ಸೆಮಿಸ್ಟರ್‌ ಫಲಿತಾಂಶ ರದ್ದುಪಡಿಸದಿದ್ರೆ ಹೋರಾಟ


Team Udayavani, Jul 14, 2021, 9:47 PM IST

14-21

ದಾವಣಗೆರೆ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಪ್ರಕಟಿಸಿರುವ 2 ಮತ್ತು 4ನೇ ಸೆಮಿಸ್ಟರ್‌ ಫಲಿತಾಂಶವನ್ನು ಒಂದು ವಾರದಲ್ಲಿ (ಜು. 20 ) ರದ್ದುಪಡಿಸಬೇಕು. ಇಲ್ಲದಿದ್ದಲ್ಲಿ ಹುಬ್ಬಳ್ಳಿಯಲ್ಲಿರುವ ವಿಶ್ವವಿದ್ಯಾಲಯದ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಮತ್ತು ರಾಜ್ಯಾದ್ಯಂತ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ವಿವಿಧ ವಿದ್ಯಾರ್ಥಿ ಸಂಘಟನೆ ಮುಖಂಡರು ಎಚ್ಚರಿಸಿದ್ದಾರೆ.

ರಾಜ್ಯ ಕಾನೂನು ವಿಶ್ವವಿದ್ಯಾಲಯ ಉತ್ಛ ನ್ಯಾಯಾಲಯದ ತೀರ್ಪು ಉಲ್ಲಂಘಿಸಿ 2 ಮತ್ತು 4ನೇ ಸೆಮಿಸ್ಟರ್‌ ಫಲಿತಾಂಶ ಪ್ರಕಟಿಸಿರುವುದರಿಂದ ಸಾವಿರಾರು ಕಾನೂನು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೂಡಲೇ ಫಲಿತಾಂಶ ರದ್ದುಪಡಿಸಿ ಎಲ್ಲ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಗ್ರೇಡ್‌ ಆಧಾರದಲ್ಲಿ ಫಲಿತಾಂಶ ಪ್ರಕಟಿಸಬೇಕು ಎಂದು ಎಸ್‌ಎಫ್‌ಐ ಜಿಲ್ಲಾ ಸಂಚಾಲಕ ಲಕ್ಷ್ಮಣ ರಮಾವತ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಕೊರೊನಾ, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಾನೂನು ವಿದ್ಯಾರ್ಥಿಗಳು ಭೌತಿಕ ತರಗತಿಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆನ್‌ಲೈನ್‌ ಪಾಠಗಳಿಂದ ವಂಚಿತರಾಗಿದ್ದಾರೆ. ವಿದ್ಯಾರ್ಥಿಗಳು ಆಂತರಿಕ ಪರೀಕ್ಷೆಗಳಿಗೆ ಮಾತ್ರ ಹಾಜರಾಗಿದ್ದರು. ಪರೀಕ್ಷೆಗೆ ಹಾಜರಾಗಿಯೇ ಇಲ್ಲ. ಆದರೂ ವಿಶ್ವವಿದ್ಯಾಲಯ ಫಲಿತಾಂಶ ಪ್ರಕಟಿಸಿದೆ.

ರಾಜ್ಯದ 108 ಕಾಲೇಜಿಗಳಲ್ಲಿನ 150-200 ವಿದ್ಯಾರ್ಥಿಗಳನ್ನು ಮಾತ್ರ ತೇರ್ಗಡೆ ಮಾಡಲಾಗಿದೆ. 3 ರಿಂದ 4 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆಯದೇ ಫೇಲ್‌ ಆಗಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯ ಬೀದಿಗೆ ಬಂದಂತಾಗಿದೆ ಎಂದು ಅಳಲು ತೋಡಿಕೊಂಡರು.

ರಾಜ್ಯ ಉಚ್ಚ ನ್ಯಾಯಾಲಯ ಈ ಫಲಿತಾಂಶದಲ್ಲಿ ಪಾಸಾಗದಿರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸದೆ ಅವರನ್ನು 1 ಹಾಗೂ 2ನೇ ಸೆಮಿಸ್ಟರ್‌ ಪಾಸಾದ ನಂತರ 2 ಹಾಗೂ 4 ನೇ ಸೆಮಿಸ್ಟರ್‌ನ್ನು ಪಾಸ್‌ ಮಾಡಬೇಕು ಎಂದು ತೀರ್ಪು ನೀಡಿದೆ. ಕಾನೂನು ವಿಶ್ವವಿದ್ಯಾಲಯ ತೀರ್ಪನ್ನು ಉಲ್ಲಂಘಿಸಿ, ತನ್ನದೇ ಆದ ಮಾನದಂಡದ ಆಧಾರದಲ್ಲಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಿದೆ.

ನೈಸರ್ಗಿಕ ಕಾನೂನಿನ ಸಿದ್ಧಾಂತದಡಿ ವಿದ್ಯಾರ್ಥಿಗಳಿಗೆ ಕನಿಷ್ಠ ಅಂಕ ನೀಡುವ ಮೂಲಕ ಮುಂದಿನ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ನೆರವು ನೀಡಬೇಕು ಎಂದು ಮನವಿ ಮಾಡಿದರು. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಉಪಾಧ್ಯಕ್ಷ ಡಿ.ಸಿ. ರಾಕೇಶ್‌, ಎಐಎಸ್‌ ಎಫ್‌ ರಾಜ್ಯ ಕಾರ್ಯದರ್ಶಿ ಯು. ರಮೇಶ ನಾಯ್ಕ,ಆರ್‌.ಎಲ್‌. ಕಾನೂನು ಕಾಲೇಜು ವಿದ್ಯಾರ್ಥಿ ಕೆ. ಸಿದ್ದನಗೌಡ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.