ಪ್ರವಾಸಿ ತಾಣಗಳೀಗ ಫುಲ್‌ ರಶ್‌!


Team Udayavani, Jul 12, 2021, 10:26 PM IST

12-18

ಚಿಕ್ಕಮಗಳೂರು: ಕೋವಿಡ್‌ ಲಾಕ್‌ಡೌನ್‌ನಿಂದ ಮೌನ ವಹಿಸಿದ್ದ ಚಿಕ್ಕಮಗಳೂರು  ಪ್ರವಾಸಿ ತಾಣಗಳಿಗೆ ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಶನಿವಾರ ಮತ್ತು ಭಾನುವಾರ ಪ್ರವಾಸಿಗರು ಹಾಗೂ ಭಕ್ತರ ದಂಡೇ ಹರಿದು ಬಂದಿದೆ.

ಕೋವಿಡ್‌ ಸೋಂಕು ಉಲ್ಬಣಗೊಂಡ ಬಳಿಕ ಜಿಲ್ಲೆಯ ಪ್ರವಾಸಿ ತಾಣ ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಯಾರೂ ಬರದಂತೆ ಜಿಲ್ಲಾಡಳಿತ ನಿರ್ಬಂಧ ವಿ ಧಿಸಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿಂದ ಪ್ರವಾಸಿಗರು ಮತ್ತು ಭಕ್ತರಿಲ್ಲದೆ ದೇವಸ್ಥಾನಗಳು ಮತ್ತು ಪ್ರೇಕ್ಷಣೀಯ ಸ್ಥಳಗಳು ಬಿಕೋ ಎನ್ನುತ್ತಿದ್ದವು.

ಸದ್ಯ ಸರ್ಕಾರ ಕೋವಿಡ್‌ ನಿರ್ಬಂಧಗಳನ್ನು ಸಡಿಲಿಸಿದ್ದು, ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರಾ, ಕೆಮಣ್ಣುಗುಂಡಿ, ದೇವರ ಗುಡ್ಡ, ಗಾಳಿಕೆರೆ ಸೇರಿದಂತೆ ಧಾರ್ಮಿಕ ಕ್ಷೇತ್ರ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಮತ್ತು ಶೃಂಗೇರಿಯ ಶಾರದಾ ಪೀಠ, ಕಳಸೇಶ್ವರ ದೇವಸ್ಥಾನಗಳಿಗೆ ಭಕ್ತರ ದಂಡೇ ನೆರೆದಿತ್ತು. ಹೋಂ ಸ್ಟೇ, ರೆಸಾರ್ಟ್‌, ಲಾಡ್‌ ಗಳು ಕೋವಿಡ್‌ ನಿಯಮಗಳನ್ನು ಪಾಲಿಸಿಕೊಂಡು ಕ ರ್ಯನಿರ್ವಹಿಸುವಂತೆ ಜಿಲ್ಲಾಡಳಿತ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆಗಳಿಂದ ಸಾವಿರಾರು ಜನರು ಪ್ರೇಕ್ಷಣೀಯ ಸ್ಥಳಗಳಿಗೆ ಈ ವಾರಾಂತ್ಯದಲ್ಲಿ ಲಗ್ಗೆ ಇಟ್ಟಿದ್ದು, ಪ್ರೇಕ್ಷಣೀಯ ಸ್ಥಳಗಳಿಗೆ ಸಾಗುವ ಮಾರ್ಗಗ ಳಲ್ಲಿ ಟ್ರಾμಕ್‌ ಜಾಮ್‌ ಉಂಟಾಗಿದ್ದು ಅಲ್ಲಲ್ಲಿ ಕಂಡು ಬಂದಿದೆ.

