ಕರಾವಳಿಯಲ್ಲಿ ಸರಳ ಬಕ್ರೀದ್‌ ಆಚರಣೆ; ಮಸೀದಿಗಳಲ್ಲಿ ಪ್ರಾರ್ಥನೆ


Team Udayavani, Jul 21, 2021, 10:42 AM IST

main-bakrid

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸರಕಾರದ ಹೊಸ ಮಾರ್ಗಸೂಚಿಯಂತೆ  ಮುಸಲ್ಮಾನ ಬಾಂಧವರು ಸರಳವಾಗಿ ಬಕ್ರೀದ್‌ ಹಬ್ಬ ಆಚರಿಸಿದರು.

ಉಡುಪಿಯ ಹಾಶಿಮಿ ಮಸೀದಿಯಲ್ಲಿ ರಾಜ್ಯ ಆಡಳಿತ ಹೊರಡಿಸಿದ ಮಾರ್ಗಸೂಚಿಗಳೊಂದಿಗೆ ಈದ್ ಆಚರಿಸಲಾಯಿತು. ಬೆಳಿಗ್ಗೆ 7.30ಕ್ಕೆ ನಡೆದ ಸಾಮೂಹಿಕ ಪ್ರಾರ್ಥನೆ ನಂತರ ಮೌಲಾನಾ ಹಾಶಿಮ್ ಉಮ್ರಿ ಅವರ ಈದ್ ಅಲ್ ಅಧ್ಸ್‌ನ ( Eid Al Adha) ಮಹತ್ವವನ್ನು ಹೇಳಿದರು

ರಾಜ್ಯ ಮತ್ತು ಜಿಲ್ಲಾಡಳಿತದ ನಿರ್ದೇಶನದಂತೆ ಮುಸ್ಲಿಂ ಸಹೋದರರು ಸಾಮಾಜಿಕ ದೂರವನ್ನು ಕಾಪಾಡಿಕೊಂಡು ಮುಖವಾಡ ಧರಿಸಿ ಈದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಶಿರ್ವಸುನ್ನಿ ಜಾಮಿಯಾ ಮಸೀದಿಯಲ್ಲಿ ಸರಳ ಬಕ್ರೀದ್‌ ಆಚರಣೆ

ಕೋವಿಡ್‌ ಸೋಂಕು ಹಿನ್ನೆಲೆಯಲ್ಲಿ ಶಿರ್ವ ಸುನ್ನಿ ಜಾಮಿಯಾ ಮಸೀದಿಯಲ್ಲಿ ಸರಕಾರದ ಹೊಸ ಮಾರ್ಗಸೂಚಿಯಂತೆ ಸರಳವಾಗಿ ಬಕ್ರೀದ್‌ ಹಬ್ಬ ಆಚರಿಸುವ ಮೂಲಕ ಜಮಾತ್‌ನ ಸೀಮಿತ ಜನರಿಗೆ ನಮಾಜ್‌ ನೆರವೇರಿಸಲು ಅವಕಾಶ ಕಲ್ಪಿಸಿಕೊಡಲಾಗಿತ್ತು.

ಬೆಳಗ್ಗೆ ಜಾಮೀಯಾ ಮಸೀದಿ ಮತ್ತು ತೋಪನಂಗಡಿ ಮಸೀದಿಯಲ್ಲಿ ಮುಸಲ್ಮಾನ ಬಾಂಧವರು ಮಾಸ್ಕ್ ಧರಿಸಿ ಸಾಮೂಹಿಕ ಅಂತರ ಕಾಪಾಡಿಕೊಂಡು ನಮಾಜ್‌ ಸಲ್ಲಿಸಿದರು. ಕೊವಿಡ್‌ 19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಳ್ಳಲಾಗಿದ್ದು, ಕೈಕುಲುಕಿ, ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಳ್ಳಲು ನಿರ್ಬಂಧ ವಿಧಿಸಲಾಗಿತ್ತು.

