ಹಿಪ್ಪರಗಿ ಜಲಾಶಯಕ್ಕೆ 393000 ಕ್ಯೂಸೆಕ್ ನೀರು


Team Udayavani, Jul 26, 2021, 7:44 PM IST

ಹಿಪ್ಪರಗಿ ಜಲಾಶಯಕ್ಕೆ 393000 ಕ್ಯೂಸೆಕ್ ನೀರು

ಬನಹಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿದ್ದರಿಂದ ರಬಕವಿ ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಜಲಾಶಯಕ್ಕೆ ಸೋಮವಾರ ಮಧ್ಯಾಹ್ನ 393000 ಕ್ಯುಸೆಕ್ ಒಳ ಹರಿವು ಇದ್ದು, 392000 ಹೊರ ಹರಿವು ಇದೆ. ನದಿಯಲ್ಲಿ 527 ಮೀಟರ್ ನೀರಿನ ಮಟ್ಟ ದಾಖಲಾಗಿದೆ ಎಂದು ರಬಕವಿ-ಬನಹಟ್ಟಿ ತಹಶೀಲ್ದಾರ್ ಸಂಜಯ ಇಂಗಳೆ ತಿಳಿಸಿದರು.

ರಾಜ್ಯ ಹಾಗೂ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ರಾಜ್ಯದ ನದಿ ಪಾತ್ರದ ಜನರು ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಬಕವಿ-ಬನಹಟ್ಟಿ ಸಮೀಪದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು, ಕೃಷ್ಣಾ ನದಿ ಸಮೀಪದ ಗ್ರಾಮಗಳಲ್ಲಿ ಈಗಾಗಲೇ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಈ ವರ್ಷವೂ ತಾಲೂಕಿನ ಜನರ ಬದುಕು ಛಿದ್ರಗೊಳ್ಳುವ ಆತಂಕ ಎದುರಾಗಿದೆ.

ನಿರಂತರ ಮಳೆ ಹಾಗೂ ಮಹಾರಾಷ್ಟ್ರದ ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಪರಿಣಾಮ ಕೃಷ್ಣಾ ನದಿ ಭೋರ್ಗರೆದು ಹರಿದು ರಬಕವಿ-ಬನಹಟ್ಟಿ ತಾಲೂಕಿನ ಜನರ ನಿದ್ದೆಗೆಡಿಸಿದೆ. ತಾಲೂಕಿನ ಗ್ರಾಮಗಳಲ್ಲಿ ಪ್ರವಾಹ ಭೀತಿ ಶುರುವಾಗಿದ್ದು, ಈಗಾಗಲೇ ಕೆಲವು ಗ್ರಾಮಗಳನ್ನು ನೀರು ಸುತ್ತುವರೆದಿದೆ. ಜೀವ ರಕ್ಷಣೆಗಾಗಿ ಜನರು ಜಾನುವಾರಗಳ ಜತೆ ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ. ಗ್ರಾಮಸ್ಥರಿಗೆ ದಿಕ್ಕು ತೋಚದಂತಾಗಿದೆ.

2019 ರ ಕೃಷ್ಣಾ ನದಿ ಪ್ರವಾಹದಿಂದ ಆಸ್ತಿ ಪಾಸ್ತಿ ಮನೆ ಮಠ ಕಳೆದುಕೊಂಡಿದ್ದ ನೆರೆ ಸಂತ್ರಸ್ತರ ಬದುಕು ಹಸನಾಗುವ ಮುನ್ನವೇ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ನದಿ ಪಾತ್ರದ ಸಾವಿರಾರು ಹೆಕ್ಟರ್ ಕಬ್ಬು ಬೆಳೆ ನಾಶವಾಗಿದೆ. ಕಣ್ಣಾರೆ ಬೆಳೆದ ಬೆಳೆ ನೀರಿನಲ್ಲಿ ಕೊಚ್ಚಿಹೋಗುವುದನ್ನು ಕಂಡು ರೈತರು ಮಮ್ಮಲ ಮರಗುತ್ತಿದ್ದಾರೆ.

ಬೆಳೆಗಳು ಜಲಾವೃತ :  ತಾಲೂಕಿನ ತಮದಡ್ಡಿ, ಹಳಿಂಗಳಿ, ಮದನಮಟ್ಟಿ, ಆಸಂಗಿ, ಅಸ್ಕಿ, ಕುಳ್ಳೋಳ್ಳಿ, ಹಿಪ್ಪರಗಿ ಗ್ರಾಮಗಳ ರೈತರ ಜಮೀನಿಗೆ ನೀರು ನುಗ್ಗಿದ್ದು, ರೈತರು ತಲೆ ಮೇಲೆ ಕೈಹೊತ್ತು ಕುಳಿತು ಕೊಳ್ಳುವಂತಾಗಿದೆ.

ಕೃಷ್ಣಾ ನದಿ ತನ್ನ ವ್ಯಾಪ್ತಿಯನ್ನು ಬಿಟ್ಟು ಅಂದಾಜು ಏಳೆಂಟು ಕಿ.ಮೀ ದೂರದಷ್ಟು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದ್ದಾಳೆ. ಎಲ್ಲೆಡೆ ನೀರನ್ನೇ ಕಾಣಬಹುದಾಗಿದೆ. ಸಾವಿರಾರು ಎಕರೆಯಲ್ಲಿ ಬೆಳೆಯಲಾದ ಕಬ್ಬು, ಅರಿಸಿನ, ಇನ್ನೀತರ ಬೆಳೆಗಳು ಕೃಷ್ಣೆಗೆ ಆಹುತಿಯಾಗಿವೆ.

ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಸಾಂಗ್ಲಿಯಲ್ಲಿ 6 ಫೂಟನಷ್ಟು ಕಡಿಮೆಯಾಗಿದ್ದು, ಕಲ್ಲೋಳನಲ್ಲಿ ಸ್ಥಿರವಾಗಿದ್ದು, ನಮ್ಮಲ್ಲಿ ಸ್ವಲ್ಪ ಮಾತ್ರ ಜಾಸ್ತಿ ಆಗಬಹುದು ಆದರೆ ನಾಳೆ ಮಧ್ಯಾಹ್ನದ ವೇಳೆಗೆ ನಮ್ಮಲ್ಲಿಯೂ ಇಳಿಕೆ ಕಾಣಲಿದೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ತೊಂದರೆಗೆ ಸಿಲುಕುವ ಕುಟುಂಬಗಳನ್ನು ಸ್ಥಳಾಂತರಿಸಿ ಕಾಳಜಿ ಕೇಂದ್ರಗಳಿಗೆ ಕಳುಹಿಲಾಗುತ್ತಿದೆ. ಎಲ್ಲ ವ್ಯವಸ್ಥೆಯನ್ನು ನಮ್ಮ ನೋಡಲ ಅಧಿಕಾರಿಗಳ ತಂಡ ಮಾಡುತ್ತಿದೆ.ಸಂಜಯ ಇಂಗಳೆ ತಹಶೀಲ್ದಾರರು, ರಬಕವಿಬನಹಟ್ಟಿ  

 

ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.