ಸಹಕಾರ ಸಚಿವಾಲಯ ಸ್ಥಾಪನೆ ಸ್ವಾಗತಾರ್ಹ: ರೆಡ್ಡಿ
Team Udayavani, Jul 14, 2021, 9:07 PM IST
ದಾವಣಗೆರೆ: ದೇಶದ 117 ವರ್ಷದ ಸಹಕಾರಿ ಚಳವಳಿ ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಪ್ರತ್ಯೇಕವಾಗಿ ಸಹಕಾರ ಸಚಿವಾಲಯ ಪ್ರಾರಂಭಿಸಿರುವುದು ಸ್ವಾಗತಾರ್ಹ ಎಂದು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಜೆ.ಎಸ್. ವೇಣುಗೋಪಾಲ ರೆಡ್ಡಿ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ “ಸಹರ್ ಸೆ ಸಮೃದ್ಧಿ’ ಎಂಬ ಧ್ಯೇಯವಾಕ್ಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರಾರಂಭಿಸಿರುವ ಸಹಕಾರ ಸಚಿವಾಲಯ ದೇಶದ ಸಹಕಾರ ಕ್ಷೇತ್ರದ ಅಭ್ಯುದಯಕ್ಕೆ ಕಾರಣವಾಗಲಿದೆ. ಸಚಿವಾಲಯ ಪ್ರಾರಂಭದ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅಭಿನಂದನಾರ್ಹರು ಎಂದರು.
ದೇಶದ ಸಹಕಾರಿ ಕ್ಷೇತ್ರದಲ್ಲಿ 91 ಸಾವಿರದಷ್ಟು ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ 30 ಕೋಟಿಗೂ ಅಧಿಕ ಸದಸ್ಯರಿದ್ದಾರೆ. 3,83,285 ಮಿಲಿಯನ್ ನಷ್ಟು ಷೇರು ಬಂಡವಾಳ ಹೊಂದಿದೆ. 3.30 ಲಕ್ಷ ಗ್ರಾಮಗಳಲ್ಲಿ ಸಹಕಾರ ಕ್ಷೇತ್ರ ವ್ಯಾಪಿಸಿದೆ. ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಶೇ. 40 ರಷ್ಟು ಪಾಲನ್ನು ಸಹಕಾರ ಕ್ಷೇತ್ರ ನೀಡುತ್ತಿದೆ.
ಅಂತಹ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ ಪ್ರತ್ಯೇಕ ಸಚಿವಾಲಯ ಪ್ರಾರಂಭಿಸಿರುವುದು ಸಂತೋಷದ ವಿಚಾರ ಎಂದು ಹೇಳಿದರು. ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ 6154.18 ಲಕ್ಷ ಷೇರು ಬಂಡವಾಳ, 4121.8 ಲಕ್ಷ ರೂ. ನಿಧಿ, 83188.29 ಲಕ್ಷ ರೂ. ದುಡಿಯುವ ಬಂಡವಾಳ, 39029.33 ಲಕ್ಷ ರೂ. ಠೇವಣಿ ಹೊಂದಿದೆ. 47556.48 ಲಕ್ಷ ರೂ. ಕೃಷಿ, 20870.83 ಲಕ್ಷ ರೂ. ಕೃಷಿಯೇತರ ಸಾಲ, 1366.44 ಲಕ್ಷ ರೂ. ಕೆಸಿಸಿ ಸಾಲ ನೀಡಿದೆ. ಮಾ. 31ರ ಅಂತ್ಯಕ್ಕೆ 123.43 ಲಕ್ಷ ರೂ.ಗಳ ಲಾಭ ಗಳಿಸಿದೆ. ಶೇ. 92 ರಷ್ಟು ಸಾಲ ವಸೂಲಾತಿ ಮಾಡಲಾಗಿದೆ.
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನಡಿ ವಿವಿಧ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಸಾಲ ಪಡೆದಿದ್ದ 420ಕ್ಕೂ ಹೆಚ್ಚು ರೈತರು ಕೊರೊನಾದಿಂದ ಮೃತಪಟ್ಟಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿರುವುದಾಗಿ ತಿಳಿಸಿದರು.
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎನ್.ಎ. ಮುರುಗೇಶ್ ಮಾತನಾಡಿ, ರಾಜ್ಯದಲ್ಲಿ 264 ಪಟ್ಟಣ ಸಹಕಾರ ಬ್ಯಾಂಕ್ಗಳ 11,145 ಶಾಖೆಗಳಿವೆ. 25,55,442 ಸದಸ್ಯರು, 9068 ಸಿಬ್ಬಂದಿ ಇದ್ದಾರೆ. 1593.34 ಕೋಟಿ ರೂ. ಷೇರು ಬಂಡವಾಳ, 50161.42 ಕೋಟಿ ರೂ. ದುಡಿಯುವ ಬಂಡವಾಳ, 43191.27 ಕೋಟಿ ರೂ. ಠೇವಣಿ ಹೊಂದಿದೆ.
ರಾಜ್ಯ ಸರ್ಕಾರ ಸಹಕಾರ ಕ್ಷೇತ್ರದಲ್ಲಿ ಹಸ್ತಕ್ಷೇಪ ಕಡಿಮೆ ಮಾಡಬೇಕು. ಸಹಕಾರಿಗಳಿಗೆ ಅನುಕೂಲ ಆಗುವಂತೆ ಮತ್ತೆ ಯಶಸ್ವಿನಿ ಯೋಜನೆ ಮುಂದುವರೆಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಬಿ. ಶೇಖರಪ್ಪ, ಜಿ.ಎನ್. ಸ್ವಾಮಿ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.