ಕವಿವಿ: ಕೋವಿಡ್ ನಿಂದ ತಡೆಹಿಡಿದ ಎಲ್ಲಾ ಪರೀಕ್ಷೆಗಳಿಗೆ ದಿನಾಂಕ ನಿಗದಿ


Team Udayavani, Jul 21, 2021, 12:53 PM IST

ಕವಿವಿ: ಕೋವಿಡ್ ನಿಂದ ತಡೆಹಿಡಿದ ಎಲ್ಲಾ ಪರೀಕ್ಷೆಗಳಿಗೆ ದಿನಾಂಕ ನಿಗದಿ

ಧಾರವಾಡ: ಕೋವಿಡ್ 2ನೇ ಆಲೆ ಹಾಗೂ ಸಾರಿಗೆ ಬಸ್ ಮುಷ್ಕರದಿಂದ ಮುಂದೂಡಲ್ಪಟ್ಟಿದ್ದ 2020 -21 ನೇ ಸಾಲಿನ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಗಳ ಪರೀಕ್ಷೆಗಳನ್ನು ಯುಜಿಸಿ ಮಾರ್ಗಸೂಚಿ ಹಾಗೂ ರಾಜ್ಯದ ಉನ್ನತ ಶಿಕ್ಷಣ ಇಲಾಖೆಯ ನಿರ್ದೇಶನಗಳನ್ವಯ ಸಪ್ಟೆಂಬರ್ ಅಂತ್ಯದೊಳಗೆ ಪೂರ್ತಿಗೊಳಿಸಲು ವಿಶ್ವವಿದ್ಯಾಲಯ ನಿರ್ಧರಿಸಲಾಗಿದೆ ಎಂದು ಕವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 26 ರಿಂದ ವಿವಿ ಆವರಣ ಸೇರಿದಂತೆ ಎಲ್ಲ ಪದವಿ ಕಾಲೇಜುಗಳಲ್ಲಿ ಬೋಧಕ ತರಗತಿಗಳು (ಆಫ್ಲೈನ್) ಆರಂಭವಾಗಲಿವೆ. ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಪಡೆದುಕೊಂಡು ತರಗತಿಗಳಿಗೆ ಕೋವಿಡ್ ನಿಯಮ ಪಾಲನೆಯೊಂದಿಗೆ ಹಾಜರಾಗಲು ಸೂಚಿಸಲಾಗಿದೆ ಎಂದರು.

2020-21 ನೇ ಸಾಲಿನ ಈಗಾಗಲೇ ಮುಂದೂಡಲ್ಪಟ್ಟ ಸ್ನಾತಕ, ಸ್ನಾತಕೋತ್ತರ ಮತ್ತು ಡಿಪ್ಲೋಮಾ ಪದವಿಗಳ ಬೆಸ (1,3,5) ಇತ್ಯಾದಿ) ಸೆಮಿಸ್ಟರ್ ಪರೀಕ್ಷೆಗಳನ್ನು ಆಗಸ್ಟ16ರಿಂದ ನಡೆಸಲಾಗುವುದು. ಈ ಹಿಂದೆ ನಿರ್ಣಯಿಸಿದ್ದ ಬಹು ಆಯ್ಕೆ ಪ್ರಶ್ನೆಗಳ ಪರೀಕ್ಷಾ ವಿಧಾನವನ್ನು ಕೈಬಿಡಲಾಗಿದೆ. ಬದಲಾಗಿ ಪ್ರಶ್ನೆಗಳು ಹಿಂದಿನ ಪದ್ಧತಿಯಂತೆ ವಿವರಣಾತ್ಮಕ ಉತ್ತರ ಬರೆಯುವ ವಿಧಾನದಲ್ಲಿ ಇರುತ್ತವೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:ನಾಯಕತ್ವ ಬದಲಾವಣೆ ಚರ್ಚೆ ಮಧ್ಯೆ ಶ್ರೀರಾಮುಲುಗೆ ಹೈಕಮಾಂಡ್ ಬುಲಾವ್: ಏನಿದು ಹೊಸ ಟ್ವಿಸ್ಟ್?

