ಬಿಎಸ್‌ವೈ ಕಣ್ಣೀರು ಒರೆಸಿದ ವರಿಷ್ಠರು


Team Udayavani, Jul 28, 2021, 6:40 AM IST

ಬಿಎಸ್‌ವೈ ಕಣ್ಣೀರು ಒರೆಸಿದ ವರಿಷ್ಠರು

ಬೆಂಗಳೂರು: “ವಯಸ್ಸಿನ’ ಅಧಿಕೃತ ಕಾರಣಕ್ಕೆ ಸಿಎಂ ಪದವಿಯನ್ನು ತ್ಯಾಗ ಮಾಡಿದ ಯಡಿಯೂರಪ್ಪ, ತಮ್ಮ ಸರಕಾರದ ದ್ವಿತೀಯ ವರ್ಷದ ಸಮಾರಂಭದಲ್ಲೇ ವಿದಾಯವನ್ನೂ ಹೇಳಬೇಕಾಗಿ ಬಂತು. ವಿದಾಯ ಭಾಷಣದಲ್ಲಿ  ತಾವು ಏಕಾಂಗಿಯಾಗಿ ಪಕ್ಷ ಕಟ್ಟಿದ ಸಂದರ್ಭ, ಎದುರಿಸಿದ ಹಲವಾರು ಅಗ್ನಿಪರೀಕ್ಷೆಗಳನ್ನು ವಿವರಿಸುತ್ತಲೇ ಅವರ ದುಃಖ ಉಮ್ಮಳಿಸಿತು. ಕಣ್ಣೀರನ್ನು ಸುರಿಸುತ್ತಲೇ “ಎಲ್ಲರ  ಒಪ್ಪಿಗೆ ಪಡೆದು’ ರಾಜೀನಾಮೆ ಘೋಷಣೆ ಮಾಡಿದರು.

ಈಗ ರಾಜ್ಯ ಬಿಜೆಪಿಯಲ್ಲಿ ಪಿತೃ ಸ್ಥಾನ ದಲ್ಲಿರುವ ಯಡಿಯೂರಪ್ಪ  ಹರಿಸಿದ ಕಣ್ಣೀರು ರಾಜ್ಯ ರಾಜಕಾರಣ ದಲ್ಲಿ  ಅಪಾರ್ಥ ಸಂದೇಶ ರವಾ ನಿಸುವ ಸಾಧ್ಯತೆ ದಟ್ಟವಾಗಿತ್ತು.  ಪಕ್ಷದ ಕಾರ್ಯಕರ್ತರಲ್ಲಿ, ಅವರ ಹಿಂದೆ ಇರುವ ಪ್ರಬಲ ಲಿಂಗಾ ಯತ ಸಮುದಾಯದಲ್ಲಿ  ಹರಡ ಬಹುದಾಗಿದ್ದ ಋಣಾತ್ಮಕತೆ. ಅವು ಗಳೆಲ್ಲಕ್ಕಿಂತ ಹೆಚ್ಚಾಗಿ ಯಡಿಯೂರಪ್ಪ ಸ್ಥಿತ್ಯಂತರವನ್ನು ಕಾಂಗ್ರೆಸ್‌ ಬಳಸಿ ಕೊಳ್ಳುವ ಸಾಧ್ಯತೆ ಬಹುತೇಕ ಹೆಚ್ಚಿತ್ತು. ಜತೆಗೆ, ಮುಂದಿನ ವಿಧಾನಸಭೆ ಚುನಾವಣೆ ಮಾತ್ರವಲ್ಲದೆ ಲೋಕಸಭೆ ಚುನಾವಣೆಯನ್ನೂ ಎದುರಿಸ ಬೇಕಾದಾಗ ಯಡಿಯೂರಪ್ಪ ಅವರ ಅಗತ್ಯತೆ ಇವೆಲ್ಲವನ್ನೂ ಮನಗಂಡ ಬಿಜೆಪಿ ವರಿಷ್ಠರು ಯಡಿಯೂರಪ್ಪ ಅವರಿಗೆ ಮನ್ನಣೆ ನೀಡಿರುವುದು ವೇದ್ಯವಾಗುತ್ತದೆ.  ಜತೆಗೆ, ಯಡಿ ಯೂರಪ್ಪ ಅವರ  ಅಧಿಕಾರ ತ್ಯಾಗದ ಸಂದರ್ಭದ ಭಾವುಕ ಕಣ್ಣೀರನ್ನು ಒರೆಸುವ ಉದ್ದೇಶವೂ ವರಿಷ್ಠರಿಗೆ  ಇರುವಂತಿದೆ.

