![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 24, 2021, 9:40 PM IST
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಕಾಶಿಯಲ್ಲಿರುವ ಗ್ಯಾನ್ವಾಪಿ ಮಸೀದಿಗೆ ಸೇರಿದ ಅದೇ ನಗರದ ಬನ್ಸ್ ಪಾಠಕ್ ಪ್ರಾಂತ್ಯದಲ್ಲಿರುವ 1,000 ಚದರಡಿ ಭೂಮಿಯನ್ನು ಮಸೀದಿಯ ಆಡಳಿತ ಮಂಡಳಿ, ಕಾಶಿ ವಿಶ್ವನಾಥ ದೇಗುಲದ ಕಾರಿಡಾರ್ ಯೋಜನೆಗಾಗಿ ಬಿಟ್ಟುಕೊಟ್ಟಿದೆ.
ಕಾಶಿ ವಿಶ್ವನಾಥ ದೇಗುಲ ಹಾಗೂ ಅದರ ಬಳಿಯಿರುವ ಗ್ಯಾನ್ವಾಪಿ ಮಸೀದಿಯಿರುವ ಭೂಮಿಯ ಒಡೆತನ ಯಾರಿಗೆ ಸೇರಬೇಕೆಂಬ ವಿಚಾರದಲ್ಲಿ ದೇಗುಲದ ಆಡಳಿತ ಮಂಡಳಿ ಹಾಗೂ ಮಸೀದಿಯ ಒಡೆತನ ಹೊಂದಿರುವ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ನಡುವೆ ಕಾನೂನು ಹೋರಾಟ ನಡೆಯುತ್ತಿದ್ದು, ಇದರ ನಡುವೆಯೇ, ಭೂಮಿಯನ್ನು ವಕ್ಫ್ ಮಂಡಳಿ ಯೋಜನೆಗಾಗಿ ನೀಡಿರುವುದು ವಿಶೇಷವೆನಿಸಿದೆ.
ಇದನ್ನೂ ಓದಿ :72.46 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ : ನಾಲ್ವರು ವಿಮಾನ ಸಿಬ್ಬಂದಿ ಸೇರಿ 7 ಮಂದಿ ಸೆರೆ
2019ರಲ್ಲಿ ಕಾಶಿ ದೇಗುಲವನ್ನು ಸುಂದರವಾಗಿಸುವ ಕಾರಿಡಾರ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಆದರೆ, ಕಾರಿಡಾರ್ ಯೋಜನೆ ಅನುಷ್ಠಾನಕ್ಕೆ ಮಸೀದಿಯ ಈ ಭೂಮಿ ಅಗತ್ಯವಾಗಿ ಬೇಕಿತ್ತು. ಇದನ್ನು ಅರ್ಥೈಸಿಕೊಂಡು ವಕ್ಫ್ ಮಂಡಳಿ ಭೂಮಿ ನೀಡಿದೆ ಎನ್ನಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.