ಪದವಿಯ ಅಂತಿಮ ವರ್ಷದ ಅಂತಿಮ ಸೆಮಿಸ್ಟರ್ (ಮೂರು ವರ್ಷದ ಪದವಿಗೆ 6ನೇ ಸೆಮಿಸ್ಟರ್‌, ನಾಲ್ಕು ವರ್ಷದ ಪದವಿಗೆ 8ನೇ ಸೆಮಿಸ್ಟರ್) ಪರೀಕ್ಷೆಗಳನ್ನು ನಡೆಸಿ, ನಂತರ ಪ್ರಸ್ತುತ ಸಾಲಿನ ಮಧ್ಯಂತರ ಸಮ ಸಮಸ್ಟರ್‌ (2, 4 ಇತ್ಯಾದಿ) ಫಲಿತಾಂಶವನ್ನು (ಯುಜಿಸಿ 2020ರ ನಿಯಮಗಳನ್ನು ಅನುಸರಿಸಿ) ಪ್ರಕಟಿಸಲು ನಿರ್ಧರಿಸಲಾಗಿದೆ. ಸಮ ಸೆಮಿಸ್ಟರ್‌ಗಳಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 15 ರಿಂದ ಅಂತಿಮ ಸೆಮಿಸ್ಟರ್‌ಗಳಿಗೆ ವಿವರಣಾತ್ಮಕ ಉತ್ತರ ಬರೆಯುವ ವಿಧಾನದಲ್ಲಿ ಪೂರ್ಣ ಪ್ರಮಾಣದಲ್ಲಿ ಪರೀಕ್ಷೆಗಳು ಜರುಗಲಿವೆ ಎಂದರು.

ಮಧ್ಯಂತರ ಸಮ ಸೆಮಿಸ್ಟರ್‌ಗಳಿಗೆ ಸಂಬಂಧಿಸಿದಂತೆ ಆ ಸೆಮಿಸ್ಟರ್ ಗಳ ಅಂತರಿಕ ಅಂಕಗಳು ಹಾಗೂ ಹಿಂದಿನ ಸೆಮಿಸ್ಟರ್‌ ನ ಅಂಶಗಳ ಆಧಾರದ ಮೇಲೆ (ಯುಜಿಸಿ 20200 ನಿಯಮಗಳನ್ವಯ) ಪಲಿತಾಂಶ ಪ್ರಕಟಿಸಲಾಗುವುದು. ಸ್ನಾತಕೋತ್ತರ ಹಂತದಲ್ಲಿ 2ನೇ ಸೆಮಿಸ್ಟರ್ ಅವಧಿಯ ಪರೀಕ್ಷೆ ರದ್ದುಪಡಿಸಲಾಗಿದ್ದು, ಕೇವಲ ಆಂತರಿಕ ಅಂಕ ಮತ್ತು ಹಿಂದಿನ ಸೆಮಿಸ್ಟರ್‌ಗಳ ಅಂಕಗಳ ಆಧಾರದ ಮೇಲೆ ಫಲಿತಾಂಶ ಘೋಷಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಅಂತಿಮ ಸೆಮಿಸ್ಟರ್‌ಗಳಿಗೆ ಬರುವ ಸಪ್ಟೆಂಬರ 15 ರಿಂದ ಪರೀಕ್ಷೆಗಳು ಪಾರಂಭವಾಗಲಿವೆ.  2021-22ರ ಶೈಕ್ಷಣಿಕ ಸಾಲಿನ ಎಲ್ಲಾ ಸ್ನಾತಕ ಮತ್ತು ಸ್ನಾತಕೋತ್ತರ ತರಗತಿಗಳು ಬರುವ ಅಕ್ಟೋಬರ್ ಒಂದರಿಂದ ಪ್ರಾರಂಭಗೊಳ್ಳಲಿದೆ ಎಂದರು.

ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳಲ್ಲಿ ಕೋವಿಡ್ ನಿಯಮಾನುಸಾರ ಮುಂಜಾಗ್ರತಾ ಕ್ರಮ ಜರುಗಿಸಲು ಸೂಚಿಸಿಲಾಗಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಲಸಿಕೆ ಪಡೆದು ತರಗತಿಗಳಿಗೆ ಸೂಚಿಸಲಾಗಿದೆ. 108 ಲಕ್ಷ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಕೋವಿಡ್ ಲಸಿಕೆ ಪಡೆದುಕೊಂಡಿದ್ದು, ‘ಲಸಕೀಕರಣದಲ್ಲಿ ಶೇಕಡಾ 98ರಷ್ಟು ಪ್ರಗತಿ ಸಾಧನೆಯಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವ ಡಾ.ಹನುಮಂತಪ್ಪ, ಕೆ.ಟಿ., ಮೌಲ್ಯಮಾಪನ ಕುಲಸಚಿವರ ಡಾ.ಎಚ್. ನಾಗರಾಜ ಇದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.