಿಗೆ ಮಾತ್ರ 1 ಲಕ್ಷ ರೂ. ಪರಿಹಾರ ನೀಡಲಾಗುವುದು. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನಿಗದಿಪಡಿಸಿರುವ ಮಾನದಂಡಗಳ ವ್ಯಾಪ್ತಿಗೆ ಒಳಪಡುವಂತಿದ್ದರೆ ಮಾತ್ರ ಪರಿಹಾರ ಸಿಗಲಿದೆ.
ಮೃತನ ವಿವರವನ್ನು ಜಿಲ್ಲಾ ವೈದ್ಯಾಧಿಕಾರಿ ಗಳಿಂದ ಜಿಲ್ಲಾಧಿಕಾರಿ ಪಡೆಯಬೇಕು. ಜಿಲ್ಲಾಧಿಕಾರಿಗಳಿಗೆ ವರದಿ ನೀಡುವ ಮೊದಲು ತಾಂತ್ರಿಕ ಸಲಹಾ ಸಮಿತಿ ನೀಡಿರುವ ವರದಿ ಯನ್ನು ಡಿಎಚ್ಒ ಪರಿಶೀಲಿಸಿ ಖಚಿತಪಡಿಸಿ ಕೊಳ್ಳಬೇಕು. ಡಿಸಿಗಳು ಮೃತರ ಕಾನೂನುಬದ್ಧ ವಾರಸುದಾರರನ್ನು ಗುರುತಿಸಿ, ಅವರಿಂದ ಬ್ಯಾಂಕ್ ಹಾಗೂ ಸೂಕ್ತ ದಾಖಲೆ ಪಡೆದು ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇ ಶನಾಲಯದ ನಿರ್ದೇಶಕರಿಗೆ ಸಲ್ಲಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.