ನೇಕಾರರ ಜತೆ ಡಿಕೆಶಿ ಸಂವಾದ


Team Udayavani, Jul 17, 2021, 7:48 PM IST

16 bnt 5

ಬನಹಟ್ಟಿ: ರಾಜ್ಯದ ನೇಕಾರ ಸಮುದಾಯದಲ್ಲಿ ಅನೇಕ ರೀತಿಯ ನೇಕಾರರಿದ್ದು, ನೇಕಾರ ವೃತ್ತಿಗೆ ಸಂಬಂ  ಧಿಸಿದ ಜ್ವಲಂತ ಸಮಸ್ಯೆಗಳ ಕುರಿತು ಜು.18 ರಂದು ಬೆಳಗ್ಗೆ 9 ಗಂಟೆಗೆ ಬನಹಟ್ಟಿ ಬಸವೇಶ್ವರ (ಬಿದರಿ) ಸಮುದಾಯ ಭವನದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ ಅವರಿಂದ ಸಂವಾದ ಕಾರ್ಯಕ್ರಮ ಜರುಗಲಿದೆ ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.

ಬನಹಟ್ಟಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಭಿನ್ನ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ನೇಕಾರರು ದಯನೀಯ ಸ್ಥಿತಿ ಎದುರಿಸುತ್ತಿದ್ದಾರೆ. ನೇಕಾರ ಮತ್ತು ಮಾಲೀಕರ ಏಳ್ಗೆಗೆ ಯಾವ ರೀತಿ ಸ್ಪಂದನೆ ಅಗತ್ಯವೆಂಬುದರ ಕುರಿತು ಹಾಗೂ ನೇಕಾರಿಕೆ ಸಂಪೂರ್ಣ ನಶಿಸಿ ಹೋಗುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಇದರ ಪುನಶ್ಚೇತನಕ್ಕೆ ಬೇಕಾದ ಅಗತ್ಯತೆಗಳ ಬಗ್ಗೆ ಸಂವಾದ ಪ್ರಾಮುಖ್ಯತೆ ಪಡೆಯಲಿದೆ ಎಂದರು. ಸಾಲ ಮನ್ನಾ, ಸಬ್ಸಿಡಿ ಇತರೆ ಯೋಜನೆಗಳು ನೇಕಾರರಿಗೆ ಸಾಲುತ್ತಿಲ್ಲ. ಇದರ ಸಂಪೂರ್ಣ ಪುನಶ್ಚೇತನ ಸರ್ಕಾರ ಯೋಜನೆಗಳ ಮೂಲಕ ರೂಪಿಸಬೇಕಿದೆ. ಸಾಲ ಮನ್ನಾ, ಕೆಎಚ್‌ಡಿಸಿ ನೇಕಾರ ಮನೆ ಸಾಲ ಮನ್ನಾ, ಹಕ್ಕುಪತ್ರ ಕುಟುಂಬಗಳಿಗೆ ಮಾಲೀಕತ್ವ ಹಕ್ಕು, ವಿದ್ಯುತ್‌ ಸಬ್ಸಿಡಿ ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನದೊಂದಿಗೆ ಯಶಸ್ವಿ ಕಂಡಿದ್ದೇನೆ. ಆದರೆ ಈಗಿನ ಸರ್ಕಾರ ಇದನ್ನು ಉಳಿಸಿಕೊಂಡು ಹೋಗುವ ಬದಲಾಗಿ ತೆರಿಗೆ ಹೆಚ್ಚಳದೊಂದಿಗೆ ವಿದ್ಯುತ್‌ ಹೊರೆ ಮಾಡುತ್ತಿರುವುದು ಬೇಸರವಾಗಿದೆ ಎಂದರು.

ಒಟ್ಟಾರೆ ನೋಟು ಅಮಾನ್ಯ, ಜಿಎಸ್‌ಟಿ, ಕೊರೊನಾ, ಅತಿವೃಷ್ಟಿಯಿಂದ ಜವಳಿ ಉದ್ಯಮ ರಾಜ್ಯದಲ್ಲಿ ಅವನತಿಯತ್ತ ಸಾಗುತ್ತಿದೆ. ಸಣ್ಣ ತಾಂತ್ರಿಕ ಸಮಸ್ಯೆಗಳನ್ನೂ ಪರಿಹರಿಸುವಲ್ಲಿ ಸರ್ಕಾರ ವೈಫಲ್ಯತೆ ಕಂಡಿದೆ. ಕಚ್ಚಾ ವಸ್ತುಗಳ ಮೇಲೆ ಬೆಲೆ ನಿಯಂತ್ರಣವಿಲ್ಲ. ಬದಲಾಗಿ ತೆರಿಗೆ ಹೊರೆ ಇವೆಲ್ಲದರ ಕುರಿತು ಜವಳಿ ಉದ್ಯಮ ಉಳಿವಿಗಾಗಿ ಶಿವಕುಮಾರರಿಂದ ಚಿಂತನೆ ನಡೆಯಲಿದೆ. ಆದ್ದರಿಂದ ನೇಕಾರರು ಪಕ್ಷಭೇದ ಮರೆತು ಸಂವಾದದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಈ ವೇಳೆ ಚನವೀರಪ್ಪ ಹಾದಿಮನಿ, ಸಂಗಪ್ಪ ಕುಂದಗೋಳ, ಶಂಕರ ಜಾಲಿಗಿಡದ, ನೀಲಕಂಠ ಮುತ್ತೂರ, ರಾಜೇಂದ್ರ ಭದ್ರನ್ನವರ, ಮಾಳು ಹಿಪ್ಪರಗಿ, ಬಸವರಾಜ ಗುಡ್ಡೋಡಗಿ, ಓಂಪ್ರಕಾಶ ಮನಗೂಳಿ ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.