ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ಸಿದ್ಧತೆ


Team Udayavani, Jul 19, 2021, 6:29 PM IST

19-18

ಕಡೂರು: ಕಡೂರು ತಾಲೂಕು ಕಡೂರು- ಬೀರೂರು ಶೈಕ್ಷಣಿಕ ವಲಯಗಳನ್ನು ಹೊಂದಿದ್ದು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ವಿಶೇಷ ಕೋವಿಡ್‌ ನಿಯಮಗಳನ್ನು ಅಳವಡಿಸಿಕೊಂಡಿದ್ದು ಕೊರೊನಾ ಸೋಂಕಿರುವ ಇಬ್ಬರನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲು ಸಕಲ ಸಿದ್ಧತೆ ಮಾಡಲಾಗಿದೆ ಎಂದು ಕಡೂರು ಬಿಇಒ ಜಿ. ರಂಗನಾಥಸ್ವಾಮಿ ಹಾಗೂ ಬೀರೂರು ಬಿಇಒ ಎಸ್‌.ರಾಜಕುಮಾರ್‌ ಹೇಳಿಕೆ ನೀಡಿದ್ದಾರೆ.

ಸೋಮವಾರ ಕೋರ್‌ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆದರೆ ಜು. 22 ರಂದು ಭಾಷಾ ವಿಷಯಗಳಾದ ಕನ್ನಡ ,ಇಂಗ್ಲಿಷ್‌ ಮತ್ತು ಹಿಂದಿ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಕಡೂರು ಶೈಕ್ಷಣಿಕ ವಲಯವು 16 ಪರೀûಾ ಕೇಂದ್ರಗಳನ್ನು ಹೊಂದಿದ್ದು ಒಟ್ಟು 227 ಕೊಠಡಿಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಂದು ಕೊಠಡಿಗೆ 12 ಜನ ವಿದ್ಯಾರ್ಥಿಗಳು ಅವರನ್ನು 6 ಅಡಿ ಅಂತರದಲ್ಲಿ ಕೂರಿಸಲಾಗುವುದು. ಈ ಬಾರಿ ಹೊಸ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ ಒಟ್ಟು 2,489 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಇವರಲ್ಲಿ ಖಾಸಗಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಮಕ್ಕಳು ಸೇರಿದ್ದಾರೆ. ಈ ಬಾರಿ ಕೊರೊನಾ ಅಲೆಯಿಂದ 6 ಪರೀûಾ ಕೇಂದ್ರಗಳನ್ನು ಹೆಚ್ಚುವರಿಯಾಗಿ ತೆರೆಯಲಾಗಿದೆ ಮಕ್ಕಳಿಗೆ ಯಾವುದೇ ಭಯ, ಆತಂಕ, ಅಡ್ಡಿ ಇಲ್ಲದೆ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕಡೂರು ಬಿಇಒ ಜಿ.ರಂಗನಾಥಸ್ವಾಮಿ ತಿಳಿಸಿದರು.

ಬೀರೂರು ಶೈಕ್ಷಣಿಕ ವಲಯ: ಬೀರೂರು ಶೈಕ್ಷಣಿಕ ವಲಯದಲ್ಲಿ ಒಟ್ಟು 10 ಕೇಂದ್ರಗಳನ್ನು ತೆರೆದಿದ್ದು ಹೊಸ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ 1,408 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 10 ಕೇಂದ್ರಗಳಿಂದ 132 ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ಕೊಠಡಿಗೂ ಸ್ಯಾನಿಟೈಸ್‌ ಮಾಡಲಾಗಿದ್ದು, ಮಕ್ಕಳಿಗೆ ಕುಡಿಯಲು ಶುದ್ಧ ನೀರು,ಅವಶ್ಯಕತೆ ಇದ್ದವರಿಗೆ ಎನ್‌- 95 ಮಾಸ್ಕ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಸಮಸ್ಯೆಗಳಿಲ್ಲದೆ ಇಲಾಖೆಯ ಸಿಬ್ಬಂದಿ ಶಿಕ್ಷಕರ ಸಹಕಾರದೊಂದಿಗೆ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಬೀರೂರು ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌. ರಾಜಕುಮಾರ್‌ ಪತ್ರಿಕೆಗೆ ಮಾಹಿತಿ ನೀಡಿದರು.

ಕೋವಿಡ್‌ ವಿಶೇಷ ಪರೀûಾ ಕೇಂದ್ರ: ಕಡೂರು ಶೈಕ್ಷಣಿಕ ವಲಯದ ಗಿರಿತಿಮ್ಲಾಪುರ ಗ್ರಾಮದ ವಿದ್ಯಾರ್ಥಿ ಮೃತ್ಯುಂಜಯ ಪ್ರೌಢಶಾಲೆ ವಡೇರಹಳ್ಳಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಕೋವಿಡ್‌ ಪಾಸಿಟಿವ್‌ ಹಿನ್ನೆಲೆಯಲ್ಲಿ ಕಡೂರು ಪಟ್ಟಣದ ಹೈವೇ ರಸ್ತೆಯಲ್ಲಿರುವ ಬಾಯ್ಸ ಹಾಸ್ಟೆಲ್‌ನಲ್ಲಿ ವಿಶೇಷವಾಗಿ ತೆರೆದಿರುವ ಪರೀûಾ ಕೇಂದ್ರಕ್ಕೆ ಗ್ರಾಮದಿಂದಲೇ ಆ್ಯಂಬುಲೆನ್ಸ್‌ ಮೂಲಕ ಕರೆತಂದು ಪರೀಕ್ಷೆ ಬರೆಸಲು ಸಿದತೆ ಮಾಡಲಾಗಿದೆ.

ಬೀರೂರು ಶೈಕ್ಷಣಿಕ ವಲಯದ ಸೈದುಖಾನ್‌ ಗ್ರಾಮದ ವಿದ್ಯಾರ್ಥಿ ಬಳ್ಳಾವರ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು ಸೋಂಕು ತಗುಲಿದ್ದು ಈ ವಿದ್ಯಾರ್ಥಿಯ ತರೀಕೆರೆ ಪಟ್ಟಣದ ವಿಶೇಷ  ಕೇಂದ್ರದಲ್ಲಿ ಪರೀಕ್ಷೆ ಬರೆಸಲು ಸಿದ್ಧತೆ ಮಾಡಲಾಗಿದೆ ಎಂಬ ಮಾಹಿತಿಯನ್ನು ರಾಜಕುಮಾರ್‌ ನೀಡಿದರು

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.