ರಾಹುಲ್, ವೈಷ್ಣವ್, ಕಿಶೋರ್ ಮೇಲೆ ಬೇಹು! ಸಂಚಲನ ಸೃಷ್ಟಿಸಿದ ಪೆಗಾಸಸ್ ಸ್ಪೈ ವೇರ್’ ಆರೋಪ
Team Udayavani, Jul 20, 2021, 7:20 AM IST
ಹೊಸದಿಲ್ಲಿ: ವಿಪಕ್ಷಗಳ ನಾಯಕರು, ಕೇಂದ್ರದ ಸಚಿವರು, ಪತ್ರಕರ್ತರ ಸಹಿತ ನೂರಾರು ಮಂದಿಯ ಮೊಬೈಲ್ ಫೋನ್ ಗಳು ಇಸ್ರೇಲ್ನ ಪೆಗಾಸಸ್ ಸ್ಪೈವೇರ್ನ ಗುರಿ ಆಗಿದ್ದವು ಎಂಬ ಸುದ್ದಿ ದೇಶಾದ್ಯಂತ ಸಂಚಲನ ಮೂಡಿಸಿದೆ.
ಸೋಮವಾರ ಬಿಡುಗಡೆಯಾದ ಹೊಸ ಪಟ್ಟಿಯ ಪ್ರಕಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣ ರಣತಂತ್ರಗಾರ ಪ್ರಶಾಂತ್ ಕಿಶೋರ್, ಮಾಜಿ ಚುನಾವಣ ಆಯುಕ್ತ ಅಶೋಕ್ ಲಾವಾಸಾ, ಕೇಂದ್ರದ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ಪ್ರಹ್ಲಾದ್ ಪಟೇಲ್, ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ, ನಿವೃತ್ತ ಸಿಜೆಐ ರಂಜನ್ ಗೊಗೋಯ್ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ್ದ ಸುಪ್ರೀಂ ಕೋರ್ಟ್ ಸಿಬಂದಿಯ ಕುಟುಂಬಸ್ಥರ ಫೋನ್ ಗಳನ್ನು ಕದ್ದಾಲಿಸಲಾಗುತ್ತಿತ್ತು ಯಾ ಇವರನ್ನು ಸಂಭಾವ್ಯ ಗುರಿಗಳೆಂದು ಪಟ್ಟಿ ಮಾಡಲಾಗಿತ್ತು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ಅಷ್ಟೇ ಅಲ್ಲ, ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೆ ಅವರ ಖಾಸಗಿ ಕಾರ್ಯದರ್ಶಿ ಸಂಜಯ್ ಕಾಚ್ರೂ, ವಿಹಿಂಪದ ನಾಯಕ ಪ್ರವೀಣ್ ತೊಗಾಡಿಯಾ ಕೂಡ ಗುರಿ ಆಗಿದ್ದರು ಎನ್ನಲಾಗಿದೆ.
ಶಾ ರಾಜೀನಾಮೆಗೆ ಆಗ್ರಹ
ವಿಚಾರ ಬಯಲಾಗುತ್ತಿದ್ದಂತೆಯೇ ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ಕೇಂದ್ರದ ವಿರುದ್ಧ ಹರಿ ಹಾಯ್ದಿವೆ. ಗೃಹ ಸಚಿವ ಅಮಿತ್ ಶಾ ಅವ ರನ್ನು ವಜಾ ಮಾಡಬೇಕು, ಮೋದಿ ಪಾತ್ರದ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿವೆ.
ಸಾಕ್ಷ್ಯವೇ ಇಲ್ಲ
ಆರೋಪವನ್ನು ಅಲ್ಲಗಳೆದಿರುವ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್, ಕದ್ದಾಲಿಕೆ ಜತೆ ಸರಕಾರ ಅಥವಾ ಬಿಜೆಪಿ ನಂಟು ಹೊಂದಿರುವ ಬಗ್ಗೆ ಸಾಕ್ಷ್ಯ ಇಲ್ಲ. ದತ್ತಾಂಶದಲ್ಲಿ ಮೊಬೈಲ್ ಸಂಖ್ಯೆ ಇದ್ದಾಕ್ಷಣ ಅವರೆಲ್ಲರ ಸಂಭಾಷಣೆಗಳನ್ನು ಕದ್ದಾಲಿಸಲಾಗಿದೆ ಎಂದು ಹೇಳಲಾಗದು ಎಂದು ಈ ವರದಿಯನ್ನು ಬಹಿರಂಗ ಪಡಿಸಿರುವವರು ಕೂಡ ಹೇಳಿದ್ದಾರೆ ಎಂದಿದ್ದಾರೆ.
ಸಂಸತ್ ಅಧಿವೇಶನ ಆರಂಭವಾಗುವ ಹಿಂದಿನ ದಿನವೇ ಹೀಗೊಂದು ವರದಿ ಬರುತ್ತಿದೆ ಎಂದರೆ ಅದನ್ನು ಕಾಕತಾಳೀಯ ಎಂದು ಕರೆಯಲು ಸಾಧ್ಯವೇ ಇಲ್ಲ. ಈ ಹಿಂದೆಯೂ ಇದೇ ರೀತಿ ಆಧಾರ ರಹಿತ ಆರೋಪ ಮಾಡಲಾಗಿತ್ತು.
-ಅಶ್ವನಿ ವೈಷ್ಣವ್, ಕೇಂದ್ರ ಐಟಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ
Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್ಲೈನ್ ನೋಂದಣಿ ಕಡ್ಡಾಯ
Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ
Bhopal;1,800 ಕೋ.ರೂ. ಡ್ರಗ್ಸ್ ವಶ!; ದಿಲ್ಲಿಯಲ್ಲಿ ಕೊಕೇನ್ ಪತ್ತೆ ಬೆನ್ನಲ್ಲೇ ಘಟನೆ
Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ
Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ
Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು
Bigg Boss Marathi 5: ಬಿಗ್ ಬಾಸ್ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.