![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Jul 29, 2021, 7:44 PM IST
ಕಲಬುರಗಿ: ಕಲ್ಯಾಣ ಕರ್ನಾಟಕದ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ) ಯ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದಕ್ಕಾಗಿ ಮಂಡಳಿಯ ಅಧ್ಯಕ್ಷರಾಗಿರುವ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಕೃತಜ್ಞತೆ ಸಲ್ಲಿಸಿದ್ದು, ಮಂಡಳಿಗೆ ಹೊಸ ಅಧ್ಯಕ್ಷರನ್ನು ಸಿಎಂ ನೇಮಕ ಮಾಡಿ ಆದೇಶಿಸಬಹುದು ಎಂದಿದ್ದಾರೆ.
ಮಂಡಳಿಯ ಅಧ್ಯಕ್ಷರಾಗಿ ಒಂದು ವರ್ಷ ಆಡಳಿತ ನಿಭಾಯಿಸಿರುವುದು ತೃಪ್ತಿ ತಂದಿದೆ. ಬಹು ಮುಖ್ಯವಾಗಿ ಮಂಡಳಿಯ ನಿಯಮದಂತೆ ಅಧ್ಯಕ್ಷರ ಅವಧಿ ಒಂದು ವರ್ಷ ಮಾತ್ರ ಇದ್ದು, ಕಳೆಸ 2020ರ ಆಗಸ್ಟ್ 3ರಂದು ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವುದಾಗಿ ಅಪ್ಪುಗೌಡ ತಿಳಿಸಿದ್ದಾರೆ.
ಸಚಿವ ಸ್ಥಾನ ಹಾದಿ ಸುಗಮವೇ?:
ಕಳೆದ ವರ್ಷ ಆಗಿನ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ತದನಂತರ ಕೊವಿಡ್ ಸಂದರ್ಭದಲ್ಲಿ ಮಂಡಳಿ ವ್ಯಾಪ್ತಿಯಲ್ಲಿ ತಿರುಗಾಡಿ ಸಭೆ ನಡೆಸಿ ಜಿಲ್ಲೆಗಳಿಗೆ ಬೇಕಾಗಿರುವ ಅಗತ್ಯ ವೈದ್ಯಕೀಯ ಸಲಕರಣೆಗಳನ್ನು ನೀಡಿದ್ದಲ್ಲದೇ ಚಿಕಿತ್ಸೆ ಸಲುವಾಗಿ ಅಗತ್ಯ ಅನುದಾನ ಸಹ ನೀಡಲಾಗಿದೆ. ಒಟ್ಟಾರೆ ಅಧಿಕಾರಿಗಳು, ಜನಪ್ರತಿನಿಧಿಗಳು ಸಹಕಾರ ನೀಡಿದ್ದಾರೆ. ಒಟ್ಟಾರೆ ಒಂದು ವರ್ಷದ ಮಂಡಳಿಯ ಕಾರ್ಯಭಾರ ತೃಪ್ತಿ ತಂದಿದ್ದಾರೆ ಎಂದಿದ್ದಾರೆ.
ಒಂದು ವರ್ಷದ ಅವಧಿ ಮುಗಿದಿದೆ ಎಂಬುದಾಗಿ ಹೇಳಿದ್ದಲ್ಲದೇ ಕೃತಜ್ಞತೆ ಸಲ್ಲಿಸಿರುವುದು ಜತೆಗೆ ನೂತನ ಸಿಎಂ ಬೇರೆಯವರನ್ನು ಅದ್ಯಕ್ಷ ರನ್ನು ನೇಮಕ ಮಾಡುವರು ಎಂದು ಹೇಳುವ ಮೂಲಕ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂಬ ಸಂದೇಶ ಈ ಮೂಲಕ ತಿಳಿಸಿರುವುದು ಸ್ಪಷ್ಟ ಪಡಿಸುತ್ತದೆ. ಬಹು ಮುಖ್ಯವಾಗಿ ಹೀಗೆ ಹೇಳುವ ಮೂಲಕ ಸಚಿವ ಸ್ಥಾನದ ಹಾದಿ ಸುಗಮವಾಗಿದೆ ಎಂಬುದನ್ನು ವರಿಷ್ಠರಿಗೆ ತಿಳಿಸಲು ಹೇಳಿಕೆ ನೀಡಿದ್ದಾರೆನ್ನಲಾಗುತ್ತಿದೆ.
ಕಳೆದ ವರ್ಷ ಹೊರಡಿಸಲಾದ ಕೆಕೆಆರ್ ಡಿಬಿ ಅಧ್ಯಕ್ಷರ ನೇಮಕದ ಆದೇಶವು ಮುಂದಿನ ಆದೇಶ ವರೆಗೆ ಎಂಬುದಾಗಿದೆ. ಹೊಸದಾಗಿ ನೇಮಕವಾಗುವರೆಗೂ ದತ್ತಾತ್ರೇಯ ಪಾಟೀಲ್ ಮುಂದುವರೆಯಲಿದ್ದಾರೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.