ಶನಿವಾರ ಮತ್ತು ಭಾನುವಾರ ವಾರಾಂತ್ಯದ ರಜಾ ದಿನವಾದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕಿದ್ದು, ಸ್ಥಳೀಯರಿಗಿಂತ ಹೊರ ಜಿಲ್ಲೆ, ಹೊರರಾಜ್ಯಗಳಾದ ಆಂದ್ರಪ್ರದೇಶ, ಉತ್ತರ ಪ್ರದೇಶ, ಹರಿಯಾಣ, ಗೋವಾ, ತಮಿಳುನಾಡು, ಕೇರಳ ರಾಜ್ಯಗಳಿಂದಲೂ ಪ್ರವಾಸಿಗರು ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿ ಇಲ್ಲಿಯ ಪ್ರಕೃತಿ ಸೌಂದರ್ಯವನ್ನು ಸವಿದಿದ್ದಾರೆ. ಈಗಾಗಲೇ ಜಿಲ್ಲಾದ್ಯಂತ ಮಳೆ ಆರಂಭವಾಗಿದ್ದು, ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗೆ ಇದು ಸಕಾಲವಾಗಿದೆ. ಅದರಂತೆ ಕೋವಿಡ್‌ ಲಾಕ್‌ಡೌನ್‌ ನಿರ್ಬಂಧ ಸಡಿಲಗೊಂಡ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಸಿಗರ ದಂಡು ಹರಿದು ಬಂದಿದ್ದು, ಮುಳ್ಳಯ್ಯನಗಿರಿ, ದತ್ತಪೀಠ ಸುತ್ತಮುತ್ತಲ ಪ್ರಾಕೃತಿಕ ಸೌಂದರ್ಯವನ್ನು ಕಣ್ತುಂಬಿಕೊಂಡರು.

ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದಂಡು ನೆರೆದಿದ್ದ ಪರಿಣಾಮ ಇಲ್ಲಿನ ವ್ಯಾಪಾರ- ವಹಿವಾಟು ಚೇತರಿಕೆ ಕಂಡಿದೆ. ಒಮ್ಮೆದೇ ಭಾರೀ ಪ್ರಮಾಣದಲ್ಲಿ ಪ್ರವಾಸಿಗರು ರಾಜ್ಯ, ಹೊರರಾಜ್ಯದಿಂದ ಬಂದ ಪರಿಣಾಮ ಚಿಕ್ಕಮಗಳೂರು ನಗರದಲ್ಲೂ ವಾಹನ ದಟ್ಟಣೆ ಜಾಸ್ತಿಯಾಗಿತ್ತು. ಧಾರ್ಮಿಕ ಸ್ಥಳಗಳಲ್ಲೂ ಜನಸಾಗರ: ಕೋವಿಡ್‌ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭಕ್ತರು ಪ್ರವೇಶಿಸದಂತೆ ರಾಜ್ಯ ಸರ್ಕಾರ ನಿರ್ಬಂಧ ವಿಧಿ ಸಿತ್ತು. ಸದ್ಯ ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ನಿಯಮಗಳನ್ನು ಪಾಲಿಸಿಕೊಂಡು ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಹಾಗೂ ಶೃಂಗೇರಿ ಶಾರದಾ ಪೀಠ ಸೇರಿದಂತೆ ಇತರೆ ಧಾರ್ಮಿಕ ಕ್ಷೇತ್ರಗಳಿಗೂ ಶನಿವಾರ ಮತ್ತು ಭಾನುವಾರ ಭಕ್ತರ ದಂಡು ಹರಿದು ಬಂದಿದೆ.

ಚಾರ್ಮಾಡಿ ಘಾಟಿಯಲ್ಲಿ ಜಲಕನ್ಯೆಯರ ನರ್ತನ: 2-3 ದಿನಗಳಿಂದ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಜಲಪಾತಗಳಲ್ಲಿ ನೀರಿನ ಹರಿವು ಜಾಸ್ತಿಯಾಗಿದ್ದು, ಪ್ರವಾಸಿಗರು ಜಿಲ್ಲೆಯ ಜಲಪಾತಗಳಿಗೆ ಮುಗಿ ಬೀಳುತ್ತಿದ್ದಾರೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟಿಯಲ್ಲಿ ಸಾಗುವ ಮಾರ್ಗದ ಅಲ್ಲಲ್ಲಿ ಜನಕನ್ಯೆಯರು ನರ್ತಿಸುತ್ತಿದ್ದು ಈ ಪರಿಸರವನ್ನು ವೀಕ್ಷಿಸಲು ಜನ ಮುಗಿ ಬಿದ್ದಿದ್ದಾರೆ. ಜಲಪಾತಗಳನ್ನು ಕಣ್ತುಂಬಿಕೊಂಡು ಮೋಜು-ಮಸ್ತಿ ಮಾಡುತ್ತಿದ್ದಾರೆ.

