ಕೂಲಿ ಕಾರ್ಮಿಕರಿಗೆ ಆಹಾರ ಧಾನ್ಯದ ಕಿಟ್ ವಿತರಣೆ
Team Udayavani, Jul 11, 2021, 9:56 PM IST
ಬಾಳೆಹೊನ್ನೂರು: ಕಾರ್ಮಿಕ ಇಲಾಖೆಯ ಅ ಧೀನದಲ್ಲಿ ಬರುವ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಅಹಾರ ಧಾನ್ಯ ಕಿಟ್ಗಳನ್ನು ನೀಡಲಾಗುತ್ತಿದೆ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದರು.
ಬಾಳೆಹೊನ್ನೂರಿನ ಶ್ರೀ ವಿದ್ಯಾಗಣಪತಿ ಸಮುದಾಯ ಭವನದಲ್ಲಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಬಾಳೆಹೊನ್ನೂರು ಹೋಬಳಿ ವ್ಯಾಪ್ತಿಯ ಬಿ. ಕಣಬೂರು, ಮಾಗುಂಡಿ, ಬನ್ನೂರು ಆಡುವಳ್ಳಿ, ಕರ್ಕೇಶ್ವರ ಗ್ರಾಪಂ ವ್ಯಾಪ್ತಿಯ ಕಟ್ಟಡ ಮತ್ತು ಇತರೆ ಕೂಲಿ ಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿ ಅವರು ಮಾತನಾಡಿದರು.
2008ರಿಂದ 2015ರ ವರೆಗೆ ಕಟ್ಟಡ ಕಾರ್ಮಿಕರ ವಾರ್ಷಿಕ ನೋಂದಣಿಗೆ 25 ರೂ. ಹಾಗೂ ಮಾಸಿಕ ವಂತಿಗೆ 10 ರೂ.ನಂತೆ ಸಂಗ್ರಹಿಸಿದ್ದು 2015 ರಿಂದ 2020ರ ವರೆಗೆ 50 ರೂ. ವಂತಿಗೆ ವಸೂಲಿ ಮಾಡಲಾಗಿದೆ. ಮಾಲೀಕರ ಲೇಬರ್ ಸೆಸ್ ಶೇ.1ರಂತೆ ಸರಕಾರದ ಎಲ್ಲಾ ನಿರ್ಮಾಣ ಕಟ್ಟಡಗಳಿಗೂ ಹಾಗೂ 10 ಲಕ್ಷ ಮೇಲ್ಪಟ್ಟ ಕಟ್ಟಡ ನಿರ್ಮಾಣಕ್ಕೆ ಶೇ. 1 ಸೆಸ್ ವಿಧಿಸಿದ್ದು ಈ ಹಣದಿಂದ ಕಾರ್ಮಿಕರಿಗೆ ಅಹಾರ ಕಿಟ್ ಗಳನ್ನು ವಿತರಿಸಲಾಗುತ್ತಿದೆ ಎಂದರು.
ಬನ್ನೂರು, ಆಡುವಳ್ಳಿ, ಮಾಗುಂಡಿ, ಕರ್ಕೇಶ್ವರ, ಬಿ. ಕಣಬೂರು ಗ್ರಾಪಂನ ಅಧ್ಯಕ್ಷರು, ಸದಸ್ಯರಿಗೆ ಹಾಗೂ ಪತ್ರಕರ್ತರಿಗೆ ಮಾಹಿತಿ ನೀಡದಿರುವ ಬಗ್ಗೆ ಶಾಸಕರನ್ನು ಪ್ರಶ್ನಿಸಿದಾಗ ಉತ್ತರಿಸಿದ ಅವರು ತಾಪಂ ಇಒ ಹಾಗೂ ಗ್ರಾಪಂ ಪಿಡಿಒ ಅವರು ಈ ಬಗ್ಗೆ ಮಾಹಿತಿ ನೀಡಬೇಕಾಗಿದ್ದು, ಅ ಧಿಕಾರಿಗಳು ನಿರ್ಲಕ್ಷé ವಹಿಸಿದ ಬಗ್ಗೆ ಜಿಪಂ ಸಿಇಒ ಅವರಿಗೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆಯಲಾಗುವುದೆಂದು ತಿಳಿಸಿದರು.
ಹಿರಿಯ ಕಾರ್ಮಿಕ ನಿರೀಕ್ಷಕ ಸುರೇಂದ್ರ ಮಾತನಾಡಿ, ನೋಂದಾಯಿತ ಹೋಬಳಿ ವ್ಯಾಪ್ತಿಯ ಕುಟುಂಬಗಳಿಗೆ 500 ಆಹಾರ ಧಾನ್ಯದ ಕಿಟ್ ವಿತರಿಸಲಾಗುವುದೆಂದು ತಿಳಿಸಿದರು.
ಕಾರ್ಯ ನಿರ್ವಾಹಕ ಅಧಿ ಕಾರಿ ಮಹಮ್ಮದ್ ಹ್ಯಾರೀಸ್, ರಾಘವೇಂದ್ರ, ಅಂಕಿ- ಅಂಶ ತಂತ್ರಜ್ಞ ಶಿವರಾಮ್, ಬಿ. ಕಣಬೂರು ಗ್ರಾಪಂ ಅಧ್ಯಕ್ಷೆ ಅಂಬುಜಾ, ಉಪಾಧ್ಯಕ್ಷ ಎಂ.ಜೆ. ಮಹೇಶಾಚಾರ್, ಕರ್ಕೇಶ್ವರ ಗ್ರಾಪಂ ರಾಜೇಶ್ ಕೇಶವತ್ತಿ, ಬನ್ನೂರು ಗ್ರಾಪಂ ಅಧ್ಯಕ್ಷೆ ಮಧುರಾ, ಉಪಾಧ್ಯಕ್ಷ ಗೋಪಾಲ, ಮಾಗುಂಡಿ ಗ್ರಾಪಂ ಅಧ್ಯಕ್ಷೆ ಪ್ರಮಿಳಾ ಸಿಲ್ವಿಯಾ ಸೆರಾವೋ, ಆಡುವಳ್ಳಿ ಗ್ರಾಪಂ ಅಧ್ಯಕ್ಷ ಪ್ರದೀಪ, ಉಪಾಧ್ಯಕ್ಷೆ ಪ್ರತಿಮಾ, ಪ್ರಭಾಕರ್ ಪ್ರಣಸ್ವಿ, ಎಂ.ಎಸ್. ಅರುಣೇಶ್, ಇಬ್ರಾಹಿಂ ಶಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ವಿಶ್ವ ಶಾಂತಿ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ನಡಿಗೆ
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Karnataka ರಾಜ್ಯದಲ್ಲಿ ಆರ್ಟಿಇ ಸೀಟಿಗಿಲ್ಲ ಕಿಮ್ಮತ್ತು!
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.