ಶಿರ್ವ ಜಾಮೀಯಾ ಮಸೀದಿಯ ಆಡಳಿತ ಮಂಡಳಿಯ ವತಿಯಿಂದ ಮಕ್ಕಳು ಮತ್ತು ವೃದ್ಧರಿಗೆ ಮನೆಯಲ್ಲಿಯೇ ನಮಾಜ್‌ ಸಲ್ಲಿಸಲು ಸೂಚಿಸಲಾಗಿದ್ದು, ಪ್ರಾರ್ಥನೆ ಸಲ್ಲಿಸಿದ ಬಳಿಕ ಮನೆಮಂದಿಯೊಂದಿಗೆ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಕೊರೊನಾ ಮಹಾಮಾರಿಯಿಂದಾಗಿ ನೆರೆಹೊರೆಯವರೊಂದಿಗೂ ಶುಭಾಶಯ ವಿನಿಮಯ ಮಾಡಿಕೊಳ್ಳಲು ಆತಂಕದ ಪರಿಸ್ಥಿತಿ ಇದೆ. ಬಕ್ರೀದ್‌ ಹಬ್ಬದ ಪ್ರಾರ್ಥನೆಯೊಂದಿಗೆ ಕೊರೊನಾ ಭೀತಿ ದೂರವಾಗಿ ಸಮಾಜದಲ್ಲಿ  ನೆಮ್ಮದಿಯ ಜನಜೀವನ ನೆಲೆಗೊಳ್ಳಲಿ ಎಂದು ಶಿರ್ವಸುನ್ನಿ ಜಾಮೀಯಾ ಮಸೀದಿಯ ಖತೀಬರಾದ ಸಿರಾಜುದ್ದೀನ್‌ ಝೈನಿ, ಮಸೀದಿ ಆಡಳಿತ ಮಂಡಳಿಯ ಅಧ್ಯಕ್ಷ ಹುಸೇನ್‌ ಅಬ್ದುಲ್‌ ಕಲಂದರ್‌ ಮತ್ತು  ಶಿರ್ವ ಗ್ರಾ.ಪಂ. ಮಾಜಿ ಅಧ್ಯಕ್ಷ ಹಸನಬ್ಬ ಶೇಕ್‌ ಆಶಯ ವ್ಯಕ್ತಪಡಿಸಿದ್ದಾರೆ.

ಕಾಪು ತಾಲೂಕಿನಾದ್ಯಂತ ಸಂಭ್ರಮದ ಬಕ್ರೀದ್ ಆಚರಣೆ

ಕಾಪು ತಾಲೂಕಿನಾದ್ಯಾಂತ ಬುಧವಾರ ಸಂಭ್ರಮ, ಸಡಗರ ಮತ್ತು ಸರಳತೆಯೊಂದಿಗೆ ಮುಸ್ಲಿಂ ಭಾಂಧವರು ಬಕ್ರೀದ್ ಹಬ್ಬವನ್ನು ಆಚರಿಸಿದರು. ಕಾಪು ತಾಲೂಕಿನ ಕಾಪು, ಮೂಳೂರು, ಉಚ್ಚಿಲ, ಎರ್ಮಾಳು, ಪಡುಬಿದ್ರಿ, ಮಜೂರು, ಶಿರ್ವ ಸಹಿತವಾಗಿ ಹೆಚ್ಚಿನ ಕಡೆಗಳಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಮಸೀದಿಗಳಲ್ಲಿ ನಮಾಜ್ ನಡೆಯಿತು.

ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚಿನ ಕಡೆಗಳಲ್ಲಿ ಜಮಾತ್ ವ್ಯಾಪ್ತಿಯಲ್ಲಿ ಮುಂಜಾನೆ ಬೇಗನೆ ನಿಯಮಿತ ಸದಸ್ಯರ ಪಾಲ್ಗೊಳ್ಳುವಿಕೆಯೊಂದಿಗೆ ಸಾಮೂಹಿಕ ನಮಾಜ್ ನಡೆಸಲಾಯಿತು.

ಕಾಪು, ಶಿರ್ವ ಮತ್ತು ಪಡುಬಿದ್ರಿ ಪೊಲೀಸರು ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.

ಪುತ್ತೂರು: ಬಕ್ರೀದ್ ಆಚರಣೆಯ ಪ್ರಯುಕ್ತ ಬುಧವಾರ ಪುತ್ತೂರು ಕೇಂದ್ರ ಜುಮ್ಮಾ ಮಸೀದಿಯಲ್ಲಿ ಮುಸ್ಲಿಂ ಬಾಂಧವರಿಂದ ವಿಶೇಷ ಪ್ರಾರ್ಥನೆ ನೆರವೇರಿತು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.