![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 9, 2021, 12:25 PM IST
ಮುಂಬಯಿ: ಕೊರೊನಾ ಮೊದಲ ಮತ್ತು ಎರಡನೆಯ ಅಲೆಯಲ್ಲಿ ದೇಶದ ಹಾಗೂ ರಾಜ್ಯದ ಜನರು ಅನೇಕ ಸಮಸ್ಯೆ ಗಳನ್ನು ಎದುರಿಸಬೇಕಾಯಿತು. ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡರು ಮತ್ತು ಆದಾ ಯವನ್ನು ಕಳೆದುಕೊಂಡರು.
ಹೊಟೇಲ್ ಉದ್ಯಮದಲ್ಲಿ ಕೆಲಸ ಮಾಡುವವರು ಉದ್ಯೋಗ ಕಳೆದುಕೊಂಡರು, ಮಾಲಕರ ಆದಾಯ ಕುಸಿಯಿತು. ಈ ಕಷ್ಟದ ಸಮಯದಲ್ಲಂತೂ ಕೊರೊನಾ ವಾರಿಯರ್ಸ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ದೇವತೆಗಳಂತೆಸೇವೆ ಸಲ್ಲಿಸಿದ್ದಾರೆ. ದೇಶದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಎಲ್ಲರಿಗೂ ಆದಷ್ಟು ಬೇಗ ಲಸಿಕೆ ಹಾಕಿಸಿದರೆ, ಮೂರನೇ ಅಲೆಯಲ್ಲಿ ಅಪಾಯ ಕಡಿಮೆಯಾಗುತ್ತದೆ ಎಂದು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ತಿಳಿಸಿದರು.
ರಾಜಭವನದಲ್ಲಿ 50 ಆ್ಯಂಬುಲೆನ್ಸ್ ಚಾಲಕರು, ವ್ಯವಸ್ಥಾಪಕರು, ಶಾಲಾ ಬಸ್ ಮಾಲಕರು ಮತ್ತು ಶಾಲಾ ಮತ್ತು ಕಂಪೆನಿ ಬಸ್ ಚಾಲಕರ ಸಂಘದ ಪದಾಧಿಕಾರಿಗಳನ್ನು ರಾಜ್ಯಪಾಲರು ಗೌರವಿಸಿ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಅಗತ್ಯವಿರುವ ರೋಗಿಗಳಿಗೆ ಶಾಲೆ ಮತ್ತು ಕಂಪೆನಿ ಬಸ್ಗಳು ಮತ್ತು ವಾಹನಗಳನ್ನು ಆ್ಯಂಬುಲೆನ್ಸ್ ಸೇವೆಗೆ ಬಳಸಿದ್ದಾರೆ.
ಚಾಲಕ ಅಥವಾ ಯಾವುದೇ ಕೆಲಸಗಾರನ ಕೆಲಸ ಮುಖ್ಯವಾಗಿದೆ ಎಂದು ಚಾಲಕರನ್ನು ಶ್ಲಾಘಿಸಿದರು.ಸ್ಕೂಲ್ ಮತ್ತು ಕಂಪೆನಿ ಬಸ್ ಮಾಲಕರ ಸಂಘದಿಂದ ಕೊರೊನಾ ವಾರಿಯರ್ಸ್ಗಳ ಸೇವೆಗೆ ಅಭಿನಂದನೆ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಅನಿಲ್ ಗರ್ಗರ್, ಕಾರ್ಯದರ್ಶಿ ದೀಪಕ್ ನಾಯಕ್ ಮತ್ತು ಪ್ರಧಾನ ಕಾರ್ಯದರ್ಶಿ ರಮೇಶ್ ಮಣಿಯನ್ ಉಪಸ್ಥಿತರಿದ್ದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.