35 ಗ್ರಾಮಗಳಲ್ಲಿ ಜಾಗೃತಿ ರಥ ಸಂಚಾರ
Team Udayavani, Jul 13, 2021, 10:06 PM IST
ಬಳ್ಳಾರಿ: ನಗರದ ಜಿಲ್ಲಾಧಿ ಕಾರಿ ಕಚೇರಿ ಆವರಣದಲ್ಲಿ ಮಹಿಳೆಯರ ಮತ್ತು ಮಕ್ಕಳ ಕುರಿತು ಜಾಗೃತಿ ಮೂಡಿಸುವ ಜಾಗೃತಿ ರಥಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವರ್ಲ್ಡ್ ವಿಷನ್ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ರಥಕ್ಕೆ ಜಿಪಂ ಸಿಇಒ ಕೆ.ಆರ್. ನಂದಿನಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಯಾವುದೇ ಒಂದು ಕಾರ್ಯ ಸರ್ವರಿಗೂ ತಲುಪಬೇಕಾದರೆ ಸಮುದಾಯದ ಜನಪ್ರತಿನಿಧಿ ಗಳು, ಚುನಾಯಿತ ಪ್ರತಿನಿಧಿಗಳು ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಅಧಿ ಕಾರಿ ವರ್ಗದವರು ಕಾರ್ಯಪ್ರವೃತ್ತರಾಗಬೇಕು. ಜಾಗೃತಿ ರಥವು ತಾಲೂಕಿನ ಆಯ್ದ 35 ಗ್ರಾಮಗಳಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸಲಿದೆ. ಮುಂದಿನ ದಿನಗಳಲ್ಲಿ ಉಳಿದ ಎಲ್ಲ ತಾಲೂಕಿನಲ್ಲಿ ಜಾಗೃತಿ ರಥವು ಸಂಚರಿಸಲಿದೆ ಎಂದರು.
ಮಹಿಳೆಯರು, ಮಕ್ಕಳ ಮೇಲಿನ ದೌರ್ಜನ್ಯ ತಡೆಯುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಾಲ್ಯ ವಿವಾಹ ತಡೆ, ಮಕ್ಕಳ ಮೇಲಿನ ದೌರ್ಜನ್ಯ, ಮಕ್ಕಳ ಹಕ್ಕುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತದೆ. ಈ ಹಿಂದೆ ಗ್ರಾಪಂ ನಡೆ ಮಹಿಳಾ ಮತ್ತು ಮಕ್ಕಳ ಕಡೆ ಕಾರ್ಯಕ್ರಮವು ಜಿಲ್ಲೆಯಲ್ಲಿ ಬಾಲ್ಯವಿವಾಹಗಳನ್ನು ತಡೆಯಲು ಸಹಕಾರಿಯಾಗಿತ್ತು. ಪ್ರಸ್ತುತ ಕೋವಿಡ್ ಕಾರಣದಿಂದಾಗಿ ನಿಲ್ಲಿಸಲಾಗಿದ್ದ ಈ ಕಾರ್ಯಕ್ರಮವನ್ನು ಇದೀಗ ಪುನಃ ರೂಪಿಸಲಾಗುತ್ತದೆ ಎಂದು ಅವರು ವಿವರಿಸಿದರು.
ಇದೇ ಸಮಯದಲ್ಲಿ ವರ್ಲ್ಡ್ವಿಷನ್ ವತಿಯಿಂದ 20 ಲಕ್ಷ ರೂ. ವೆಚ್ಚದ 10 ಕಾನ್ಸಂಟ್ರೇಟರ್ ಮತ್ತು ಪಿಪಿಇ ಕಿಟ್ಗಳನ್ನು ಜಿಲ್ಲಾಸ್ಪತ್ರೆಗೆ ನೀಡಿದ್ದು, ಸಾಂಕೇತಿಕವಾಗಿ 1 ಕಾನ್ಸಂಟ್ರೇಟರ್ ಅನ್ನು ಜಿಪಂ ಸಿಇಒ ಕೆ.ಆರ್. ನಂದಿನಿ ಅವರು ವರ್ಲ್ಡ್ ವಿಷನ್ ಸಂಸ್ಥೆಯ ವ್ಯವಸ್ಥಾಪಕಿ ಪ್ರೇಮಲತಾ ಅವರಿಂದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್. ನಾಗರಾಜ, ಮಕ್ಕಳ ರಕ್ಷಣಾ ಧಿಕಾರಿ ಚಾಂದ್ಪಾಷಾ, ವರ್ಲ್ಡ್ ವಿಷನ್ ಸಂಸ್ಥೆಯ ವ್ಯವಸ್ಥಾಪಕಿ ಪ್ರೇಮಲತಾ ಮತ್ತು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Bellary; ಕಳಪೆ ಆಹಾರ ಪೂರೈಕೆ; ಎಸ್ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ
Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್ ದೂರು?
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Ballari: ಕೊನೆಗೂ ನಟ ದರ್ಶನ್ ಸೆಲ್ಗೆ ಟಿವಿ; ಡಿಡಿ ಚಾನೆಲ್ ಮಾತ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.