ಕಾಳಿ ನದಿ ತಟದಲ್ಲಿ ಮೊಸಳೆ ಪಾರ್ಕ್
ದಾಂಡೇಲಿ ಪ್ರವಾಸೋದ್ಯಮಕ್ಕೆ ವಿನೂತನ ಗರಿ! ಹತ್ತಿರದಿಂದ ಮೊಸಳೆ ನೋಡುವ ಅವಕಾಶ
Team Udayavani, Jul 13, 2021, 9:40 PM IST
ವರದಿ : ಸಂದೇಶ್ ಎಸ್. ಜೈನ್
ದಾಂಡೇಲಿ: ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶ್ವದ ಗಮನ ಸೆಳೆಯುತ್ತಿರುವ ದಾಂಡೇಲಿ ಪ್ರವಾಸೋದ್ಯಮದ ಮುಕುಟಕ್ಕೆ ವಿನೂತನ ಗರಿ ಎಂಬಂತೆ ಈಗ ಮೊಸಳೆ ಪಾರ್ಕ್ ತಲೆಯೆತ್ತಿದೆ.
ಶ್ರೀ ಕ್ಷೇತ್ರ ದಾಂಡೇಲಪ್ಪನ ಸನ್ನಿಧಿಯ ಮುಂಭಾಗದ ವಿಶಾಲ ಜಾಗದಲ್ಲಿ ಮೊಸಳೆ ಪಾರ್ಕ್ ನಿರ್ಮಾಣವಾಗಿದೆ. ಪ್ರವಾಸಿಗರಿಗೆ ಹತ್ತಿರದಿಂದ ಮೊಸಳೆ ನೋಡುವ ಅವಕಾಶ ಸಿಗಲಿದೆ. ಇಲ್ಲಿಯ ಕಾಳಿ ನದಿಯಲ್ಲಿ ಮೊಸಳೆಗಳು ಹೇರಳವಾಗಿ ಇರುವುದನ್ನು ಗಮನಿಸಿದ್ದ ಹಾಲಿ ಶಾಸಕ ಆರ್.ವಿ. ದೇಶಪಾಂಡೆಯವರು ಅಂದು ಸಿದ್ದರಾಮಯ್ಯನವರ ಸರ್ಕಾರವಿದ್ದಾಗ ಪ್ರವಾಸೋದ್ಯಮ ಸಚಿವರಾಗಿದ್ದ ಸಂದರ್ಭದಲ್ಲಿ ವಿಶೇಷ ಆಸಕ್ತಿ ವಹಿಸಿ ಮೊಸಳೆ ಪಾರ್ಕ್ ಮಂಜೂರು ಮಾಡಿಸಿದ್ದರು. ಇದೀಗ ಅದು ಉದ್ಘಾಟನೆಗೆ ದಿನಗಣನೆ ಶುರುವಾಗಿದೆ.
ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾದ ಮೂರು ಕೋಟಿ ರೂಪಾಯಿ ಅನುದಾನದಲ್ಲಿ ಲೋಕೋಪಯೋಗಿ ಬಂದರು ಮತ್ತು ಜಲಸಾರಿಗೆ ಇಲಾಖೆಯ ನಿರ್ವಹಣೆಯೊಂದಿಗೆ ಗುತ್ತಿಗೆದಾರ ಜಯಶಂಕರ ಶೆಟ್ಟಿ ಹಾಗೂ ನಾರಾಯಣ ಹೆಗಡೆ ನೇತೃತ್ವದಲ್ಲಿ ಮೊಸಳೆ ಪಾರ್ಕ್ ನಿರ್ಮಾಣಗೊಂಡಿದೆ. ಹಲವಾರು ವೈವಿಧ್ಯತೆಗಳಿಂದ ಕೂಡಿರುವ ಇಲ್ಲಿಯ ಉದ್ಯಾನವನದಲ್ಲಿ ಮೊಸಳೆ ವೀಕ್ಷಿಸುವ ಮುನ್ನ ಹಸಿರು ಹುಲ್ಲಿನ ಹೊದಿಕೆಯ ಗಾರ್ಡನ್ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಇಲ್ಲಿ ವರ್ಣರಂಜಿತ ನೀರಿನ ಕಾರಂಜಿ, ಇನ್ನೂ ಮೊಸಳೆ, ಜಿಂಕೆ, ಜಿರಾಫೆ ಪ್ರತಿಮೆ ನಿರ್ಮಿಸಲಾಗಿದೆ.
ಮರಳಿನ ಹೊಂಡ, ಪಾಥ್ ವೇ, ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಇನ್ನಿತರ ವಿಶಿಷ್ಟ ಸೌಕರ್ಯಗಳನ್ನು ಜೋಡಿಸಲಾಗಿದೆ. ಇನ್ನೂ ಇಲ್ಲಿ ಕಾಳಿ ನದಿಯಲ್ಲಿರುವ ಮೊಸಳೆಗಳನ್ನು ಯಾವುದೇ ಭಯವಿಲ್ಲದೇ ಬಹು ಹತ್ತಿರದಿಂದ ವೀಕ್ಷಣೆ ಮಾಡಲೆಂದೇ ವೀಕ್ಷಣಾ ಗೋಪುರ ನಿರ್ಮಿಸಲಾಗಿದೆ. ಈಗಾಗಲೇ ಕಾಮಗಾರಿ ಮುಗಿದಿದ್ದು, ಸದ್ಯದಲ್ಲೇ ಹಸ್ತಾಂತರ ಪ್ರಕ್ರಿಯೆ ನಡೆಯಲಿದ್ದು, ಆನಂತರದಲ್ಲಿ ಈ ಮೊಸಳೆ ಉದ್ಯಾನವನ ಲೋಕಾರ್ಪಣೆಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ
ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.