ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 55 ವರ್ಷದ ಪೇದೆ


Team Udayavani, Jul 20, 2021, 2:17 PM IST

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 55 ವರ್ಷದ ಪೇದೆ

ಕೋಲಾರ: ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ55 ವರ್ಷದ ಪೊಲೀಸ್‌ ಪೇದೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿರುವ ಅಪರೂಪದ ಘಟನೆ ಸೋಮವಾರ ‌ಕಂಡು ಬಂತು.

ಕೋವಿಡ್‌ ಆತಂಕದ ನಡುವೆ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಿದೆ. ಈ ನಡುವೆಕೋಲಾರದ ಬಾಲಕಿಯರ ಜೂನಿಯರ್‌ ಕಾಲೇಜುಪರೀಕ್ಷಾ ಕೇಂದ್ರದಲ್ಲಿ 55 ವರ್ಷದ ಕಠಾರಿಪಾಳ್ಯದ ನಿವಾಸಿ ಮಂಜುನಾಥ್‌ ಉತ್ಸಾಹದಿಂದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವ ಮೂಲಕ ಗಮನ ‌ ಸೆಳೆದಿದ್ದಾರೆ.

ಮಂಜುನಾಥ್‌ ಸದ್ಯ ಬೆಂಗಳೂರು ಸಶಸ್ತ್ರ ಪೊಲೀಸ್‌ ಮೀಸಲು ಪಡೆಯಲ್ಲಿ ಕೆಲಸ ಮಾಡುತ್ತಿದ್ದು, 1993ರಲ್ಲಿ ಕೆಲಸಕ್ಕೆ ಸೇರಿಕೊಂಡಾಗ ನಾಲ್ಕನೇ ತರಗತಿ ಪಾಸ್‌ ಆಗಿದ್ದರೆ ಕೆಲಸ ಸಿಗುತ್ತಿತ್ತು ಎನ್ನಲಾಗಿದೆ. ತದ ನಂತರ ಅಂದರೆ 1996 ನಂತರ ಪೊಲೀಸ್‌ ಪೇದೆ ಕೆಲಸಕ್ಕೆ ಸೇರಲು ಹತ್ತನೇ ತರಗತಿ ಉತ್ತೀರ್ಣ ಕಡ್ಡಾಯ ಮಾಡಿದ್ದಾರೆ. ಕಳೆದ ‌ ವರ್ಷವೂ ಪರೀಕ್ಷೆ ಬರೆದು ಅನುತ್ತೀರ್ಣರಾಗಿದ್ದ ಮಂಜುನಾಥ್‌ ಎಷ್ಟು ವರ್ಷ ಸೇವೆ ಸಲ್ಲಿಸಿದರೂ ಅವರಿಗ ಬಡ್ತಿ ಸಿಕ್ಕಿರಲಿಲ್ಲ.

ಈ ಹಿನ್ನೆಲೆಯಲ್ಲಿ ಮಂಜುನಾಥ್‌ ಈಗ ‌ ಅವರಿಗೆಕಡ್ಡಾಯವಾಗಿ ಹತ್ತನೇ ತರಗತಿಪಾಸ್‌ ಮಾಡಬೇಕು. ಅದಕ್ಕಾಗಿ ಮಂಜುನಾಥ್‌ ಯಾವುದೇ ಸಂಕೋಚವಿಲ್ಲದೆ ಪರೀಕ್ಷೆ ಬರೆಯಲು ಸೋಮವಾರ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದರು.

ಪಾಸಾದ್ರೆ ಪ್ರಮೋಷನ್‌: ಈ ಬಾರಿ ಹತ್ತನೇ ತರಗತಿ ಪಾಸ್‌ ಆದರೆ ಮಂಜುನಾಥ್‌ ಅವರಿಗೆ ಮುಖ್ಯ ಪೊಲೀಸ್‌ ಪೇದೆಯಾಗಿ ಪ್ರಮೋಷನ್‌ ಸಿಗಲಿದೆ.  ಮಂಜುನಾಥ್‌ ಪರೀಕ್ಷೆ ಬರೆಯಲು ಬಂದಾಗ ಅಲ್ಲಿದ್ದ ಕೆಲವರು ಇವರನ್ನು ನೋಡಿಆಶ್ಚರ್ಯಪಟ್ಟರು. ಇವರು ಶಿಕ್ಷಕರೋ, ಇಲ್ಲಾಮುಖ್ಯ ಶಿಕ್ಷಕರೋ ಇರಬೇಕು ಎಂದುಕೊಂಡರು. ಆದರೆ ಅವರು ಒಬ್ಬ ವಿದ್ಯಾರ್ಥಿಯಂತೆ ಪರೀಕ್ಷೆ ಬರೆಯಲು ಕುಳಿತಾಗ ‌ ಆಶ್ಚರ್ಯಚಕಿತರಾಗಿ ನೋಡಿದರು.

ಮಂಜುನಾಥ್‌ ಅವರಿಗೆ ಮಕ್ಕಳು, ಮೊಮ್ಮಕ್ಕಳಿದ್ದಾರೆ. ಆದರೂ ಅವರು ಯಾವುದೇಬೇಸರ ಸಂಕೋಚವಿಲ್ಲದೆ ಪರೀಕ್ಷೆ ಬರೆಯಲುಬಂದಿದ್ದಾರೆ. ಇವರಲ್ಲದೆ ಜಿಲ್ಲೆಯ ಬಂಗಾರಪೇಟೆತಾಲೂಕಿನ ಚಿನ್ನಕೋಟೆಯ 51ವ‌ರ್ಷದ ಅಶೋಕ್‌ ಎಂಬುವವರು ಪಂಚಾಯ್ತಿಯಲ್ಲಿ ಕೆಲಸ ಮಾಡುತ್ತಿದ್ದು, ಇವರು ಕೂಡಾ ಹತ್ತನೇ ತರಗತಿ ಪರೀಕ್ಷೆ ಬರೆದಿದ್ದಾರೆ.

ಟಾಪ್ ನ್ಯೂಸ್

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.