ಹರಿದು ಬಂದ ಪ್ರವಾಸಿಗರು, ಸ್ಥಳಿಯರಲ್ಲಿ ಕೋವಿಡ್‌ ಭೀತಿ: ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆ ಕೋವಿಡ್‌ ಪಾಸಿಟಿವಿಟಿ ರೇಟ್‌ನಲ್ಲಿ ರಾಜ್ಯದಲ್ಲೇ ಅಗ್ರಸ್ಥಾನಕ್ಕೆ ಏರಿತ್ತು. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ನಿರಂತರ ಪರಿಶ್ರಮದಿಂದ ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬಂದಿದ್ದು, ರಾಜ್ಯಸರ್ಕಾರ ಲಾಕ್‌ಡೌನ್‌ ನಿರ್ಬಂಧಗಳನ್ನು ಜಿಲ್ಲೆಯಲ್ಲಿ ಸಡಲಿಕೆ ಮಾಡಿದೆ. ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದ ವಾರಾಂತ್ಯದಲ್ಲಿ ಪ್ರವಾಸಿಗರ ದಂಡು ಹರಿದು ಬಂದಿದ್ದು, ಮತ್ತೆ ಜಿಲ್ಲೆಯಲ್ಲಿ ಕೋವಿಡ್‌ ಉಲ್ಬಣಸುವ ಭೀತಿಯೂ ಸ್ಥಳೀಯರಲ್ಲಿ ಎದುರಾಗಿದೆ.

ಬಹುತೇಕ ಲಾಡ್ಜ್ ಗಳು, ಹೋಮ್‌ ಸ್ಟೇ, ರೆಸಾರ್ಟ್‌ಗಳಲ್ಲಿ ದೂರದ ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ಹೊರರಾಜ್ಯದಿಂದ ಜನರು ಬಂದು ತಂಗುತ್ತಿರುವುದು ಸ್ಥಳೀಯರಲ್ಲಿ ಕೋವಿಡ್‌ ಭೀತಿಯನ್ನು ಉಂಟು ಮಾಡಿದೆ.

ಕೋವಿಡ್‌ ನಿಯಮಗಳನ್ನು ಗಾಳಿಗೆ ತೂರಿದ ಪ್ರವಾಸಿಗರು: ಪ್ರವಾಸಿ ತಾಣಗಳಿಗೆ ಬೇಟಿನೀಡುವ ಪ್ರವಾಸಿಗರು ಕಡ್ಡಾಯವಾಗಿ ಕೋವಿಡ್‌ ನಿಯಮ ಗಳನ್ನು ಪಾಲನೆ ಮಾಡುವಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದೆ. ಆದರೆ, ವಾರಾಂತ್ಯದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ ಪ್ರವಾಸಿಗರು ಸಾಮಾಜಿಕ ಅಂತರ ಉಲ್ಲಂಘಿಸಿ ಮಾಸ್ಕ್ ಧರಿಸದೆ ಮೈ ಮರೆತು ಪ್ರಕೃತಿ ಸೌಂದರ್ಯವನ್ನು ವೀಕ್ಷಿಸಿದರು.

ಟ್ರಾಫಿಕ್‌ ಜಾಮ್‌: ಜಿಲ್ಲೆಯ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಶನಿವಾರ 1,023 ಕಾರು, 425 ಬೈಕ್‌, 46 ಟಿಟಿ-ಮಿನಿ ಬಸ್‌ನಲ್ಲಿ ಸಾವಿರಾರು ಪ್ರವಾಸಿಗರು ಬಂದಿದ್ದು ಮುಳ್ಳಯ್ಯನಗಿರಿ ಪ್ರದೇಶಕ್ಕೆ ಸಾಗುವ ರಸ್ತೆಯುದ್ದಕ್ಕೂ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಭಾನುವಾರ ಬೆಳಗ್ಗೆ 6ಗಂಟೆಯಿಂದ ಸಂಜೆವರೆಗೂ 496 ಬೈಕ್‌, 1,172 ಕಾರು, 56 ಟಿಟಿ ವಾಹನ ಮತ್ತು ಮಿನಿ ಬಸ್‌ಗಳಲ್ಲಿ 5 5 ರಿಂದ 6ಸಾವಿಕರಕ್ಕೂ ಹೆಚ್ಚು ಜನರು ಮುಳ್ಳಯ್ಯನಗಿರಿ ಮಾರ್ಗವಾಗಿ ಸಂಚರಿಸಿದ್ದು ಮಾರ್ಗದುದ್ದಕ್ಕೂ ಟ್ರಾμಕ್‌ ಜಾಮ್‌ ಉಂಟಾಗಿತು.

ಟಾಪ್ ನ್ಯೂಸ್

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.