ಎಂಪಿಪಿ ಕನಸು ಸಾಕಾರಗೊಳಿಸಲು ಸಹಕರಿಸಿ
Team Udayavani, Jul 12, 2021, 10:15 PM IST
ಹೂವಿನಹಡಗಲಿ: ಮಾಜಿ ಉಪಮುಖ್ಯಮಂತ್ರಿ ದಿ. ಎಂ.ಪಿ. ಪ್ರಕಾಶ ಅವರು ಬಡವರು, ಕಲಾವಿದರು, ಅಶಕ್ತರ ಬಗ್ಗೆ ಸದಾ ಕಾಳಜಿಯುಳ್ಳವರಾಗಿದ್ದರು.
ಅವರ ಎಲ್ಲ ಜನಪರವಾದ ಕನಸುಗಳನ್ನು ಸಾಕಾರಗೊಳಿಸಲು ಕುಟುಂಬ ವರ್ಗ ಸತತವಾಗಿ ಶ್ರಮಿಸುತ್ತಿದ್ದು, ಅಭಿಮಾನಿಗಳು ಬೆಂಬಲವಾಗಿ ನಿಲ್ಲಬೇಕು ಎಂದು ಪಟ್ಟಣದ ಗವಿಮಠದ ಶ್ರೀ ಡಾ| ಹಿರಿಶಾಂತವೀರ ಸ್ವಾಮೀಜಿ ನುಡಿದರು.
ಪಟ್ಟಣದ ರಂಗಭಾರತಿ ರಂಗಮಂದಿರದಲ್ಲಿ ಎಂ.ಪಿ. ಪ್ರಕಾಶ್ ಸಮಾಜಮುಖೀ ಟ್ರಸ್ಟ್, ರಂಗಭಾರತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಎಂ.ಪಿ.ಪ್ರಕಾಶರ 81ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.
ಈ ಭಾಗದಲ್ಲಿ ನೈಸರ್ಗಿಕ ಬರ, ಸಾಂಸ್ಕೃತಿಕ ಬರ ಅಳಿಸಿ ಹಾಕಲು ಅವರ ಅಧಿಕಾರದ ಅವಧಿಯಲ್ಲಿ ಸದಾ ಯೋಜನೆಗಳನ್ನು ಹಾಕಿಕೊಳ್ಳುತ್ತಿದ್ದರು. ಇಂಥ ಯೋಜನೆಗಳ ಮೂಲಕವಾಗಿ ಅವರು ದೂರದೃಷ್ಟಿ ಹೊಂದಿದ್ದವರಾಗಿದ್ದರು ಎಂದರು. ರಂಗಭಾರತಿ ಕಾರ್ಯಾಧ್ಯಕ್ಷೆ ಎಂ.ಪಿ. ಸುಮಾ ವಿಜಯ್ ಮಾತನಾಡಿ, ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಸರಳ ಕಾರ್ಯಕ್ರಮ ರೂಪಿಸಿದ್ದೇವೆ.
ತಂದೆಯವರ ಜನ್ಮದಿನದ ಪ್ರಯುಕ್ತ ನೊಂದವರಿಗೆ ನೆರವಾಗುವ ಮೂಲಕ ಅಳಿಲು ಸೇವೆ ಮಾಡುತ್ತಿದ್ದೇವೆ. ಎಂಪಿಪಿಯವರ ಆದರ್ಶ ಚಿಂತನೆಗಳಿಗೆ ಪೂರಕವಾಗಿ ಸಮಾಜಮುಖೀ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು ಎಲ್ಲರೂ ಸಹಕಾರ ನೀಡಬೇಕು ಎಂದು ಕೋರಿದರು.
ಎಂ.ಪಿ.ಪ್ರಕಾಶ್ ಸಮಾಜಮುಖೀ ಟ್ರಸ್ಟ್ ಕಾರ್ಯದರ್ಶಿ ಶಾಂತಮೂರ್ತಿ ಕುಲಕರ್ಣಿ ಮಾತನಾಡಿ, ಎಂ.ಪಿ. ಪ್ರಕಾಶ್ ಅವರು ನಾಡಿನ ಉದ್ದಗಲಕ್ಕೂ ಹೂವಿನಹಡಗಲಿ ಹಿರಿಮೆಯನ್ನು ಪರಿಚಯಿಸಿದ್ದಾರೆ. ಈ ಭಾಗದ ಭೌತಿಕ ಪ್ರಗತಿಗೆ ಅಪಾರ ಕೊಡುಗೆ ನೀಡುವ ಮೂಲಕ ಎಂಪಿಪಿಯವರು ಜನಮಾನಸದಲ್ಲಿ ಹಸಿರಾಗಿ ಉಳಿದಿದ್ದಾರೆ ಎಂದರು.
ನಾಗತಿಬಸಾಪುರ ಹಾಲಸ್ವಾಮಿ ಮಠದ ಡಾ| ಎಂ.ಪಿ.ಎಂ. ಮಂಜುನಾಥಯ್ಯ ಸಾನ್ನಿಧ್ಯ ವಹಿಸಿದ್ದರು. ಎಂ.ಪಿ. ರುದ್ರಾಂಬ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜಾನಪದ ಕಲಾವಿದರು, ಛಾಯಾಗ್ರಾಹಕರು, ಟ್ಯಾಕ್ಸಿ ಮತ್ತು ಆಟೋ ಚಾಲಕರು ಸೇರಿದಂತೆ 350 ಜನರಿಗೆ ಆಹಾರ ಕಿಟ್ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Bellary; ಕಳಪೆ ಆಹಾರ ಪೂರೈಕೆ; ಎಸ್ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ
Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್ ದೂರು?
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Ballari: ಕೊನೆಗೂ ನಟ ದರ್ಶನ್ ಸೆಲ್ಗೆ ಟಿವಿ; ಡಿಡಿ ಚಾನೆಲ್ ಮಾತ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.