ಹಾಗಾಗಿ ಯಡಿಯೂರಪ್ಪ ಅವರ ಕಣ್ಣೀರಿನ ಗಂಭೀರ ಸಂದೇಶಕ್ಕೆ ಅವರ ಕಣ್ಣೀರು ಒರೆಸುವ ಸಂದೇಶದ ಮೂಲಕ ಪ್ರಮುಖವಾಗಿ ಲಿಂಗಾಯಿತ ಸಮುದಾಯವನ್ನು ಸಮಾಧಾನಿಸುವ ಮತ್ತು ಯಡಿ ಯೂರಪ್ಪ ಅವರ ಮಾತಿಗೆ ಮಣೆ ಹಾಕಿದೆ. ಆ  ಮೂಲಕ ಅವರ ಅಧಿಕಾರ ರಾಜಕಾರಣಕ್ಕೆ ಗೌರವಯುತವಾಗಿ ವಿದಾಯ ಹೇಳುವ ನಿರ್ಧಾರಕ್ಕೆ ಬಿಜೆಪಿ ಬಂದಿರುವ ಸಾಧ್ಯತೆಯಿದೆ. ಶಾಸಕಾಂಗ ಪಕ್ಷ ಸಭೆಯಲ್ಲಿ ಯಡಿಯೂರಪ್ಪ ಅವರ ಮೂಲಕವೇ ಮುಂದಿನ ಮುಖ್ಯಮಂತ್ರಿ ಹೆಸರನ್ನು ಸೂಚಿಸುವಂತೆ ಮಾಡಿ ಅವರ ಆಪ್ತನನ್ನೇ ಮುಖ್ಯಮಂತ್ರಿ ಮಾಡುವ ಮೂಲಕ ಜಾಣ್ಮೆಯ ಸಂದೇಶ ರವಾನಿಸಿದೆ.

ಖಡಕ್‌ ಸಂದೇಶ?:

ಏನಿದ್ದರೂ, ಯಡಿಯೂರಪ್ಪ ತಮ್ಮ ವಿದಾಯದಲ್ಲೂ ರಾಜಕೀಯವಾಗಿ ಮತ್ತಷ್ಟು ಶಕ್ತಿಯುತವಾಗಿ ಹೊರ ಹೊಮ್ಮುವ ಲಕ್ಷಣ ತೋರಿಸಿದ್ದಾರೆ. ತಮ್ಮ ಆಪ್ತನನ್ನೇ ಮುಖ್ಯಮಂತ್ರಿಯಾಗಿಸುವ ಮೂಲಕ ತಮ್ಮ ವಿರೋಧಿ ಬಣದ ನಾಯಕರಿಗೂ ಖಡಕ್‌ ಸಂದೇಶ ನೀಡಿದ್ದಾರೆ. ಅವರ ಪದಚ್ಯುತಿಗೆ ಕಾರಣರಾದ ರಾಜಕೀಯ ನಾಯಕರು ಒಳದಾರಿಯಿಂದ ಸಿಎಂ ಪದವಿಯತ್ತ ಬರುವುದನ್ನು ತಡೆದಿದ್ದಾರೆ.

ಅವರ ರಾಜಕೀಯ ಅನುಭವದ ಅಗಾಧತೆ ಮುಂದೆ ಚಿಕ್ಕವರಾಗಿದ್ದರೂ, ವಿರುದ್ಧ ಮಾತನಾಡಿದ ಕೆಲ ನಾಯಕರಿಗೆ  ಮಾತಿನೇಟು ನೀಡದೆ, ರಾಜಕೀಯ ಪೆಟ್ಟಿನ ಮೂಲಕ ಆಘಾತ ನೀಡಿರುವುದನ್ನು ಗಮನಿಸಬೇಕಿದೆ.

ಆದರೆ ಪಕ್ಷದ ಕೇಂದ್ರ ನಾಯ ಕರೂ ಮುಂದಿನ ರಾಜಕೀಯ ನಡಾವಳಿಗಳನ್ನು ಖಂಡಿತ ಹತ್ತಿರ ದಿಂದ ನೋಡಲಿದ್ದಾರೆ. ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ತಮ್ಮ ಪಕ್ಷದ ನಿಲುವಿಗೆ ತಕ್ಕಂತೆ ರೂಪಿಸುವ ಸಾಧ್ಯತೆ ಹೆಚ್ಚಿದೆ. ಜನತಾ ಪರಿವಾರ ದಿಂದ ಬಂದ ಬೊಮ್ಮಾಯಿ, ಸಮಾಜವಾದಿ ನಾಯಕರ ಗರಡಿ ಯಲ್ಲಿ ಪಳಗಿದವರು. ಈಗ ಬಿಜೆಪಿ ಮುಖ್ಯಮಂತ್ರಿಯಾಗಿರುವ ಅವರನ್ನು ತನ್ನ ಪಕ್ಷದ ಚೌಕಟ್ಟಿನಲ್ಲಿ ಹೇಗೆ ತನ್ನ ಮುಂದಿನ ನಾಯಕನಾಗಿ ರೂಪಿಸುತ್ತದೆ ಮತ್ತು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ಬರುವಂತೆ ಹೇಗೆ ನೋಡಿಕೊಳ್ಳುತ್ತಾರೆ ಎನ್ನುವುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

 

-ನವೀನ್‌ ಅಮ್ಮೆಂಬಳ

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.